<p><strong>ಮಂಗಳೂರು: ‘</strong>ಸರ್ವಜ್ಞ ಸಮಾಜದ ಓರೆ ಕೋರೆಯನ್ನು ತನ್ನ ತ್ರಿಪದಿಯ ಮೂಲಕ ಜನರಿಗೆ ತಿಳಿಸಿದ ಮೇಧಾವಿ. ಜೀವನದ ಕಟು ಸತ್ಯಗಳನ್ನು ಪದಗಳಲ್ಲಿ ಕಟ್ಟಿಕೊಟ್ಟ ಅವರ ಬರಹಗಳು ಜ್ಞಾನದ ಭಂಡಾರ. ಶ್ರೇಷ್ಠ ಕವಿಗಳ ಸಾಲಲ್ಲಿ ಈ ಸರ್ವಜ್ಞ ಸೇರುತ್ತಾರೆ’ ಎಂದು ನಿವೃತ್ತ ಶಿಕ್ಷಕ ಮಹಾಬಲ ಕುಲಾಲ್ ಹೇಳಿದರು.</p>.<p>ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಕರ್ನಾಟಕ ರಾಜ್ಯ ಕುಂಬಾರರ ಮಹಾ ಸಭಾ ಕರಾವಳಿ ವಿಭಾಗ ಮತ್ತು ದ.ಕ.ಜಿಲ್ಲಾ ಕುಲಾಲ- ಕುಂಬಾರರ ಯುವ ವೇದಿಕೆ ಮಂಗಳೂರು ಇವರ ಸಹಕಾರದೊಂದಿಗೆ ಶುಕ್ರವಾರ ಇಲ್ಲಿಯ ಬೋಂದೆಲ್ ಮಹಿಳಾ ಪಾಲಿಟೆಕ್ನಿಕ್ ವಿದ್ಯಾಲಯದಲ್ಲಿ ನಡೆದ ಸಂತ ಕವಿ ಸರ್ವಜ್ಞ ಜಯಂತಿಯಲ್ಲಿ ಅವರು ಉಪನ್ಯಾಸ ನೀಡಿದರು. </p>.<p>ಕಾರ್ಯಕ್ರಮ ಉದ್ಘಾಟಿಸಿದ ಪ್ರಾಂಶುಪಾಲ ಗುಣವಂತ ವಿ.ಗುನಗಿ, ’ವಿದ್ಯಾರ್ಥಿಗಳು ಕಲಿಯುಗದ ಸರ್ವಜ್ಞರಾಗಿ ಜ್ಞಾನವಂತರಾಗಬೇಕು. ನಮ್ಮ ವಿದ್ಯಾಲಯದ ವಿದ್ಯಾರ್ಥಿಗಳು ಪುಣ್ಯವಂತರು. ಪ್ರತಿದಿನ ಸರ್ವಜ್ಞನ ಪ್ರತಿಮೆಯ ದರ್ಶನ ಪಡೆಯುತ್ತಾರೆ. ಅವರ ನುಡಿಯಂತೆ ನಡೆಯಲು ತ್ರಿಪದಿ ಕವಿ ಸರ್ವಜ್ಞ ಪ್ರೇರೇಪಿಸಲಿ‘ ಎಂದರು. <br /><br /> ಕುಲಾಲ ಕುಂಬಾರರ ಯುವ ವೇದಿಕೆಯ ರಾಜ್ಯ ಘಟಕದ ಅಧ್ಯಕ್ಷ ಸುಧಾಕರ ಸಾಲಿಯಾನ್ ಮಾತನಾಡಿದರು. </p>.<p>ಕುಲಾಲ ಕುಂಬಾರರ ಯುವ ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಅನಿಲ್ದಾಸ್, ಜಿಲ್ಲಾ ಮತ್ತು ಸುರತ್ಕಲ್ ಕುಲಾಲ ಸಂಘ ಹಾಗೂ ಯುವ ವೇದಿಕೆಯ ಸದಸ್ಯರು ಉಪಸ್ಥಿತರಿದ್ದರು.</p>.<p>ಮಹಿಳಾ ಪಾಲಿಟೆಕ್ನಿಕ್ ಸೆಮಿಸ್ಟರ್ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಗಳಿಸಿದ ವಿಧ್ಯಾರ್ಥಿನಿಯರನ್ನು ಪುರಸ್ಕರಿಸಲಾಯಿತು ಹಾಗೂ ಕುಲಾಲ ಸಮುದಾಯದ ವಿದ್ಯಾರ್ಥಿನಿಯರನ್ನು ಗೌರವಿಸಲಾಯಿತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಜಿ.