<p><strong>ಮಂಗಳೂರು</strong>: ಪರಿಶಿಷ್ಟ ಸಮುದಾಯಕ್ಕೆ ಮೀಸಲಾಗಿರುವ ಕಾಮಗಾರಿ ಟೆಂಡರ್ಗಳನ್ನು ಮಹಾನಗರ ಪಾಲಿಕೆಯಲ್ಲಿ ಅರ್ಹತೆ ಇಲ್ಲದ ಹೊರ ಜಿಲ್ಲೆಯವರಿಗೆ ನೀಡಲಾಗುತ್ತಿದೆ. ಪಾಲಿಕೆ ಅಧಿಕಾರಿಗಳು ಇದರಲ್ಲಿ ಶಾಮೀಲಾಗಿದ್ದಾರೆ ಎಂದು ದಲಿತ ಮುಖಂಡ ದುರ್ಗಾಪ್ರಸಾದ್ ಸುರತ್ಕಲ್ ಆರೋಪಿಸಿದರು.</p>.<p>ನಗರದ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಕುಂದುಕೊರತೆ ಸಭೆಯಲ್ಲಿ ಅವರು ಈ ವಿಷಯ ಪ್ರಸ್ತಾಪಿಸಿದರು.ಇದಕ್ಕೆ ಪ್ರತಿಕ್ರಿಯಿಸಿದ ಡಿಸಿಪಿ ಹರಿರಾಂ ಶಂಕರ್, ಈ ಸಂಬಂಧ ಪಾಲಿಕೆ ಆಯುಕ್ತರಿಗೆ ಪತ್ರ ಬರೆಯಲಾಗುವುದು ಎಂದು ತಿಳಿಸಿದರು.</p>.<p>ಮುಖಂಡ ವಿಶ್ವನಾಥ್ ಮಾತನಾಡಿ, ಅರಣ್ಯ ಇಲಾಖೆಯಿಂದ ಪರಿಶಿಷ್ಟ ಸಮುದಾಯದವರಿಗೆ ಉಚಿತವಾಗಿ ಅಡುಗೆ ಅನಿಲ ವಿತರಿಸಲಾಗುತ್ತಿದೆ. ಆದರೆ ಏಜೆನ್ಸಿಯವರು ₹ 500 ವಸೂಲಿ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.</p>.<p>ಈ ಬಗ್ಗೆ ಅರಣ್ಯ ಇಲಾಖೆಗೆ ದೂರು ನೀಡುವಂತೆ ಡಿಸಿಪಿ ಸಲಹೆ ನೀಡಿದರು. ಐಕಳದಲ್ಲಿ ಪರಿಶಿಷ್ಟ ಮಹಿಳೆಯ ಮನೆಯ ಬಳಿ ಅಳವಡಿಸಿರುವ ಮೊಬೈಲ್ ಟವರ್ನಿಂದ ತೊಂದರೆಯಾಗುತ್ತಿದೆ. ಅದರಿಂದಾಗಿ ಮಹಿಳೆ ಅನಾರೋಗ್ಯ ಪೀಡಿತರಾಗಿದ್ದು, ಅದನ್ನು ತೆಗೆಯಬೇಕೆಂದು ಎಂದು ಮುಖಂಡ ಎಸ್.ಪಿ.ಆನಂದ ಒತ್ತಾಯಿಸಿದರು. ಈ ಬಗ್ಗೆ ಪರಿಶೀಲಿಸುವಂತೆ ಉತ್ತರ ಉಪವಿಭಾಗದ ಎಸಿಪಿ ಮಹೇಶ್ ಅವರಿಗೆ ಡಿಸಿಪಿ ಸೂಚಿಸಿದರು.</p>.<p>ಕಿನ್ನಿಗೋಳಿಯಲ್ಲಿ ಮೀನು ಮಾರಾಟ ಮಾಡುವ ಮಹಿಳೆಯರಿಗೆ ಬೇರೆ ಮಾರಾಟಗಾರರಿಂದ ತೊಂದರೆಯಾಗುತ್ತಿದೆ. ಪಂಚಾಯಿತಿ ವತಿಯಿಂದ ಪ್ರತ್ಯೇಕ ಕಟ್ಟಡ ನಿರ್ಮಾಣ ಮಾಡಿ ಕೊಡುವ ಭರವಸೆ ಮಾತ್ರ ಸಿಕ್ಕಿದೆ. ಬಡ ಮಹಿಳೆಯರಿಗೆ ನ್ಯಾಯ ದೊರಕಿಸುವಂತೆ ಮುಖಂಡ ಜಗದೀಶ್ ಪಾಂಡೇಶ್ವರ ಒತ್ತಾಯಿಸಿದರು.</p>.<p>ಈ ಸಂಬಂಧ ಈಗಾಗಲೇ ಎರಡು ಪ್ರಕರಣಗಳು ದಾಖಲಾಗಿವೆ. ಎರಡೂ ಕಡೆಯವರನ್ನು ಕರೆಸಿ ಮಾತುಕತೆ ನಡೆಸಿ, ಪ್ರಕರಣವನ್ನು ಸೌಹಾರ್ದಯುತವಾಗಿ ಪರಿಹರಿಸುವಂತೆ ಎಸಿಪಿ ಮಹೇಶ್ ಅವರಿಗೆ ಸೂಚಿಸಿದರು.</p>.<p>ಮೂಡುಬಿದಿರೆ ಪುರಸಭೆ ವ್ಯಾಪ್ತಿಯಲ್ಲಿ ಅಳವಡಿಸಿದ ಅಂಬೇಡ್ಕರ್ ನಾಮಫಲಕವನ್ನು ಪುರಸಭೆ ಅಧಿಕಾರಿಗಳೇ ಕಿತ್ತುಕೊಂಡು ಹೋಗಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಜಗದೀಶ್ ಒತ್ತಾಯಿಸಿದರು. ಪುರಸಭೆ ಅಧಿಕಾರಿಗಳಿಗೆ ಈ ಬಗ್ಗೆ ಪತ್ರ ಬರೆಯಲಾಗುವುದು ಎಂದು ಡಿಸಿಪಿ ಹೇಳಿದರು.</p>.<p>ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಎಸ್ಪಿ ಕುಮಾರಸ್ವಾಮಿ ಇದ್ದರು.</p>.<p class="Briefhead"><strong>ಅಂಬೇಡ್ಕರ್ ಫಲಕ: ಶ್ಲಾಘನೆ</strong><br />ನಗರದ ಬಸ್ಗಳಲ್ಲಿ ಜ್ಯೋತಿ ವೃತ್ತವೆಂದು ಹಾಕಲಾಗಿದ್ದ ಸ್ಟಿಕ್ಕರ್ ತೆಗೆಸಿ, ಅಂಬೇಡ್ಕರ್ ವೃತ್ತ ಎಂದು ಸ್ಟಿಕ್ಕರ್ ಅಳವಡಿಸಿದ್ದಕ್ಕೆ ಪೊಲೀಸ್ ಅಧಿಕಾರಿಗಳ ಬಗ್ಗೆ ಸಭೆಯಲ್ಲಿ ಶ್ಲಾಘನೆ ವ್ಯಕ್ತವಾಯಿತು.</p>.<p>ಸಭೆಯಲ್ಲಿ ಮುಖಂಡರು ಪೊಲೀಸ್ ಆಯುಕ್ತ ಎನ್. ಶಶಿಕುಮಾರ ಅವರ ಮೂಲಕ ಡಿಸಿಪಿ ಹರಿರಾಂ ಶಂಕರ್, ವಿನಯ ಗಾಂವ್ಕರ್ ಹಾಗೂ ಎಸಿಪಿ ನಟರಾಜ್ ಅವರನ್ನು ಶಾಲು ಹೊದಿಸಿ ಗೌರವಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ಪರಿಶಿಷ್ಟ ಸಮುದಾಯಕ್ಕೆ ಮೀಸಲಾಗಿರುವ ಕಾಮಗಾರಿ ಟೆಂಡರ್ಗಳನ್ನು ಮಹಾನಗರ ಪಾಲಿಕೆಯಲ್ಲಿ ಅರ್ಹತೆ ಇಲ್ಲದ ಹೊರ ಜಿಲ್ಲೆಯವರಿಗೆ ನೀಡಲಾಗುತ್ತಿದೆ. ಪಾಲಿಕೆ ಅಧಿಕಾರಿಗಳು ಇದರಲ್ಲಿ ಶಾಮೀಲಾಗಿದ್ದಾರೆ ಎಂದು ದಲಿತ ಮುಖಂಡ ದುರ್ಗಾಪ್ರಸಾದ್ ಸುರತ್ಕಲ್ ಆರೋಪಿಸಿದರು.</p>.<p>ನಗರದ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಕುಂದುಕೊರತೆ ಸಭೆಯಲ್ಲಿ ಅವರು ಈ ವಿಷಯ ಪ್ರಸ್ತಾಪಿಸಿದರು.ಇದಕ್ಕೆ ಪ್ರತಿಕ್ರಿಯಿಸಿದ ಡಿಸಿಪಿ ಹರಿರಾಂ ಶಂಕರ್, ಈ ಸಂಬಂಧ ಪಾಲಿಕೆ ಆಯುಕ್ತರಿಗೆ ಪತ್ರ ಬರೆಯಲಾಗುವುದು ಎಂದು ತಿಳಿಸಿದರು.</p>.<p>ಮುಖಂಡ ವಿಶ್ವನಾಥ್ ಮಾತನಾಡಿ, ಅರಣ್ಯ ಇಲಾಖೆಯಿಂದ ಪರಿಶಿಷ್ಟ ಸಮುದಾಯದವರಿಗೆ ಉಚಿತವಾಗಿ ಅಡುಗೆ ಅನಿಲ ವಿತರಿಸಲಾಗುತ್ತಿದೆ. ಆದರೆ ಏಜೆನ್ಸಿಯವರು ₹ 500 ವಸೂಲಿ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.</p>.<p>ಈ ಬಗ್ಗೆ ಅರಣ್ಯ ಇಲಾಖೆಗೆ ದೂರು ನೀಡುವಂತೆ ಡಿಸಿಪಿ ಸಲಹೆ ನೀಡಿದರು. ಐಕಳದಲ್ಲಿ ಪರಿಶಿಷ್ಟ ಮಹಿಳೆಯ ಮನೆಯ ಬಳಿ ಅಳವಡಿಸಿರುವ ಮೊಬೈಲ್ ಟವರ್ನಿಂದ ತೊಂದರೆಯಾಗುತ್ತಿದೆ. ಅದರಿಂದಾಗಿ ಮಹಿಳೆ ಅನಾರೋಗ್ಯ ಪೀಡಿತರಾಗಿದ್ದು, ಅದನ್ನು ತೆಗೆಯಬೇಕೆಂದು ಎಂದು ಮುಖಂಡ ಎಸ್.ಪಿ.ಆನಂದ ಒತ್ತಾಯಿಸಿದರು. ಈ ಬಗ್ಗೆ ಪರಿಶೀಲಿಸುವಂತೆ ಉತ್ತರ ಉಪವಿಭಾಗದ ಎಸಿಪಿ ಮಹೇಶ್ ಅವರಿಗೆ ಡಿಸಿಪಿ ಸೂಚಿಸಿದರು.</p>.