<p><strong>ಮಂಗಳೂರು</strong>: ರಾಜ್ಯ ಸರ್ಕಾರವು ಸ್ವ ಸಹಾಯ ಗುಂಪುಗಳಿಗೆ ಸಮುದಾಯ ಸುತ್ತುನಿಧಿ ಒದಗಿಸುವ ಮೂಲಕ ಮಹಿಳೆಯರ ಆರ್ಥಿಕ ಸಶಕ್ತೀಕರಣಕ್ಕೆ ನೆರವಾಗುತ್ತಿದೆ ಎಂದು ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ. ಶರಣ ಪ್ರಕಾಶ ಪಾಟೀಲ ಹೇಳಿದರು. </p><p>ನಗರದ ಕರಾವಳಿ ಉತ್ಸವ ಮೈದಾನದಲ್ಲಿ ಆಯೋಜಿರುವ ಎಂಟು ದಿನಗಳ ರಾಷ್ಟ್ರಮಟ್ಟದ 'ಸರಸ್ ಮೇಳ' ಸ್ವ–ಸಹಾಯ ಗುಂಪಿನ ಮಹಿಳೆಯರು ತಯಾರಿಸಿದ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟ ಮೇಳಕ್ಕೆ ಶುಕ್ರವಾರ ಚಾಲನೆ ನೀಡಿ ಅವರು ಮಾತನಾಡಿದರು.</p><p>ರಾಜ್ಯ ರಾಜಧಾನಿಗೆ ಸೀಮಿತವಾಗಿದ್ದ ಮೇಳವನ್ನು ಬೇರೆ ಜಿಲ್ಲೆಗಳಲ್ಲೂ ನಡೆಸಬೇಕು ಎಂಬ ಉದ್ದೇಶದಿಂದ ಕಳೆದ ವರ್ಷ ಕಲಬುರಗಿಯಲ್ಲಿ ಆಯೋಜಿಸಲಾಗಿತ್ತು. ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಗೆ ಅವಕಾಶ ನೀಡಲಾಗಿದೆ ಎಂದರು. </p><p>ಗ್ರಾಮೀಣ ಜನರ ಜೀವನ ಮಟ್ಟ ಸುಧಾರಣೆ ಆಗಬೇಕಾದರೆ ಮಹಿಳಾ ಸಬಲೀಕರಣ ಮೊದಲು ಆಗಬೇಕು. ಈ ಪರಿಕಲ್ಪನೆಯಲ್ಲಿ ರಚನೆ ಯಾಗಿರುವ ಸ್ವ ಸಹಾಯ ಸಂಘಗಳಿಗೆ ಅನುಕೂಲವಾಗುವ ಸಾಕಷ್ಟು ಯೋಜನೆಗಳನ್ನು ಸರ್ಕಾರ ಜಾರಿಗೆ ತಂದಿದೆ. ಸಮುದಾಯ ಸುತ್ತು ನಿಧಿ ಅಡಿಯಲ್ಲಿ ರಾಜ್ಯದ ಸುಮಾರು 5 ಸಾವಿರ ಸ್ವ ಸಹಾಯ ಗುಂಪುಗಳಿಗೆ ನೆರವು ನೀಡಲಾಗುತ್ತಿದೆ. ಸಮುದಾಯ ಸುತ್ತುನಿಧಿಯಡಿ ದಕ್ಷಿಣ ಕನ್ನಡ ಜಿಲ್ಲೆಗೆ ಅಂದಾಜು ₹70 ಕೋಟಿ ನೆರವು ನೀಡಲಾಗಿದೆ ಎಂದರು. </p><p>ಸ್ಪೀಕರ್ ಯು.ಟಿ. ಖಾದರ್, ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕ ವೇದವ್ಯಾಸ ಕಾಮತ್ ಉಪಸ್ಥಿತರಿದ್ದರು. </p><p>ಅಸ್ಸಾಂ, ತೆಲಂಗಾಣ, ಆಂಧ್ರಪ್ರದೇಶ, ಒಡಿಶಾ ಸೇರಿದಂತೆ 16 ರಾಜ್ಯಗಳ ಸ್ವ ಸಹಾಯ ಸಂಘಗಳು, ಕರ್ನಾಟಕದ ಬೇರೆ ಬೇರೆ ಜಿಲ್ಲೆಗಳ ಸ್ವ ಸಹಾಯ ಗುಂಪುಗಳ ಮಹಿಳೆಯರು ಮೇಳದಲ್ಲಿ ಭಾಗವಹಿಸಿದ್ದಾರೆ. 120ಕ್ಕೂ ಹೆಚ್ಚು ಮಳಿಗೆಗಳು, 30ಕ್ಕೂ ಅಧಿಕ ಆಹಾರ ಮಳಿಗೆಗಳು ಮೇಳದಲ್ಲಿವೆ</p><p> ಫೆ. 