<p><strong>ಮಂಗಳೂರು</strong>: ಸುರತ್ಕಲ್ ಜಂಕ್ಷನ್ ವೃತ್ತಕ್ಕೆ ವೀರ ಸಾವರ್ಕರ್ ಹೆಸರನ್ನು ಇಡುವ ಪ್ರಸ್ತಾವವನ್ನು ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಶುಕ್ರವಾರ ಸ್ಥಿರೀಕರಿಸಲಾಯಿತು.</p>.<p>ಈ ವೃತ್ತಕ್ಕೆ ಸಾವರ್ಕರ್ ಹೆಸರು ಇಡಲು ಕ್ರಮವಹಿಸುವಂತೆ ಶಾಸಕ ವೈ.ಭರತ ಶೆಟ್ಟಿ ಮನವಿ ಸಲ್ಲಿಸಿದ್ದರು. 2021ರ ಅ. 3ರಂದು ನಡೆದಿದ್ದ ಸಭೆಯಲ್ಲಿ ಪರಿಷತ್ತಿನ ಸಭೆಯಲ್ಲಿ ಈ ಕುರಿತ ಕಾರ್ಯಸೂಚಿಯನ್ನು ಪಟ್ಟಣ ಯೋಜನೆ ಮತ್ತು ಸುಧಾರಣೆ ಸ್ಥಾಯಿ ಸಮಿತಿಯ ವರದಿಗಾಗಿ ಕಳುಹಿಸಿಕೊಡಲು ನಿರ್ಧರಿಸಲಾಗಿತ್ತು. ಆಗ ಪಾಲಿಕೆ ಸದಸ್ಯರಾದ ಎ.ಸಿ.ವಿನಯರಾಜ್, ಶಂಶಾದ್ ಅಬೂಬಕ್ಕರ್, ಮುನೀಬ್ ಬೆಂಗ್ರೆ ಹಾಗೂ ವರುಣ್ ಚೌಟ ಅವರು ಈ ಪ್ರಸ್ತಾವನೆಯನ್ನು ವಿರೋಧಿಸಿದ್ದರು. ಸ್ಥಾಯಿ ಸಮಿತಿಯು ಸ್ಥಳ ಪರಿಶೀಲನೆ ನಡೆಸಿ ಈ ಪ್ರಸ್ತಾವನೆಗೆ ಸಹಮತ ಸೂಚಿಸಿ ಪರಿಷತ್ತಿನ ಸಭೆಯಲ್ಲಿ ಮಂಡಿಸಿತ್ತು. ಸಮಿತಿಯಲ್ಲಿದ್ದ ಪಾಲಿಕೆ ಸದಸ್ಯರಾದ ಕೇಶವ ಹಾಗೂ ಶಂಶುದ್ದೀನ್ ಈ ಪ್ರಸ್ತಾವನೆಗೆ ಆಕ್ಷೇಪ ವ್ಯಕ್ತಪಡಿಸಿದ್ದರು.</p>.<p>ಪಾಲಿಕೆಯು ಈ ಪ್ರಸ್ತಾವನೆ ಬಗ್ಗೆ ದಿನಪತ್ರಿಕೆಗಳಲ್ಲಿ ಪ್ರಕಟಣೆ ನೀಡಿ, ಸಾರ್ವಜನಿಕರಿಂದ ಆಕ್ಷೇಪಣೆ ಅಥವಾ ಸಲಹೆಗಳನ್ನು ಆಹ್ವಾನಿಸಿ ಬಳಿಕ ಅಂತಿಮ ನಿರ್ಣಯ ಕೈಗೊಳ್ಳಲಿದೆ.</p>.<p>ಕೆಲ ತಿಂಗಳುಗಳ ಹಿಂದೆ ಈ ಜಂಕ್ಷನ್ನಲ್ಲಿ ಸಾವರ್ಕರ್ ಭಾವಚಿತ್ರ ಅಳವಡಿಸಲಾಗಿತ್ತು. ಇದಕ್ಕೆ ಕೆಲವು ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸಿದ್ದರು. ಬಳಿಕ ಪಾಲಿಕೆ ಅಧಿಕಾರಿಗಳು ಭಾವಚಿತ್ರವನ್ನು ತೆರವುಗೊಳಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ಸುರತ್ಕಲ್ ಜಂಕ್ಷನ್ ವೃತ್ತಕ್ಕೆ ವೀರ ಸಾವರ್ಕರ್ ಹೆಸರನ್ನು ಇಡುವ ಪ್ರಸ್ತಾವವನ್ನು ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಶುಕ್ರವಾರ ಸ್ಥಿರೀಕರಿಸಲಾಯಿತು.