<p>ಕಿನ್ನಿಗೋಳಿಯಲ್ಲಿ ಮೀನು ಮಾರಾಟ ಮಾಡುವ ಮಹಿಳೆಯರಿಗೆ ಬೇರೆ ಮಾರಾಟಗಾರರಿಂದ ತೊಂದರೆಯಾಗುತ್ತಿದೆ. ಪಂಚಾಯಿತಿ ವತಿಯಿಂದ ಪ್ರತ್ಯೇಕ ಕಟ್ಟಡ ನಿರ್ಮಾಣ ಮಾಡಿ ಕೊಡುವ ಭರವಸೆ ಮಾತ್ರ ಸಿಕ್ಕಿದೆ. ಬಡ ಮಹಿಳೆಯರಿಗೆ ನ್ಯಾಯ ದೊರಕಿಸುವಂತೆ ಮುಖಂಡ ಜಗದೀಶ್ ಪಾಂಡೇಶ್ವರ ಒತ್ತಾಯಿಸಿದರು.</p>.<p>ಈ ಸಂಬಂಧ ಈಗಾಗಲೇ ಎರಡು ಪ್ರಕರಣಗಳು ದಾಖಲಾಗಿವೆ. ಎರಡೂ ಕಡೆಯವರನ್ನು ಕರೆಸಿ ಮಾತುಕತೆ ನಡೆಸಿ, ಪ್ರಕರಣವನ್ನು ಸೌಹಾರ್ದಯುತವಾಗಿ ಪರಿಹರಿಸುವಂತೆ ಎಸಿಪಿ ಮಹೇಶ್ ಅವರಿಗೆ ಸೂಚಿಸಿದರು.</p>.<p>ಮೂಡುಬಿದಿರೆ ಪುರಸಭೆ ವ್ಯಾಪ್ತಿಯಲ್ಲಿ ಅಳವಡಿಸಿದ ಅಂಬೇಡ್ಕರ್ ನಾಮಫಲಕವನ್ನು ಪುರಸಭೆ ಅಧಿಕಾರಿಗಳೇ ಕಿತ್ತುಕೊಂಡು ಹೋಗಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಜಗದೀಶ್ ಒತ್ತಾಯಿಸಿದರು. ಪುರಸಭೆ ಅಧಿಕಾರಿಗಳಿಗೆ ಈ ಬಗ್ಗೆ ಪತ್ರ ಬರೆಯಲಾಗುವುದು ಎಂದು ಡಿಸಿಪಿ ಹೇಳಿದರು.</p>.<p>ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಎಸ್ಪಿ ಕುಮಾರಸ್ವಾಮಿ ಇದ್ದರು.</p>.<p class="Briefhead"><strong>ಅಂಬೇಡ್ಕರ್ ಫಲಕ: ಶ್ಲಾಘನೆ</strong><br />ನಗರದ ಬಸ್ಗಳಲ್ಲಿ ಜ್ಯೋತಿ ವೃತ್ತವೆಂದು ಹಾಕಲಾಗಿದ್ದ ಸ್ಟಿಕ್ಕರ್ ತೆಗೆಸಿ, ಅಂಬೇಡ್ಕರ್ ವೃತ್ತ ಎಂದು ಸ್ಟಿಕ್ಕರ್ ಅಳವಡಿಸಿದ್ದಕ್ಕೆ ಪೊಲೀಸ್ ಅಧಿಕಾರಿಗಳ ಬಗ್ಗೆ ಸಭೆಯಲ್ಲಿ ಶ್ಲಾಘನೆ ವ್ಯಕ್ತವಾಯಿತು.</p>.<p>ಸಭೆಯಲ್ಲಿ ಮುಖಂಡರು ಪೊಲೀಸ್ ಆಯುಕ್ತ ಎನ್. ಶಶಿಕುಮಾರ ಅವರ ಮೂಲಕ ಡಿಸಿಪಿ ಹರಿರಾಂ ಶಂಕರ್, ವಿನಯ ಗಾಂವ್ಕರ್ ಹಾಗೂ ಎಸಿಪಿ ನಟರಾಜ್ ಅವರನ್ನು ಶಾಲು ಹೊದಿಸಿ ಗೌರವಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>