<p><strong>ವಿಟ್ಲ: </strong>‘ಪ್ರಕೃತಿಯ ಉಳಿವು ನಮ್ಮಿಂದಲೇ ಆಗಬೇಕು. ಅಕೇಶಿಯಾ ಮಕ್ತ ಕಾಡಿನ ನಿರ್ಮಾಣ ಮಾಡಬೇಕೆಂಬ ಇಚ್ಛೆ ಇದೆ. ಹಣ್ಣು–ಹಂಪಲಿನ ಗಿಡಗಳನ್ನು ನೆಟ್ಟರೆ ಪ್ರಾಣಿ–ಪಕ್ಷಿಗಳಿಗೆ ಆಹಾರವಾಗುತ್ತದೆ. ಔಷಧ ಗಿಡಗಳನ್ನು ಬೆಳೆಸುವ ಯೋಚನೆ ಇದೆ’ ಎಂದು ಒಡಿಯೂರು ಗುರುದೇವದತ್ತ ಸಂಸ್ಥಾನದ ಗುರುದೇವಾನಂದ ಸ್ವಾಮೀಜಿ ಹೇಳಿದರು.</p>.<p>ಶ್ರೀಗಳ ಷಷ್ಠ್ಯಬ್ಧಿ ಸಂಭ್ರಮದ ಪ್ರಯುಕ್ತ ಗುರುವಾರ ಮಠದಲ್ಲಿ ನಡೆದ ‘ಮನೆಗೊಂದು ಶ್ರೀಗಂಧದ ಗಿಡ ಬೆಳೆಯೋಣ’ ಯೋಜನೆಯ ಆರಂಭೋತ್ಸವದಲ್ಲಿ ಅವರು ಆಶೀರ್ವಚನ ನೀಡಿದರು.</p>.<p>ಪರಿಸರ ಹಸಿರಾಗಿದ್ದರೆ ಉತ್ತಮ ಗಾಳಿ ಸಿಗಲು ಸಾಧ್ಯ. ಸಾಧಕನಿಗೆ ಹುಟ್ಟಿದ ದಿನದ ಆಚರಣೆಯ ಅಗತ್ಯವಿಲ್ಲ. ಆ ದಿನದ ನೆಪದಲ್ಲಿ ಸಮಾಜಕ್ಕೆ ಕೊಡುಗೆ ನೀಡುವಂತಾಗಬೇಕು. ಅದರಂತೆಯೇ ಸಮಿತಿಗಳ ರಚನೆಯಾಗಿದ್ದು, ಸಮಾಜಮುಖಿ ಕಾರ್ಯಗಳು ನಡೆಯುತ್ತಿವೆ ಎಂದು ಹೇಳಿದರು.</p>.<p>ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಮಾತನಾಡಿ ‘ಕೋವಿಡ್ ಕಾರಣಕ್ಕೆ ಸ್ವಾಮೀಜಿ ಷಷ್ಠ್ಯಬ್ಧಿ ಕಾರ್ಯಕ್ರಮಕ್ಕೆ ತಡೆ ಆಯಿತು. ಕೋವಿಡ್ ನಿಯಮ ಪಾಲನೆಯೊಂದಿಗೆ ಮುಂದಿನ ದಿನಗಳಲ್ಲಿ ಕೆಲವು ಕಾರ್ಯಕ್ರಮ ನಡೆಯಲಿದೆ. ಆಮ್ಲಜನಕಕ್ಕೆ ಜನರು ಪರಿತಪಿಸುವ ಕಾಲಘಟ್ಟ ಇದಾಗಿದೆ. ಈ ಸಂದರ್ಭದಲ್ಲಿ ಸಂಸ್ಥಾನದಿಂದ ಗಿಡ ನೆಡುವ ಕಾರ್ಯಕ್ರಮ ಆಯೋಜಿಸಿರುವುದು ಉತ್ತಮ ಬೆಳವಣಿಗೆ’ ಎಂದರು.</p>.