ಅಧ್ಯಕ್ಷತೆ ವಹಿಸಿದ್ದ ಎ.ಜೆ ವೈದ್ಯಕೀಯ ಮಹಾವಿದ್ಯಾಲಯ ಡೀನ್ ಡಾ. ಅಶೋಕ್ ಹೆಗ್ಡೆ ಮಾತನಾಡಿ, ದೈಹಿಕವಾಗಿ, ಮಾನಸಿಕವಾಗಿ, ಸಾಮಾಜಿಕ ಹಾಗೂ ನೈತಿಕವಾಗಿ ಸದೃಢವಾಗಿದ್ದಲ್ಲಿ ಮಾತ್ರ ಆರೋಗ್ಯವಂತ ಎಂದು ಗುರುತಿಸಲಾಗುತ್ತದೆ. ವ್ಯಕ್ತಿ ಯಾವುದೇ ಸಮಸ್ಯೆಯಿಂದ ಬಳಲುತ್ತಿದ್ದರೂ ಸಮಾಜ ಅವರನ್ನು ಅಸ್ವಸ್ಥ ವ್ಯಕ್ತಿ ಎಂದು ಗುರುತ್ತಿಸುತ್ತದೆ. ಈ ಹಿನ್ನಲೆಯಲ್ಲಿ ಮಾನಸಿಕ ರೋಗ್ಯದ ಕಡೆಗೆ ಹೆಚ್ಚಿನ ಕಾಳಜಿವಹಿಸಿ, ಆರೋಗ್ಯವಂತ ಸಮಾಜದ ಕಡೆಗೆ ಗಮನ ಹರಿಸಬೇಕಾಗಿದೆ ಎಂದರು.