ಈ ಕುರಿತು ಇಲ್ಲಿ ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾಹಿತಿ ನೀಡಿದ ಪ್ರತಿಷ್ಠಾನದ ಟ್ರಸ್ಟಿ ರಾಯ್ ಕ್ಯಾಸ್ಟಲಿನೊ, ‘ಸಂದೇಶ ಕನ್ನಡ ಸಾಹಿತ್ಯ ಪ್ರಶಸ್ತಿಗೆ ರಾಘವೇಂದ್ರ ಪಾಟೀಲ, ಕೊಂಕಣಿ ಸಾಹಿತ್ಯ ಪ್ರಶಸ್ತಿಗೆ ಆಂಡ್ರ್ಯೂ ಎಲ್. ಡಿಕುನ್ಹ, ತುಳು ಸಾಹಿತ್ಯ ಪ್ರಶಸ್ತಿಗೆ ಡಾ.ಕೆ.ಚಿನ್ನಪ್ಪ ಗೌಡ, ಮಾಧ್ಯಮ ಪ್ರಶಸ್ತಿಗೆ ಶಿವಾಜಿ ಗಣೇಶನ್, ಕೊಂಕಣಿ ಸಂಗೀತ ಪ್ರಶಸ್ತಿಗೆ ಜಾಯ್ಸ್ ಒಝಾರಿಯೊ, ಕಲಾ ಪ್ರಶಸ್ತಿಗೆ ಡಾ.ಎಂ.ಎಸ್. ಮೂರ್ತಿ, ಶಿಕ್ಷಣ ಪ್ರಶಸ್ತಿಗೆ ಕೋಟಿಗಾನಹಳ್ಳಿ ರಾಮಯ್ಯ, ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿಗೆ ಸಬೀಹಾ ಭೂಮಿಗೌಡ ಅವರನ್ನು ಆಯ್ಕೆ ಮಾಡಲಾಗಿದೆ. ಪ್ರೇರಣಾ ರಿಸೋರ್ಸ್ ಸೆಂಟರ್ಗೆ ವಿಶೇಷ ಪ್ರಶಸ್ತಿ ನೀಡಲಾಗುತ್ತದೆ’ ಎಂದು ತಿಳಿಸಿದರು.