ಸ್ವಾಗತಿಸಿದರು. ಗಂಗಾಧರ ಬಂಜನ್ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು: ‘</strong>ಸರ್ವಜ್ಞ ಸಮಾಜದ ಓರೆ ಕೋರೆಯನ್ನು ತನ್ನ ತ್ರಿಪದಿಯ ಮೂಲಕ ಜನರಿಗೆ ತಿಳಿಸಿದ ಮೇಧಾವಿ. ಜೀವನದ ಕಟು ಸತ್ಯಗಳನ್ನು ಪದಗಳಲ್ಲಿ ಕಟ್ಟಿಕೊಟ್ಟ ಅವರ ಬರಹಗಳು ಜ್ಞಾನದ ಭಂಡಾರ. ಶ್ರೇಷ್ಠ ಕವಿಗಳ ಸಾಲಲ್ಲಿ ಈ ಸರ್ವಜ್ಞ ಸೇರುತ್ತಾರೆ’ ಎಂದು ನಿವೃತ್ತ ಶಿಕ್ಷಕ ಮಹಾಬಲ ಕುಲಾಲ್ ಹೇಳಿದರು.</p>.<p>ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಕರ್ನಾಟಕ ರಾಜ್ಯ ಕುಂಬಾರರ ಮಹಾ ಸಭಾ ಕರಾವಳಿ ವಿಭಾಗ ಮತ್ತು ದ.ಕ.ಜಿಲ್ಲಾ ಕುಲಾಲ- ಕುಂಬಾರರ ಯುವ ವೇದಿಕೆ ಮಂಗಳೂರು ಇವರ ಸಹಕಾರದೊಂದಿಗೆ ಶುಕ್ರವಾರ ಇಲ್ಲಿಯ ಬೋಂದೆಲ್ ಮಹಿಳಾ ಪಾಲಿಟೆಕ್ನಿಕ್ ವಿದ್ಯಾಲಯದಲ್ಲಿ ನಡೆದ ಸಂತ ಕವಿ ಸರ್ವಜ್ಞ ಜಯಂತಿಯಲ್ಲಿ ಅವರು ಉಪನ್ಯಾಸ ನೀಡಿದರು. </p>.<p>ಕಾರ್ಯಕ್ರಮ ಉದ್ಘಾಟಿಸಿದ ಪ್ರಾಂಶುಪಾಲ ಗುಣವಂತ ವಿ.ಗುನಗಿ, ’ವಿದ್ಯಾರ್ಥಿಗಳು ಕಲಿಯುಗದ ಸರ್ವಜ್ಞರಾಗಿ ಜ್ಞಾನವಂತರಾಗಬೇಕು. ನಮ್ಮ ವಿದ್ಯಾಲಯದ ವಿದ್ಯಾರ್ಥಿಗಳು ಪುಣ್ಯವಂತರು. ಪ್ರತಿದಿನ ಸರ್ವಜ್ಞನ ಪ್ರತಿಮೆಯ ದರ್ಶನ ಪಡೆಯುತ್ತಾರೆ. ಅವರ ನುಡಿಯಂತೆ ನಡೆಯಲು ತ್ರಿಪದಿ ಕವಿ ಸರ್ವಜ್ಞ ಪ್ರೇರೇಪಿಸಲಿ‘ ಎಂದರು. <br /><br /> ಕುಲಾಲ ಕುಂಬಾರರ ಯುವ ವೇದಿಕೆಯ ರಾಜ್ಯ ಘಟಕದ ಅಧ್ಯಕ್ಷ ಸುಧಾಕರ ಸಾಲಿಯಾನ್ ಮಾತನಾಡಿದರು. </p>.<p>ಕುಲಾಲ ಕುಂಬಾರರ ಯುವ ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಅನಿಲ್ದಾಸ್, ಜಿಲ್ಲಾ ಮತ್ತು ಸುರತ್ಕಲ್ ಕುಲಾಲ ಸಂಘ ಹಾಗೂ ಯುವ ವೇದಿಕೆಯ ಸದಸ್ಯರು ಉಪಸ್ಥಿತರಿದ್ದರು.</p>.<p>ಮಹಿಳಾ ಪಾಲಿಟೆಕ್ನಿಕ್ ಸೆಮಿಸ್ಟರ್ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಗಳಿಸಿದ ವಿಧ್ಯಾರ್ಥಿನಿಯರನ್ನು ಪುರಸ್ಕರಿಸಲಾಯಿತು ಹಾಗೂ ಕುಲಾಲ ಸಮುದಾಯದ ವಿದ್ಯಾರ್ಥಿನಿಯರನ್ನು ಗೌರವಿಸಲಾಯಿತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಜಿ.ಸ್ವಾಗತಿಸಿದರು. ಗಂಗಾಧರ ಬಂಜನ್ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>