ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಳ್ಳಾಲದಲ್ಲಿ ಸಾವರ್ಕರ್ ಪರ ಹಾಕಿದ್ದ ಫ್ಲೆಕ್ಸ್ ತೆರವು

Last Updated 19 ಆಗಸ್ಟ್ 2022, 8:27 IST
ಅಕ್ಷರ ಗಾತ್ರ

ಮಂಗಳೂರು: ನಗರದ ಹೊರವಲಯದ ಉಳ್ಳಾಲದಲ್ಲಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಮುಖಂಡರೊಬ್ಬರು ಸಾವರ್ಕರ್ ಪರವಾಗಿ ಫ್ಲೆಕ್ಸ್ ಹಾಕಿದ್ದನ್ನು ಪೊಲೀಸರು ತೆರವುಗೊಳಿಸಿದ್ದಾರೆ.

ದೇರಳಕಟ್ಟೆ ಮತ್ತು ಅಸೈಗೋಳಿಯಲ್ಲಿ ‘ವಿನಾಯಕ ದಾಮೋದರ ಸಾವರ್ಕರ್ ಅವರಿಗೆ ನಮನಗಳು’ ಎಂದು ಬರೆದು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ರಾಜ್ಯ ಕಾರ್ಯಕಾರಿಣಿ ಸದಸ್ಯ ಎ.ಆರ್. ಫಝಲ್ ಫ್ಲೆಕ್ಸ್ ಹಾಕಿದ್ದರು.ಗುರುವಾರಸಂಜೆ ಸಾರ್ವಜನಿಕ ಸ್ಥಳದಲ್ಲಿ ಈಫ್ಲೆಕ್ಸ್‌ಗಳುಕಾಣಿಸಿಕೊಂಡಿದ್ದವು.

ಬೆನ್ನಲ್ಲೇ ಕೋಣಾಜೆ ಪೊಲೀಸರು ದೇರಳಕಟ್ಟೆಯಲ್ಲಿ ಹಾಕಿದ್ದ ಫ್ಲೆಕ್ಸ್‌ ಅನ್ನು ತೆರವು ಮಾಡಿದ್ದಾರೆ. ದೇರಳಕಟ್ಟೆ ಮುಸ್ಲಿಂ ಬಾಹುಳ್ಯದ ಪ್ರದೇಶ ಆಗಿರುವುದರಿಂದ ಘರ್ಷಣೆಗೆ ಅವಕಾಶ ಮಾಡಿಕೊಡುವುದು ಬೇಡವೆಂದು ತೆರವುಗೊಳಿಸಿದ್ದಾರೆ ಎನ್ನಲಾಗುತ್ತಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಫಜಲ್, ‘ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರ ಸಾವರ್ಕರ್ ಅವರಿಗೆ ನಮನ ಸಲ್ಲಿಸುವುದರಲ್ಲಿ ತಪ್ಪೇನಿದೆ. ನಾನು ಭಯೋತ್ಪಾದಕರ ಪರವಾಗಿ ಫ್ಲೆಕ್ಸ್ ಹಾಕಿಲ್ಲ. ದೇಶದ ಸ್ವಾತಂತ್ರ್ಯಕ್ಕಾಗಿ ಒಂದು ದಿವಸ ಆಗಿರಲಿ, 50 ವರ್ಷ ಆಗಿರಲಿ, ಹೋರಾಟ ಮಾಡಿದವರೆಲ್ಲ ಪ್ರಾತಃ ಸ್ಮರಣೀಯರು. ಅಂತಹ ವ್ಯಕ್ತಿಗಳಿಗೆ ಅವಮಾನ ಮಾಡುವುದು ಸರಿಯಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT