<p><strong>ಮಂಗಳೂರು</strong>: ವಜ್ರಮಹೋತ್ಸವ ಸಂಭ್ರಮದಲ್ಲಿರುವ ಸಸಿಹಿತ್ಲುವಿನ ಆಂಜನೇಯ ಗುಡಿ ಮತ್ತು ವ್ಯಾಯಾಮ ಶಾಲೆ ವತಿಯಿಂದ ಫೆ.3 ರಿಂದ 5ರವರೆಗೆ ಸಸಿಹಿತ್ಲು ನಂದಿನಿ ನದಿಯಲ್ಲಿ ‘ನದಿ ಉತ್ಸವ’ವನ್ನು ಆಯೋಜಿಸಲಾಗಿದೆ.</p>.<p>ಸೋಮವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ವ್ಯಾಯಾಮ ಶಾಲೆಯ ಮಾಜಿ ಅಧ್ಯಕ್ಷ ವಿನೋದ್ ಕುಮಾರ್ ಅವರು, ಪ್ರವಾಸೋದ್ಯಮ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಕಾರ ನೀಡಿವೆ. ಫೆಬ್ರುವರಿ 3ರಂದು ಸಂಜೆ 7 ಗಂಟೆಗೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಪ್ರವಾಸೋದ್ಯಮ ಸಚಿವ ಅನಂದ್ ಸಿಂಗ್ ಉತ್ಸವಕ್ಕೆ ಚಾಲನೆ ನೀಡುವರು. ಸಚಿವರಾದ ಸುನಿಲ್ ಕುಮಾರ್, ಎಸ್.ಅಂಗಾರ, ಕೋಟ ಶ್ರೀನಿವಾಸ ಪೂಜಾರಿ, ಸಂಸದ ನಳಿನ್ ಕುಮಾರ್ ಕಟೀಲ್ ಭಾಗವಹಿಸುವರು. ಶಾಸಕ ಉಮಾನಾಥ ಕೋಟ್ಯಾನ್ ಅಧ್ಯಕ್ಷತೆ ವಹಿಸುವರು ಎಂದರು.</p>.<p>ನದಿ ಉತ್ಸವದ ಅಂಗವಾಗಿ ಬೋಟ್ರೇಸ್, ಈಜು, ಸ್ಟ್ಯಾಂಡ್ ಅಪ್ ಪೆಡಲ್, ಜನಪದ ನೃತ್ಯ ಸ್ಪರ್ಧೆ , ಆಹಾರ ಮೇಳ ಆಯೋಜಿಸಲಾಗಿದೆ. ಫೆ.4ರಂದು ಬೆಳಿಗ್ಗೆ 6 ಗಂಟೆಗೆ ಓಟದ ಸ್ಪರ್ಧೆಗೆ ಚಾಲನೆ, ಸಂಜೆ 3.30ಕ್ಕೆ ನದಿ ಸ್ಪರ್ಧೆಗೆ ಚಾಲನೆ ದೊರೆಯಲಿದೆ ಎಂದರು.</p>.<p>ಆಂಜನೇಯ ಗುಡಿ ಮತ್ತು ವ್ಯಾಯಾಮ ಶಾಲೆಯ ಅಧ್ಯಕ್ಷ ಸಂತೋಷ್ ಕುಮಾರ್, ಕಾರ್ಯದರ್ಶಿ ನಿತಿನ್ ಸುವರ್ಣ, ಪದಾಧಿಕಾರಿಗಳಾದ ರಿತೇಶ್ ಸಾಲ್ಯಾನ್, ಲಲಿತ್ ಶ್ರೀಯಾನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ವಜ್ರಮಹೋತ್ಸವ ಸಂಭ್ರಮದಲ್ಲಿರುವ ಸಸಿಹಿತ್ಲುವಿನ ಆಂಜನೇಯ ಗುಡಿ ಮತ್ತು ವ್ಯಾಯಾಮ ಶಾಲೆ ವತಿಯಿಂದ ಫೆ.3 ರಿಂದ 5ರವರೆಗೆ ಸಸಿಹಿತ್ಲು ನಂದಿನಿ ನದಿಯಲ್ಲಿ ‘ನದಿ ಉತ್ಸವ’ವನ್ನು ಆಯೋಜಿಸಲಾಗಿದೆ.</p>.<p>ಸೋಮವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ವ್ಯಾಯಾಮ ಶಾಲೆಯ ಮಾಜಿ ಅಧ್ಯಕ್ಷ ವಿನೋದ್ ಕುಮಾರ್ ಅವರು, ಪ್ರವಾಸೋದ್ಯಮ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಕಾರ ನೀಡಿವೆ. ಫೆಬ್ರುವರಿ 3ರಂದು ಸಂಜೆ 7 ಗಂಟೆಗೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಪ್ರವಾಸೋದ್ಯಮ ಸಚಿವ ಅನಂದ್ ಸಿಂಗ್ ಉತ್ಸವಕ್ಕೆ ಚಾಲನೆ ನೀಡುವರು. ಸಚಿವರಾದ ಸುನಿಲ್ ಕುಮಾರ್, ಎಸ್.ಅಂಗಾರ, ಕೋಟ ಶ್ರೀನಿವಾಸ ಪೂಜಾರಿ, ಸಂಸದ ನಳಿನ್ ಕುಮಾರ್ ಕಟೀಲ್ ಭಾಗವಹಿಸುವರು. ಶಾಸಕ ಉಮಾನಾಥ ಕೋಟ್ಯಾನ್ ಅಧ್ಯಕ್ಷತೆ ವಹಿಸುವರು ಎಂದರು.</p>.<p>ನದಿ ಉತ್ಸವದ ಅಂಗವಾಗಿ ಬೋಟ್ರೇಸ್, ಈಜು, ಸ್ಟ್ಯಾಂಡ್ ಅಪ್ ಪೆಡಲ್, ಜನಪದ ನೃತ್ಯ ಸ್ಪರ್ಧೆ , ಆಹಾರ ಮೇಳ ಆಯೋಜಿಸಲಾಗಿದೆ. ಫೆ.4ರಂದು ಬೆಳಿಗ್ಗೆ 6 ಗಂಟೆಗೆ ಓಟದ ಸ್ಪರ್ಧೆಗೆ ಚಾಲನೆ, ಸಂಜೆ 3.30ಕ್ಕೆ ನದಿ ಸ್ಪರ್ಧೆಗೆ ಚಾಲನೆ ದೊರೆಯಲಿದೆ ಎಂದರು.</p>.<p>ಆಂಜನೇಯ ಗುಡಿ ಮತ್ತು ವ್ಯಾಯಾಮ ಶಾಲೆಯ ಅಧ್ಯಕ್ಷ ಸಂತೋಷ್ ಕುಮಾರ್, ಕಾರ್ಯದರ್ಶಿ ನಿತಿನ್ ಸುವರ್ಣ, ಪದಾಧಿಕಾರಿಗಳಾದ ರಿತೇಶ್ ಸಾಲ್ಯಾನ್, ಲಲಿತ್ ಶ್ರೀಯಾನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>