ಶೇಖರ್ ಲಾಯಿಲ್ ಮಾತನಾಡಿ, ಕನ್ಯಾಡಿಯ ದಿನೇಶ್ ಕೊಲೆ ಪ್ರಕರಣದ ತನಿಖೆಯನ್ನು ಧರ್ಮಸ್ಥಳ ಪೊಲೀಸರು ಸರಿಯಾಗಿ ನಡೆಸುತ್ತಿಲ್ಲ. ಆರೋಪಿಗೆ ಜಾಮೀನು ಸಿಕ್ಕಿದೆ. ಈ ಜಾಮೀನು ರದ್ದುಗೊಳಿಸಬೇಕು. ದಿನೇಶ್ ಕುಟುಂಬಕ್ಕೆ ಸರ್ಕಾರ ₹25 ಲಕ್ಷ ಪರಿಹಾರ ನೀಡಬೇಖು ಎಂದು ಆಗ್ರಹಿಸಿದರು. ಇನ್ನೊಬ್ಬ ಮುಖಂಡ ಆನಂದ್ ಮಾತನಾಡಿ, ದಿನೇಶ್ ಕುಟುಂಬಕ್ಕೆ ಬೆದರಿಕೆ ಕರೆಗಳು ಬರುತ್ತಿದ್ದು, ಕುಟುಂಬಕ್ಕೆ ಸೂಕ್ತ ರಕ್ಷಣೆ ಒದಗಿಸಬೇಕು ಎಂದರು.