28 ರವರೆಗೆ ಮೇಳ ನಡೆಯಲಿದೆ. </p><p>ಅಕ್ಕ ಕೆಫೆಯ ಮಹಿಳೆಯರು ಸ್ಥಳದಲ್ಲೇ ವಿವಿಧ ಬಗೆಯ ತಿನಿಸುಗಳನ್ನು ತಯಾರಿಸಿ ಕೊಡುತ್ತಿದ್ದು, ಗ್ರಾಹಕರು ಖುಷಿಯಿಂದ ಖರೀದಿಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ರಾಜ್ಯ ಸರ್ಕಾರವು ಸ್ವ ಸಹಾಯ ಗುಂಪುಗಳಿಗೆ ಸಮುದಾಯ ಸುತ್ತುನಿಧಿ ಒದಗಿಸುವ ಮೂಲಕ ಮಹಿಳೆಯರ ಆರ್ಥಿಕ ಸಶಕ್ತೀಕರಣಕ್ಕೆ ನೆರವಾಗುತ್ತಿದೆ ಎಂದು ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ. ಶರಣ ಪ್ರಕಾಶ ಪಾಟೀಲ ಹೇಳಿದರು. </p><p>ನಗರದ ಕರಾವಳಿ ಉತ್ಸವ ಮೈದಾನದಲ್ಲಿ ಆಯೋಜಿರುವ ಎಂಟು ದಿನಗಳ ರಾಷ್ಟ್ರಮಟ್ಟದ 'ಸರಸ್ ಮೇಳ' ಸ್ವ–ಸಹಾಯ ಗುಂಪಿನ ಮಹಿಳೆಯರು ತಯಾರಿಸಿದ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟ ಮೇಳಕ್ಕೆ ಶುಕ್ರವಾರ ಚಾಲನೆ ನೀಡಿ ಅವರು ಮಾತನಾಡಿದರು.</p><p>ರಾಜ್ಯ ರಾಜಧಾನಿಗೆ ಸೀಮಿತವಾಗಿದ್ದ ಮೇಳವನ್ನು ಬೇರೆ ಜಿಲ್ಲೆಗಳಲ್ಲೂ ನಡೆಸಬೇಕು ಎಂಬ ಉದ್ದೇಶದಿಂದ ಕಳೆದ ವರ್ಷ ಕಲಬುರಗಿಯಲ್ಲಿ ಆಯೋಜಿಸಲಾಗಿತ್ತು. ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಗೆ ಅವಕಾಶ ನೀಡಲಾಗಿದೆ ಎಂದರು. </p><p>ಗ್ರಾಮೀಣ ಜನರ ಜೀವನ ಮಟ್ಟ ಸುಧಾರಣೆ ಆಗಬೇಕಾದರೆ ಮಹಿಳಾ ಸಬಲೀಕರಣ ಮೊದಲು ಆಗಬೇಕು. ಈ ಪರಿಕಲ್ಪನೆಯಲ್ಲಿ ರಚನೆ ಯಾಗಿರುವ ಸ್ವ ಸಹಾಯ ಸಂಘಗಳಿಗೆ ಅನುಕೂಲವಾಗುವ ಸಾಕಷ್ಟು ಯೋಜನೆಗಳನ್ನು ಸರ್ಕಾರ ಜಾರಿಗೆ ತಂದಿದೆ. ಸಮುದಾಯ ಸುತ್ತು ನಿಧಿ ಅಡಿಯಲ್ಲಿ ರಾಜ್ಯದ ಸುಮಾರು 5 ಸಾವಿರ ಸ್ವ ಸಹಾಯ ಗುಂಪುಗಳಿಗೆ ನೆರವು ನೀಡಲಾಗುತ್ತಿದೆ. ಸಮುದಾಯ ಸುತ್ತುನಿಧಿಯಡಿ ದಕ್ಷಿಣ ಕನ್ನಡ ಜಿಲ್ಲೆಗೆ ಅಂದಾಜು ₹70 ಕೋಟಿ ನೆರವು ನೀಡಲಾಗಿದೆ ಎಂದರು. </p><p>ಸ್ಪೀಕರ್ ಯು.ಟಿ. ಖಾದರ್, ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕ ವೇದವ್ಯಾಸ ಕಾಮತ್ ಉಪಸ್ಥಿತರಿದ್ದರು. </p><p>ಅಸ್ಸಾಂ, ತೆಲಂಗಾಣ, ಆಂಧ್ರಪ್ರದೇಶ, ಒಡಿಶಾ ಸೇರಿದಂತೆ 16 ರಾಜ್ಯಗಳ ಸ್ವ ಸಹಾಯ ಸಂಘಗಳು, ಕರ್ನಾಟಕದ ಬೇರೆ ಬೇರೆ ಜಿಲ್ಲೆಗಳ ಸ್ವ ಸಹಾಯ ಗುಂಪುಗಳ ಮಹಿಳೆಯರು ಮೇಳದಲ್ಲಿ ಭಾಗವಹಿಸಿದ್ದಾರೆ. 120ಕ್ಕೂ ಹೆಚ್ಚು ಮಳಿಗೆಗಳು, 30ಕ್ಕೂ ಅಧಿಕ ಆಹಾರ ಮಳಿಗೆಗಳು ಮೇಳದಲ್ಲಿವೆ</p><p> ಫೆ. 28 ರವರೆಗೆ ಮೇಳ ನಡೆಯಲಿದೆ. </p><p>ಅಕ್ಕ ಕೆಫೆಯ ಮಹಿಳೆಯರು ಸ್ಥಳದಲ್ಲೇ ವಿವಿಧ ಬಗೆಯ ತಿನಿಸುಗಳನ್ನು ತಯಾರಿಸಿ ಕೊಡುತ್ತಿದ್ದು, ಗ್ರಾಹಕರು ಖುಷಿಯಿಂದ ಖರೀದಿಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>