<p>ಪುತ್ತೂರು ಶಾಸಕ ಸಂಜೀವ ಮಠಂದೂರು ಮಾತನಾಡಿ, ‘ಶ್ರೀಗಂಧದಬೀಡು ಈ ತುಳು ನಾಡಾಗಬೇಕೆಂಬುದು ಸ್ವಾಮೀಜಿ ಇಚ್ಛೆಯಾಗಿದೆ. ನಾವು ಪ್ರಕೃತಿಯೊಂದಿಗೆ ಬದುಕುವುದನ್ನು ಕಲಿಯಬೇಕು’ ಎಂದರು.</p>.<p>ವೇದಿಕೆಯಲ್ಲಿ ಸಾಧ್ವಿ ಮಾತಾ ನಂದಮಯಿ, ಮಂಗಳೂರು ವಲಯ ಅರಣ್ಯಾಧಿಕಾರಿ ಶ್ರೀಧರ್, ಪುತ್ತೂರು ವಲಯ ಅರಣ್ಯಾಧಿಕಾರಿ ಸುಬ್ಬಯ್ಯ ನಾಯ್ಕ್, ಬಂಟ್ವಾಳ ವಲಯ ಅರಣ್ಯಾಧಿಕಾರಿ ರಾಜೇಶ್ ಬಳೆಗಾರ್, ಬಂಟ್ವಾಳ ಸಾಮಾಜಿಕ ಅರಣ್ಯಾಧಿಕಾರಿ ರವಿಕುಮಾರ್ ಉಪಸ್ಥಿತರಿದ್ದರು.</p>.<p>ಸಂತೋಷ್ ಕುಮಾರ್ ಭಂಡಾರಿ ಪ್ರಾರ್ಥಿಸಿದರು. ಕೇಂದ್ರ ಸಮಿತಿ ಕಾರ್ಯಾಧ್ಯಕ್ಷ ಪದ್ಮನಾಭ ಕೊಟ್ಟಾರಿ ಸ್ವಾಗತಿಸಿದರು. ಯಶವಂತ ವಿಟ್ಲ ಹಾಗೂ ನವನೀತ ಶೆಟ್ಟಿ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಟ್ಲ: </strong>‘ಪ್ರಕೃತಿಯ ಉಳಿವು ನಮ್ಮಿಂದಲೇ ಆಗಬೇಕು. ಅಕೇಶಿಯಾ ಮಕ್ತ ಕಾಡಿನ ನಿರ್ಮಾಣ ಮಾಡಬೇಕೆಂಬ ಇಚ್ಛೆ ಇದೆ. ಹಣ್ಣು–ಹಂಪಲಿನ ಗಿಡಗಳನ್ನು ನೆಟ್ಟರೆ ಪ್ರಾಣಿ–ಪಕ್ಷಿಗಳಿಗೆ ಆಹಾರವಾಗುತ್ತದೆ. ಔಷಧ ಗಿಡಗಳನ್ನು ಬೆಳೆಸುವ ಯೋಚನೆ ಇದೆ’ ಎಂದು ಒಡಿಯೂರು ಗುರುದೇವದತ್ತ ಸಂಸ್ಥಾನದ ಗುರುದೇವಾನಂದ ಸ್ವಾಮೀಜಿ ಹೇಳಿದರು.</p>.<p>ಶ್ರೀಗಳ ಷಷ್ಠ್ಯಬ್ಧಿ ಸಂಭ್ರಮದ ಪ್ರಯುಕ್ತ ಗುರುವಾರ ಮಠದಲ್ಲಿ ನಡೆದ ‘ಮನೆಗೊಂದು ಶ್ರೀಗಂಧದ ಗಿಡ ಬೆಳೆಯೋಣ’ ಯೋಜನೆಯ ಆರಂಭೋತ್ಸವದಲ್ಲಿ ಅವರು ಆಶೀರ್ವಚನ ನೀಡಿದರು.</p>.