</p>.<p>ಈ ವೃತ್ತಕ್ಕೆ ಸಾವರ್ಕರ್ ಹೆಸರು ಇಡಲು ಕ್ರಮವಹಿಸುವಂತೆ ಶಾಸಕ ವೈ.ಭರತ ಶೆಟ್ಟಿ ಮನವಿ ಸಲ್ಲಿಸಿದ್ದರು. 2021ರ ಅ. 3ರಂದು ನಡೆದಿದ್ದ ಸಭೆಯಲ್ಲಿ ಪರಿಷತ್ತಿನ ಸಭೆಯಲ್ಲಿ ಈ ಕುರಿತ ಕಾರ್ಯಸೂಚಿಯನ್ನು ಪಟ್ಟಣ ಯೋಜನೆ ಮತ್ತು ಸುಧಾರಣೆ ಸ್ಥಾಯಿ ಸಮಿತಿಯ ವರದಿಗಾಗಿ ಕಳುಹಿಸಿಕೊಡಲು ನಿರ್ಧರಿಸಲಾಗಿತ್ತು. ಆಗ ಪಾಲಿಕೆ ಸದಸ್ಯರಾದ ಎ.ಸಿ.ವಿನಯರಾಜ್, ಶಂಶಾದ್ ಅಬೂಬಕ್ಕರ್, ಮುನೀಬ್ ಬೆಂಗ್ರೆ ಹಾಗೂ ವರುಣ್ ಚೌಟ ಅವರು ಈ ಪ್ರಸ್ತಾವನೆಯನ್ನು ವಿರೋಧಿಸಿದ್ದರು. ಸ್ಥಾಯಿ ಸಮಿತಿಯು ಸ್ಥಳ ಪರಿಶೀಲನೆ ನಡೆಸಿ ಈ ಪ್ರಸ್ತಾವನೆಗೆ ಸಹಮತ ಸೂಚಿಸಿ ಪರಿಷತ್ತಿನ ಸಭೆಯಲ್ಲಿ ಮಂಡಿಸಿತ್ತು. ಸಮಿತಿಯಲ್ಲಿದ್ದ ಪಾಲಿಕೆ ಸದಸ್ಯರಾದ ಕೇಶವ ಹಾಗೂ ಶಂಶುದ್ದೀನ್ ಈ ಪ್ರಸ್ತಾವನೆಗೆ ಆಕ್ಷೇಪ ವ್ಯಕ್ತಪಡಿಸಿದ್ದರು.</p>.<p>ಪಾಲಿಕೆಯು ಈ ಪ್ರಸ್ತಾವನೆ ಬಗ್ಗೆ ದಿನಪತ್ರಿಕೆಗಳಲ್ಲಿ ಪ್ರಕಟಣೆ ನೀಡಿ, ಸಾರ್ವಜನಿಕರಿಂದ ಆಕ್ಷೇಪಣೆ ಅಥವಾ ಸಲಹೆಗಳನ್ನು ಆಹ್ವಾನಿಸಿ ಬಳಿಕ ಅಂತಿಮ ನಿರ್ಣಯ ಕೈಗೊಳ್ಳಲಿದೆ.</p>.<p>ಕೆಲ ತಿಂಗಳುಗಳ ಹಿಂದೆ ಈ ಜಂಕ್ಷನ್ನಲ್ಲಿ ಸಾವರ್ಕರ್ ಭಾವಚಿತ್ರ ಅಳವಡಿಸಲಾಗಿತ್ತು. ಇದಕ್ಕೆ ಕೆಲವು ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸಿದ್ದರು. ಬಳಿಕ ಪಾಲಿಕೆ ಅಧಿಕಾರಿಗಳು ಭಾವಚಿತ್ರವನ್ನು ತೆರವುಗೊಳಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>