<p><strong>ಪುತ್ತೂರು</strong> (ದಕ್ಷಿಣ ಕನ್ನಡ): ‘ರೈ ಎಸ್ಟೇಟ್ ಎಜುಕೇಷನಲ್ ಅಂಡ್ ಚಾರಿಟಬಲ್ ಟ್ರಸ್ಟ್ ವತಿಯಿಂದ ದೀಪಾವಳಿ ಪ್ರಯುಕ್ತ ಈ ಬಾರಿ ಸುಮಾರು ₹1.70 ಕೋಟಿ ವೆಚ್ಚದಲ್ಲಿ 50 ಸಾವಿರ ಮಂದಿಗೆ ವಸ್ತ್ರದಾನ, ಸಹಭೋಜನ ಕಾರ್ಯಕ್ರಮ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ’ ಎಂದು ಟ್ರಸ್ಟ್ ಪ್ರವರ್ತಕ, ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.</p>.<p>ಸುದ್ದಿಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಅವರು, ನ.13ರಂದು ಪುತ್ತೂರು ತಾಲ್ಲೂಕು ಕ್ರೀಡಾಂಗಣದಲ್ಲಿ ಸಮಾರಂಭ ನಡೆಯಲಿದೆ. 60 ಸಾವಿರ ಮಂದಿಗೆ ವಿತರಣೆ ಮಾಡಲು ಬೇಕಾಗುವಷ್ಟು ವಸ್ತ್ರಗಳನ್ನು ಸೂರತ್ನಿಂದ ತರಿಸಲಾಗುತ್ತಿದೆ ಎಂದರು.</p>.<p>ಟ್ರಸ್ಟ್ ವತಿಯಿಂದ 10 ವರ್ಷಗಳಿಂದ ದೀಪಾವಳಿ ಸಂದರ್ಭದಲ್ಲಿ ವಸ್ತ್ರದಾನ ಮತ್ತು ಸಹಭೋಜನ ಕಾರ್ಯಕ್ರಮ ನಡೆಸಲಾಗುತ್ತಿದೆ. ಕಳೆದ ವರ್ಷ 35 ಸಾವಿರ ಮಂದಿಗೆ ವಸ್ತ್ರದಾನ ಮಾಡಲಾಗಿತ್ತು. ಈ ಬಾರಿ ಪುತ್ತೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯವರಿಗೆ ಆದ್ಯತೆ ನೀಡಲಾಗುವುದು. ಬೇರೆ ಕಡೆಯಿಂದ ಬಂದವರಿಗೂ ವಸ್ತ್ರದಾನ ಮಾಡಲಾಗುವುದು. ಮಹಿಳೆಯರಿಗೆ ಸೀರೆ, ಪುರುಷರಿಗೆ ಮತ್ತು ಮಕ್ಕಳಿಗೆ ಬೆಡ್ಶೀಟ್ ನೀಡಲಾಗುವುದು. ಸ್ವಂತ ಉದ್ಯಮದ ಲಾಭದ ಒಂದಂಶವನ್ನು ಇದಕ್ಕಾಗಿ ಬಳಸಲಾಗುತ್ತಿದೆ. ಈ ಕಾರ್ಯಕ್ರಮ ರಾಜಕೀಯ ರಹಿತವಾಗಿ ನಡೆಯಲಿದೆ ಎಂದು ಹೇಳಿದರು.</p>.<p>20 ಮಂದಿ ಬಡ ಸಾಧಕರಿಗೆ ಸನ್ಮಾನ: ಬೀಡಿಕಟ್ಟುವ, ಕೂಲಿ ಕೆಲಸ ಮಾಡುವ, ತಮ್ಮ ಕಷ್ಟದ ನಡುವೆಯೂ ಇತರರಿಗೆ ಸಹಾಯಹಸ್ತ ನೀಡಿರುವ, ಕಷ್ಟಕರ ಪರಿಸ್ಥಿತಿಯಲ್ಲಿಯೂ ಮಕ್ಕಳ ಶಿಕ್ಷಣವನ್ನು ಉತ್ತೇಜಿಸಿ ತಳಮಟ್ಟದಲ್ಲಿ ಸಾಧನೆ ಮಾಡಿರುವ 20 ಮಂದಿಯನ್ನು ಗೌರವಿಸಲಾಗುವುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುತ್ತೂರು</strong> (ದಕ್ಷಿಣ ಕನ್ನಡ): ‘ರೈ ಎಸ್ಟೇಟ್ ಎಜುಕೇಷನಲ್ ಅಂಡ್ ಚಾರಿಟಬಲ್ ಟ್ರಸ್ಟ್ ವತಿಯಿಂದ ದೀಪಾವಳಿ ಪ್ರಯುಕ್ತ ಈ ಬಾರಿ ಸುಮಾರು ₹1.70 ಕೋಟಿ ವೆಚ್ಚದಲ್ಲಿ 50 ಸಾವಿರ ಮಂದಿಗೆ ವಸ್ತ್ರದಾನ, ಸಹಭೋಜನ ಕಾರ್ಯಕ್ರಮ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ’ ಎಂದು ಟ್ರಸ್ಟ್ ಪ್ರವರ್ತಕ, ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.</p>.<p>ಸುದ್ದಿಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಅವರು, ನ.13ರಂದು ಪುತ್ತೂರು ತಾಲ್ಲೂಕು ಕ್ರೀಡಾಂಗಣದಲ್ಲಿ ಸಮಾರಂಭ ನಡೆಯಲಿದೆ. 60 ಸಾವಿರ ಮಂದಿಗೆ ವಿತರಣೆ ಮಾಡಲು ಬೇಕಾಗುವಷ್ಟು ವಸ್ತ್ರಗಳನ್ನು ಸೂರತ್ನಿಂದ ತರಿಸಲಾಗುತ್ತಿದೆ ಎಂದರು.</p>.<p>ಟ್ರಸ್ಟ್ ವತಿಯಿಂದ 10 ವರ್ಷಗಳಿಂದ ದೀಪಾವಳಿ ಸಂದರ್ಭದಲ್ಲಿ ವಸ್ತ್ರದಾನ ಮತ್ತು ಸಹಭೋಜನ ಕಾರ್ಯಕ್ರಮ ನಡೆಸಲಾಗುತ್ತಿದೆ. ಕಳೆದ ವರ್ಷ 35 ಸಾವಿರ ಮಂದಿಗೆ ವಸ್ತ್ರದಾನ ಮಾಡಲಾಗಿತ್ತು. ಈ ಬಾರಿ ಪುತ್ತೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯವರಿಗೆ ಆದ್ಯತೆ ನೀಡಲಾಗುವುದು. ಬೇರೆ ಕಡೆಯಿಂದ ಬಂದವರಿಗೂ ವಸ್ತ್ರದಾನ ಮಾಡಲಾಗುವುದು. ಮಹಿಳೆಯರಿಗೆ ಸೀರೆ, ಪುರುಷರಿಗೆ ಮತ್ತು ಮಕ್ಕಳಿಗೆ ಬೆಡ್ಶೀಟ್ ನೀಡಲಾಗುವುದು. ಸ್ವಂತ ಉದ್ಯಮದ ಲಾಭದ ಒಂದಂಶವನ್ನು ಇದಕ್ಕಾಗಿ ಬಳಸಲಾಗುತ್ತಿದೆ. ಈ ಕಾರ್ಯಕ್ರಮ ರಾಜಕೀಯ ರಹಿತವಾಗಿ ನಡೆಯಲಿದೆ ಎಂದು ಹೇಳಿದರು.</p>.<p>20 ಮಂದಿ ಬಡ ಸಾಧಕರಿಗೆ ಸನ್ಮಾನ: ಬೀಡಿಕಟ್ಟುವ, ಕೂಲಿ ಕೆಲಸ ಮಾಡುವ, ತಮ್ಮ ಕಷ್ಟದ ನಡುವೆಯೂ ಇತರರಿಗೆ ಸಹಾಯಹಸ್ತ ನೀಡಿರುವ, ಕಷ್ಟಕರ ಪರಿಸ್ಥಿತಿಯಲ್ಲಿಯೂ ಮಕ್ಕಳ ಶಿಕ್ಷಣವನ್ನು ಉತ್ತೇಜಿಸಿ ತಳಮಟ್ಟದಲ್ಲಿ ಸಾಧನೆ ಮಾಡಿರುವ 20 ಮಂದಿಯನ್ನು ಗೌರವಿಸಲಾಗುವುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>