ಕೃತಿ ಪರಿಚಯ ಮಾಡಿದ ಎಸ್ಡಿಎಂ ಕಾಲೇಜಿನ ಪ್ರಾಧ್ಯಾಪಕ ಡಾ ರಾಜಶೇಖರ ಹಳೆಮನೆ, ಬದುಕಿನ ಹಪಾಹಪಿಗಳನ್ನೆಲ್ಲ ಕಳೆದುಕೊಂಡು ಸ್ವಚ್ಛ ನದಿಯಂತೆ ಇರುವ ಹಳ್ಳಿ ‘ಘಾಂದ್ರುಕ್’. ಇದುವೇ ಕೃತಿಯ ಹೆಸರು. ಇದು ಹೊಸ ಕಥನ ಮಾದರಿ. ಕಾದಂಬರಿಯಲ್ಲಿ ನಾಲ್ಕು ಭಾಗಗಳಿವೆ. ನಾಯಕ ಸಿದ್ಧಾರ್ಥನ ಹಳ್ಳಿಯ ಬಾಲ್ಯ, ಕಾರ್ಪೊರೇಟ್ ಜಗತ್ತಿನ ವ್ಯವಹಾರ, ಅಂತರರಾಷ್ಟ್ರೀಯ ರಕ್ತಸಿಕ್ತ ಅಧ್ಯಾಯ, ಕೊನೆಗೆ ಸಿಗಬಹುದಾದ ಸಂತೃಪ್ತಿಗಳಿವೆ ಎಂದು ವಿವರಿಸಿದರು.