ಇಲ್ಲಿನ ಮಣಿಹಳ್ಳ ಜಂಕ್ಷನ್ ಬಳಿ ಬೆಳಿಗ್ಗೆ ಕೇಲ್ದೋಡಿಗುತ್ತು ಕೋಟಿ ಪೂಜಾರಿ ಹೊರಕಾಣಿಕೆ ಮೆರವಣಿಗೆಗೆ ಚಾಲನೆ ನೀಡಿದರು. ಮೆರವಣಿಗೆಯಲ್ಲಿ ವಿದ್ಯಾರ್ಥಿಗಳು, ಪೋಷಕರು ಹಾಗೂ ಸ್ಥಳೀಯರು ಪಾಲ್ಗೊಂಡಿದ್ದರು. ಕ್ಲಬ್ಬಿನ ಅಧ್ಯಕ್ಷ ಪ್ರಕಾಶ್ ಅಂಚನ್, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ರಾಮಚಂದ್ರ ಪೂಜಾರಿ, ಮುಖ್ಯಶಿಕ್ಷಕ ಮೌರಿಸ್ ಡಿಸೋಜ, ಸಹಶಿಕ್ಷಕಿ ಹಿಲ್ಡಾ ಫರ್ನಾಂಡಿಸ್, ಅರ್ಚಕ ಗುರುರಾಜ್ ಭಟ್, ಪ್ರಮುಖರಾದ ಜಿ.ಆನಂದ, ಪೂವಪ್ಪ ಮೆಂಡನ್, ಪುರುಷೋತ್ತಮ ಅಂಚನ್, ನವೀನ್ ಸೇಸಗುರಿ, ವಿನೋದ್ ಕರೆಂಕಿ, ವಿಠಲ ಡಿ., ವಸಂತಗೌಡ ಹಳೆಗೇಟು ಇದ್ದರು.