<p><strong>ಮಂಗಳೂರು</strong>: ಕೋವಿಡ್-19 ನಿಂದ ಜನರ ಆರ್ಥಿಕ ಸ್ಥಿತಿ ಹದಗೆಟ್ಟಿರುವ ಸಂದಿಗ್ಧ ಪರಿಸ್ಥಿತಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಕೆಲವೊಂದು ಯೋಜನೆಗಳನ್ನು ತನ್ನ ಗ್ರಾಹಕರಿಗೆ ರೂಪಿಸಿದೆ ಎಂದು ಬ್ಯಾಂಕಿನ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.</p>.<p>ಭಾರತೀಯ ರಿಸರ್ವ್ ಬ್ಯಾಂಕ್, ಆಗಸ್ಟ್ವರೆಗೆ ಸಾಲ ಮರುಪಾವತಿಯ ಬಗ್ಗೆ ವಿನಾಯಿತಿ ಘೋಷಿಸಿದ್ದು, ಈ ಅವಧಿಯಲ್ಲಿ ಎಸ್ಸಿಡಿಸಿಸಿ ಬ್ಯಾಂಕ್ ತನ್ನ ಗ್ರಾಹಕರ ಹಿತವನ್ನು ಕಾಪಾಡುವ ನಿಟ್ಟಿನಲ್ಲಿ ಉತ್ತಮ ಸೌಲಭ್ಯ ನೀಡಲು ಮುಂದಾಗಿದೆ. ಗ್ರಾಹಕರು ಪಡೆದ ಸಾಲಗಳ ಕಂತನ್ನು ಈ ಸಮಯದಲ್ಲಿ ಮರುಪಾವತಿಸಿದಲ್ಲಿ, ಬಡ್ಡಿದರದಲ್ಲಿ ಶೇ 2 ರಷ್ಟು ವಿನಾಯಿತಿಯನ್ನು ಬ್ಯಾಂಕ್ ನೀಡಲಿದೆ ಎಂದು ಹೇಳಿದ್ದಾರೆ.</p>.<p>ಪ್ರಸ್ತುತ ಪರಿಸ್ಥಿತಿಯಲ್ಲಿ ಜನರಿಗೆ ಹಣಕಾಸಿನ ಅವಶ್ಯಕತೆ ಇರುವುದರಿಂದ ಚಿನ್ನಾಭರಣ ಸಾಲವನ್ನು ಗ್ರಾಹಕರಿಗೆ ಕನಿಷ್ಠ ಬಡ್ಡಿದರದಲ್ಲಿ ನೀಡುತ್ತಿದೆ. ಪ್ರತಿ ಗ್ರಾಂ.ಗೆ ₹3ಸಾವಿರ ಮೌಲ್ಯವನ್ನು ತಿಂಗಳ ಬಡ್ಡಿ ಶೇ 0.8 ರ ದರದಲ್ಲಿ ನೀಡಲು ಮುಂದಾಗಿದೆ. ಗ್ರಾಹಕರು ಹೆಚ್ಚಿನ ಅವಧಿಗೆ ಠೇವಣಿ ಇಟ್ಟಲ್ಲಿ ಶೇ 0.50ರಷ್ಟು ಹೆಚ್ಚಿನ ಬಡ್ಡಿಯನ್ನು ನೀಡಲಾಗುವುದು. ಈ ಸೌಲಭ್ಯ ಮುಂದಿನ 3 ತಿಂಗಳ ಅವಧಿಗೆ ಮಾತ್ರ ಲಭ್ಯವಿರುತ್ತದೆ ಎಂದು ಹೇಳಿದ್ದಾರೆ.</p>.<p>ಗ್ರಾಹಕರ ಹಿತವನ್ನು ಕಾಪಾಡಿಕೊಂಡು ಕಾರ್ಯನಿರ್ವಹಿಸುತ್ತಿರುವ ಎಸ್ಸಿಡಿಸಿಸಿ ಬ್ಯಾಂಕ್ ಕೈಗೊಂಡಿರುವ ಈ ಹೊಸ ಯೋಜನೆಗಳ ಸೌಲಭ್ಯವನ್ನು ಗ್ರಾಹಕರು ಬ್ಯಾಂಕಿನ ಎಲ್ಲ ಶಾಖೆಗಳಲ್ಲಿ ಪಡೆದುಕೊಳ್ಳಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ಕೋವಿಡ್-19 