<p>ಪರಿಸರ ಹಸಿರಾಗಿದ್ದರೆ ಉತ್ತಮ ಗಾಳಿ ಸಿಗಲು ಸಾಧ್ಯ. ಸಾಧಕನಿಗೆ ಹುಟ್ಟಿದ ದಿನದ ಆಚರಣೆಯ ಅಗತ್ಯವಿಲ್ಲ. ಆ ದಿನದ ನೆಪದಲ್ಲಿ ಸಮಾಜಕ್ಕೆ ಕೊಡುಗೆ ನೀಡುವಂತಾಗಬೇಕು. ಅದರಂತೆಯೇ ಸಮಿತಿಗಳ ರಚನೆಯಾಗಿದ್ದು, ಸಮಾಜಮುಖಿ ಕಾರ್ಯಗಳು ನಡೆಯುತ್ತಿವೆ ಎಂದು ಹೇಳಿದರು.</p>.<p>ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಮಾತನಾಡಿ ‘ಕೋವಿಡ್ ಕಾರಣಕ್ಕೆ ಸ್ವಾಮೀಜಿ ಷಷ್ಠ್ಯಬ್ಧಿ ಕಾರ್ಯಕ್ರಮಕ್ಕೆ ತಡೆ ಆಯಿತು. ಕೋವಿಡ್ ನಿಯಮ ಪಾಲನೆಯೊಂದಿಗೆ ಮುಂದಿನ ದಿನಗಳಲ್ಲಿ ಕೆಲವು ಕಾರ್ಯಕ್ರಮ ನಡೆಯಲಿದೆ. ಆಮ್ಲಜನಕಕ್ಕೆ ಜನರು ಪರಿತಪಿಸುವ ಕಾಲಘಟ್ಟ ಇದಾಗಿದೆ. ಈ ಸಂದರ್ಭದಲ್ಲಿ ಸಂಸ್ಥಾನದಿಂದ ಗಿಡ ನೆಡುವ ಕಾರ್ಯಕ್ರಮ ಆಯೋಜಿಸಿರುವುದು ಉತ್ತಮ ಬೆಳವಣಿಗೆ’ ಎಂದರು.</p>.<p>ಪುತ್ತೂರು ಶಾಸಕ ಸಂಜೀವ ಮಠಂದೂರು ಮಾತನಾಡಿ, ‘ಶ್ರೀಗಂಧದಬೀಡು ಈ ತುಳು ನಾಡಾಗಬೇಕೆಂಬುದು ಸ್ವಾಮೀಜಿ ಇಚ್ಛೆಯಾಗಿದೆ. ನಾವು ಪ್ರಕೃತಿಯೊಂದಿಗೆ ಬದುಕುವುದನ್ನು ಕಲಿಯಬೇಕು’ ಎಂದರು.</p>.<p>ವೇದಿಕೆಯಲ್ಲಿ ಸಾಧ್ವಿ ಮಾತಾ ನಂದಮಯಿ, ಮಂಗಳೂರು ವಲಯ ಅರಣ್ಯಾಧಿಕಾರಿ ಶ್ರೀಧರ್, ಪುತ್ತೂರು ವಲಯ ಅರಣ್ಯಾಧಿಕಾರಿ ಸುಬ್ಬಯ್ಯ ನಾಯ್ಕ್, ಬಂಟ್ವಾಳ ವಲಯ ಅರಣ್ಯಾಧಿಕಾರಿ ರಾಜೇಶ್ ಬಳೆಗಾರ್, ಬಂಟ್ವಾಳ ಸಾಮಾಜಿಕ ಅರಣ್ಯಾಧಿಕಾರಿ ರವಿಕುಮಾರ್ ಉಪಸ್ಥಿತರಿದ್ದರು.</p>.<p>ಸಂತೋಷ್ ಕುಮಾರ್ ಭಂಡಾರಿ ಪ್ರಾರ್ಥಿಸಿದರು. ಕೇಂದ್ರ ಸಮಿತಿ ಕಾರ್ಯಾಧ್ಯಕ್ಷ ಪದ್ಮನಾಭ ಕೊಟ್ಟಾರಿ ಸ್ವಾಗತಿಸಿದರು. ಯಶವಂತ ವಿಟ್ಲ ಹಾಗೂ ನವನೀತ ಶೆಟ್ಟಿ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>