ಈ ವೃತ್ತಕ್ಕೆ ಸಾವರ್ಕರ್ ಹೆಸರು ಇಡಲು ಕ್ರಮವಹಿಸುವಂತೆ ಶಾಸಕ ವೈ.ಭರತ ಶೆಟ್ಟಿ ಮನವಿ ಸಲ್ಲಿಸಿದ್ದರು. 2021ರ ಅ. 3ರಂದು ನಡೆದಿದ್ದ ಸಭೆಯಲ್ಲಿ ಪರಿಷತ್ತಿನ ಸಭೆಯಲ್ಲಿ ಈ ಕುರಿತ ಕಾರ್ಯಸೂಚಿಯನ್ನು ಪಟ್ಟಣ ಯೋಜನೆ ಮತ್ತು ಸುಧಾರಣೆ ಸ್ಥಾಯಿ ಸಮಿತಿಯ ವರದಿಗಾಗಿ ಕಳುಹಿಸಿಕೊಡಲು ನಿರ್ಧರಿಸಲಾಗಿತ್ತು. ಆಗ ಪಾಲಿಕೆ ಸದಸ್ಯರಾದ ಎ.ಸಿ.ವಿನಯರಾಜ್, ಶಂಶಾದ್ ಅಬೂಬಕ್ಕರ್, ಮುನೀಬ್ ಬೆಂಗ್ರೆ ಹಾಗೂ ವರುಣ್ ಚೌಟ ಅವರು ಈ ಪ್ರಸ್ತಾವನೆಯನ್ನು ವಿರೋಧಿಸಿದ್ದರು. ಸ್ಥಾಯಿ ಸಮಿತಿಯು ಸ್ಥಳ ಪರಿಶೀಲನೆ ನಡೆಸಿ ಈ ಪ್ರಸ್ತಾವನೆಗೆ ಸಹಮತ ಸೂಚಿಸಿ ಪರಿಷತ್ತಿನ ಸಭೆಯಲ್ಲಿ ಮಂಡಿಸಿತ್ತು. ಸಮಿತಿಯಲ್ಲಿದ್ದ ಪಾಲಿಕೆ ಸದಸ್ಯರಾದ ಕೇಶವ ಹಾಗೂ ಶಂಶುದ್ದೀನ್ ಈ ಪ್ರಸ್ತಾವನೆಗೆ ಆಕ್ಷೇಪ ವ್ಯಕ್ತಪಡಿಸಿದ್ದರು.