ನಿಂದ ಜನರ ಆರ್ಥಿಕ ಸ್ಥಿತಿ ಹದಗೆಟ್ಟಿರುವ ಸಂದಿಗ್ಧ ಪರಿಸ್ಥಿತಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಕೆಲವೊಂದು ಯೋಜನೆಗಳನ್ನು ತನ್ನ ಗ್ರಾಹಕರಿಗೆ ರೂಪಿಸಿದೆ ಎಂದು ಬ್ಯಾಂಕಿನ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.</p>.<p>ಭಾರತೀಯ ರಿಸರ್ವ್ ಬ್ಯಾಂಕ್, ಆಗಸ್ಟ್ವರೆಗೆ ಸಾಲ ಮರುಪಾವತಿಯ ಬಗ್ಗೆ ವಿನಾಯಿತಿ ಘೋಷಿಸಿದ್ದು, ಈ ಅವಧಿಯಲ್ಲಿ ಎಸ್ಸಿಡಿಸಿಸಿ ಬ್ಯಾಂಕ್ ತನ್ನ ಗ್ರಾಹಕರ ಹಿತವನ್ನು ಕಾಪಾಡುವ ನಿಟ್ಟಿನಲ್ಲಿ ಉತ್ತಮ ಸೌಲಭ್ಯ ನೀಡಲು ಮುಂದಾಗಿದೆ. ಗ್ರಾಹಕರು ಪಡೆದ ಸಾಲಗಳ ಕಂತನ್ನು ಈ ಸಮಯದಲ್ಲಿ ಮರುಪಾವತಿಸಿದಲ್ಲಿ, ಬಡ್ಡಿದರದಲ್ಲಿ ಶೇ 2 ರಷ್ಟು ವಿನಾಯಿತಿಯನ್ನು ಬ್ಯಾಂಕ್ ನೀಡಲಿದೆ ಎಂದು ಹೇಳಿದ್ದಾರೆ.</p>.<p>ಪ್ರಸ್ತುತ ಪರಿಸ್ಥಿತಿಯಲ್ಲಿ ಜನರಿಗೆ ಹಣಕಾಸಿನ ಅವಶ್ಯಕತೆ ಇರುವುದರಿಂದ ಚಿನ್ನಾಭರಣ ಸಾಲವನ್ನು ಗ್ರಾಹಕರಿಗೆ ಕನಿಷ್ಠ ಬಡ್ಡಿದರದಲ್ಲಿ ನೀಡುತ್ತಿದೆ. ಪ್ರತಿ ಗ್ರಾಂ.ಗೆ ₹3ಸಾವಿರ ಮೌಲ್ಯವನ್ನು ತಿಂಗಳ ಬಡ್ಡಿ ಶೇ 0.8 ರ ದರದಲ್ಲಿ ನೀಡಲು ಮುಂದಾಗಿದೆ. ಗ್ರಾಹಕರು ಹೆಚ್ಚಿನ ಅವಧಿಗೆ ಠೇವಣಿ ಇಟ್ಟಲ್ಲಿ ಶೇ 0.50ರಷ್ಟು ಹೆಚ್ಚಿನ ಬಡ್ಡಿಯನ್ನು ನೀಡಲಾಗುವುದು. ಈ ಸೌಲಭ್ಯ ಮುಂದಿನ 3 ತಿಂಗಳ ಅವಧಿಗೆ ಮಾತ್ರ ಲಭ್ಯವಿರುತ್ತದೆ ಎಂದು ಹೇಳಿದ್ದಾರೆ.</p>.<p>ಗ್ರಾಹಕರ ಹಿತವನ್ನು ಕಾಪಾಡಿಕೊಂಡು ಕಾರ್ಯನಿರ್ವಹಿಸುತ್ತಿರುವ ಎಸ್ಸಿಡಿಸಿಸಿ ಬ್ಯಾಂಕ್ ಕೈಗೊಂಡಿರುವ ಈ ಹೊಸ ಯೋಜನೆಗಳ ಸೌಲಭ್ಯವನ್ನು ಗ್ರಾಹಕರು ಬ್ಯಾಂಕಿನ ಎಲ್ಲ ಶಾಖೆಗಳಲ್ಲಿ ಪಡೆದುಕೊಳ್ಳಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>