ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಂಟ್ವಾಳ | ಸತೀಶ್ ಪೂಜಾರಿ ಬಂಧನ ಖಂಡಿಸಿ ಹಿಂದೂ ಜಾಗರಣ ವೇದಿಕೆಯಿಂದ ಪ್ರತಿಭಟನೆ

Published 22 ಆಗಸ್ಟ್ 2023, 12:49 IST
Last Updated 22 ಆಗಸ್ಟ್ 2023, 12:49 IST
ಅಕ್ಷರ ಗಾತ್ರ

ಬಂಟ್ವಾಳ: ಗೌರಿಬಿದನೂರಿನಲ್ಲಿ ಅಖಂಡ ಭಾರತ ಸಂಕಲ್ಪ ದಿನ ಪ್ರಯುಕ್ತ ರಾಷ್ಟ್ರೀಯತೆ ಬಗ್ಗೆ ಭಾಷಣ ಮಾಡಿದ ಹಿಂದೂ ಜಾಗರಣ ವೇದಿಕೆ ಕರ್ನಾಟಕ ದಕ್ಷಿಣ ಪ್ರಾಂತ ಸಹಸಂಯೊಜಕ್ ಸತೀಶ್ ದಾವಣಗೆರೆ ಅವರನ್ನು ಕಾಂಗ್ರೆಸ್ ಪ್ರೇರಿತ ಪೊಲೀಸ್ ಅಧಿಕಾರಿಗಳು ಮಧ್ಯರಾತ್ರಿ ಮನೆಗೆ ನುಗ್ಗಿ ಬಂಧಿಸಿದ ಘಟನೆ ಖಂಡನೀಯ ಎಂದು ಸಂಘಟನೆಯ ಜಿಲ್ಲಾ ಸಂಯೋಜಕ ನರಸಿಂಹ ಶೆಟ್ಟಿ ಮಾಣಿ ಹೇಳಿದರು.

ಇಲ್ಲಿನ ಬಿ.ಸಿ.ರೋಡು ಪೇಟೆಯಲ್ಲಿ ಹಿಂದೂ ಜಾಗರಣ ವೇದಿಕೆ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ತುಷ್ಟೀಕರಣ ನೀತಿಯಿಂದ ಹಿಂದೂ ಕಾರ್ಯಕರ್ತರ ಧ್ವನಿ ಅಡಗಿಸಲು ಕಾಂಗ್ರೆಸ್ ಹುನ್ನಾರ ನಡೆಸಿದ್ದು, ಇಂಥ ಬೆದರಿಕೆಗಳಿಗೆ ಹಿಂದೂ ಸಂಘಟನೆ ಜಗ್ಗುವುದಿಲ್ಲ ಎಂದು ಅವರು ಹೇಳಿದರು.

ಪ್ರಮುಖರಾದ ರವಿರಾಜ್ ಬಿಸಿರೋಡ್, ರತ್ನಾಕರ ಶೆಟ್ಟಿ ಕಲ್ಲಡ್ಕ, ರಾಮದಾಸ್ ಬಂಟ್ವಾಳ ಮಾತನಾಡಿದರು.

ಜಿಲ್ಲಾ ಸಂಘಟನಾ ಕಾರ್ಯದರ್ಶಿ ಪ್ರಶಾಂತ್ ಕೆಂಪುಗುಡ್ಡೆ, ಸಮಿತ್ ರಾಜ್ ಧರೆಗುದ್ದೆ, ಪ್ರಕಾಶ್ ಕುಂಪಲ, ಅರುಣ್ ಸಜಿಪ, ಗಣೇಶ್ ಕೆದಿಲ, ಬಾಲಕೃಷ್ಣ ಕಲಾಯಿ, ರವಿ ಕೆಂಪುಗುಡ್ಡೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT