<p><strong>ಬೆಳ್ತಂಗಡಿ</strong>: ಓಸಾಟ್ ಸಂಸ್ಥೆ ವತಿಯಿಂದ ವೇಣೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗಕ್ಕೆ ₹1.25 ಕೋಟಿ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಐದು ತರಗತಿ ಕೊಠಡಿ, ಬಾಲಕಿಯರ ಶೌಚಾಲಯ ಮತ್ತು ವಿಶ್ರಾಂತಿ ಕೊಠಡಿಯ ಭೂಮಿಪೂಜೆಯನ್ನು ಶಾಸಕ ಹರೀಶ್ ಪೂಂಜ ನೆರವೇರಿಸಿದರು.</p>.<p>ದಾನಿಗಳ ಸಹಕಾರದಿಂದ ನಿರ್ಮಿಸಲಾದ ₹10 ಲಕ್ಷ ವೆಚ್ಚದ ನೂತನ ಸಭಾಂಗಣವನ್ನು ಶಾಸಕರು ಇದೇ ವೇಳೆ ಲೋಕಾರ್ಪಣೆ ಮಾಡಿರು.</p>.<p>ಬಳಿಕ ಮಾತನಾಡಿ, ಈ ಸಂಸ್ಥೆಯನ್ನು ಮುಂದಿನ ದಿನಗಳಲ್ಲಿ ಕೆಪಿಎಸ್ ಸಂಸ್ಥೆಯಾಗಿ ಪರಿವರ್ತಿಸಲು ಯತ್ನಿಸುವುದಾಗಿ ಭರವಸೆ ನೀಡಿದರು.</p>.<p>ಕಳೆದ ಶೈಕ್ಷಣಿಕ ವರ್ಷದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹಾಜರಾದ 230 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ 100ರಷ್ಟು ಫಲಿತಾಂಶ ಬಂದಿದ್ದು, ಸಂಸ್ಥೆಯ ಎಲ್ಲಾ ಶಿಕ್ಷಕರನ್ನು ಅಭಿನಂದಿಸಲಾಯಿತು.</p>.<p>ಎಸ್ಡಿಎಂಸಿ ಅಧ್ಯಕ್ಷ ರಾಜೇಶ್ ಪೂಜಾರಿ ಮೂಡುಕೋಡಿ, ನೂತನ ಸಭಾಂಗಣಕ್ಕೆ ಆರ್ಥಿಕ ನೆರವು ನೀಡಿದ ರೋಟರಿ ಕ್ಲಬ್ ಸಿದ್ದಕಟ್ಟೆ ಅಧ್ಯಕ್ಷ ದುರ್ಗಾ ದಾಸ್ ಶೆಟ್ಟಿ, ಹಲವು ವರ್ಷಗಳಿಂದ ಕ್ರೀಡಾಕೂಟಕ್ಕೆ ಸಹಕರಿಸುತ್ತಿರುವ ಮೋಹನ್ ದಾಸ್ ಹೆಗ್ಡೆ ಅವರನ್ನು ಸನ್ಮಾನಿಸಲಾಯಿತು.</p>.<p>ಕಳೆದ ವರ್ಷ ಎಸ್ಸೆಸ್ಸೆಲ್ಸಿಯಲ್ಲಿ ರಾಜ್ಯಕ್ಕೆ ನಾಲ್ಕನೇ ಸ್ಥಾನ ಪಡೆದ ಸುಪ್ರಿಯಾ ಹಾಗೂ 600ಕ್ಕಿಂತ ಹೆಚ್ಚು ಅಂಕ ಪಡೆದ 13 ವಿದ್ಯಾರ್ಥಿಗಳನ್ನು, ರಾಜ್ಯಮಟ್ಟದಲ್ಲಿ ಸಾಧನೆಗೈದ 10 ವಿದ್ಯಾರ್ಥಿಗಳನ್ನು, ಎನ್ಎಂಎಸ್ಎಸ್ ಪರೀಕ್ಷೆ ಉತ್ತೀರ್ಣರಾದ ಆರು ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.</p>.<p>ಓಸಾಟ್ ಸಂಸ್ಥೆಯ ಅಧಿಕಾರಿಗಳಾದ ಬಾಲಕೃಷ್ಣ ರಾವ್, ಕಿಶೋರ್ ಕುಮಾರ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಭಾಸ್ಕರ್ ಪೈ, ಸಿ.ಎ.ಬ್ಯಾಂಕ್ ಅಧ್ಯಕ್ಷ ಸುಂದರ್ ಹೆಗ್ಡೆ, ನಿವೃತ್ತ ಮುಖ್ಯ ಶಿಕ್ಷಕ ಶಿವಶಂಕರ ಭಟ್, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ವಿಜಯ ಗೌಡ, ಲಯನ್ಸ್ ಕ್ಲಬ್ ಅಧ್ಯಕ್ಷ ಸುಧೀರ್ ಭಂಡಾರಿ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ನೇಮಯ್ಯ ಕುಲಾಲ್ ಮತ್ತಿತರರು ಇದ್ದರು.</p>.<p>ಉಪಪ್ರಾಂಶುಪಾಲ ವೆಂಕಟೇಶ್ ಎಸ್.ತುಳುಪುಳೆ ಸ್ವಾಗತಿಸಿದರು. ಶಿಕ್ಷಕಿಯರಾದ ಜ್ಯೋತಿ ಜೂಲಿಯೆಟ್ ಡಿಸೋಜ, ಸುಶೀಲಾ ಜಿ ಕಾರ್ಯಕ್ರಮ ನಿರೂಪಿಸಿದರು.ನೆಲ್ಸನ್ ಹೆರಾಲ್ಡ್ ವಂದಿಸಿದರು.</p>.<p><strong>563ಕ್ಕೂ ಹೆಚ್ಚು ವಿದ್ಯಾರ್ಥಿಗಳು</strong></p><p>ಪ್ರಸ್ತುತ ಈ ಸರ್ಕಾರಿ ವಿದ್ಯಾ ಸಂಸ್ಥೆಯಲ್ಲಿ 563ಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು ಶಾಲೆಯ ಮುಖ್ಯ ಶಿಕ್ಷಕರು ಶಿಕ್ಷಕ ವೃಂದ ಎಸ್ ಡಿಎಂಸಿಯ ಪದಾಧಿಕಾರಿಗಳು ಸದಸ್ಯರು ಶಾಲಾ ಅಭಿವೃದ್ಧಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು ಸಂಸ್ಥೆಯು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದೆ. ಸಂಸ್ಥೆಯ ಅತ್ಯುತ್ತಮ ಶಿಸ್ತು ಸ್ವಚ್ಛ ಪರಿಸರ ಸಹ ಪಠ್ಯ ಚಟುವಟಿಕೆಗಳಲ್ಲಿ ಅತ್ಯುತ್ತಮ ಸಾಧನೆ ಎಲ್ಲವನ್ನು ಪರಿಗಣಿಸಿ ಈ ಸಂಸ್ಥೆಯನ್ನು ಆಯ್ಕೆ ಮಾಡಲಾಗಿದ್ದುಅಮೆರಿಕ ಮೂಲದ ದಾನಿಗಳಿಂದ ಸುಸಜ್ಜಿತ ಕಟ್ಟಡ ನಿರ್ಮಾಣ ಕಾರ್ಯಕ್ಕೆ ಚಾಲನೆ ದೊರಕಿದೆ. ಓಸಾಟ್ ಸಂಸ್ಥೆಯ 127ನೇ ಯೋಜನೆ ಇದಾಗಿದ್ದು ವೇಣೂರು ನಂತಹ ಗ್ರಾಮೀಣ ಪ್ರದೇಶಕ್ಕೆ ಇದೊಂದು ವರದಾನವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳ್ತಂಗಡಿ</strong>: ಓಸಾಟ್ ಸಂಸ್ಥೆ ವತಿಯಿಂದ ವೇಣೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗಕ್ಕೆ ₹1.25 ಕೋಟಿ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಐದು ತರಗತಿ ಕೊಠಡಿ, ಬಾಲಕಿಯರ ಶೌಚಾಲಯ ಮತ್ತು ವಿಶ್ರಾಂತಿ ಕೊಠಡಿಯ ಭೂಮಿಪೂಜೆಯನ್ನು ಶಾಸಕ ಹರೀಶ್ ಪೂಂಜ ನೆರವೇರಿಸಿದರು.</p>.<p>ದಾನಿಗಳ ಸಹಕಾರದಿಂದ ನಿರ್ಮಿಸಲಾದ ₹10 ಲಕ್ಷ ವೆಚ್ಚದ ನೂತನ ಸಭಾಂಗಣವನ್ನು ಶಾಸಕರು ಇದೇ ವೇಳೆ ಲೋಕಾರ್ಪಣೆ ಮಾಡಿರು.</p>.<p>ಬಳಿಕ ಮಾತನಾಡಿ, ಈ ಸಂಸ್ಥೆಯನ್ನು ಮುಂದಿನ ದಿನಗಳಲ್ಲಿ ಕೆಪಿಎಸ್ ಸಂಸ್ಥೆಯಾಗಿ ಪರಿವರ್ತಿಸಲು ಯತ್ನಿಸುವುದಾಗಿ ಭರವಸೆ ನೀಡಿದರು.</p>.<p>ಕಳೆದ ಶೈಕ್ಷಣಿಕ ವರ್ಷದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹಾಜರಾದ 230 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ 100ರಷ್ಟು ಫಲಿತಾಂಶ ಬಂದಿದ್ದು, ಸಂಸ್ಥೆಯ ಎಲ್ಲಾ ಶಿಕ್ಷಕರನ್ನು ಅಭಿನಂದಿಸಲಾಯಿತು.</p>.<p>ಎಸ್ಡಿಎಂಸಿ ಅಧ್ಯಕ್ಷ ರಾಜೇಶ್ ಪೂಜಾರಿ ಮೂಡುಕೋಡಿ, ನೂತನ ಸಭಾಂಗಣಕ್ಕೆ ಆರ್ಥಿಕ ನೆರವು ನೀಡಿದ ರೋಟರಿ ಕ್ಲಬ್ ಸಿದ್ದಕಟ್ಟೆ ಅಧ್ಯಕ್ಷ ದುರ್ಗಾ ದಾಸ್ ಶೆಟ್ಟಿ, ಹಲವು ವರ್ಷಗಳಿಂದ ಕ್ರೀಡಾಕೂಟಕ್ಕೆ ಸಹಕರಿಸುತ್ತಿರುವ ಮೋಹನ್ ದಾಸ್ ಹೆಗ್ಡೆ ಅವರನ್ನು ಸನ್ಮಾನಿಸಲಾಯಿತು.</p>.<p>ಕಳೆದ ವರ್ಷ ಎಸ್ಸೆಸ್ಸೆಲ್ಸಿಯಲ್ಲಿ ರಾಜ್ಯಕ್ಕೆ ನಾಲ್ಕನೇ ಸ್ಥಾನ ಪಡೆದ ಸುಪ್ರಿಯಾ ಹಾಗೂ 600ಕ್ಕಿಂತ ಹೆಚ್ಚು ಅಂಕ ಪಡೆದ 13 ವಿದ್ಯಾರ್ಥಿಗಳನ್ನು, ರಾಜ್ಯಮಟ್ಟದಲ್ಲಿ ಸಾಧನೆಗೈದ 10 ವಿದ್ಯಾರ್ಥಿಗಳನ್ನು, ಎನ್ಎಂಎಸ್ಎಸ್ ಪರೀಕ್ಷೆ ಉತ್ತೀರ್ಣರಾದ ಆರು ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.</p>.<p>ಓಸಾಟ್ ಸಂಸ್ಥೆಯ ಅಧಿಕಾರಿಗಳಾದ ಬಾಲಕೃಷ್ಣ ರಾವ್, ಕಿಶೋರ್ ಕುಮಾರ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಭಾಸ್ಕರ್ ಪೈ, ಸಿ.ಎ.ಬ್ಯಾಂಕ್ ಅಧ್ಯಕ್ಷ ಸುಂದರ್ ಹೆಗ್ಡೆ, ನಿವೃತ್ತ ಮುಖ್ಯ ಶಿಕ್ಷಕ ಶಿವಶಂಕರ ಭಟ್, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ವಿಜಯ ಗೌಡ, ಲಯನ್ಸ್ ಕ್ಲಬ್ ಅಧ್ಯಕ್ಷ ಸುಧೀರ್ ಭಂಡಾರಿ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ನೇಮಯ್ಯ ಕುಲಾಲ್ ಮತ್ತಿತರರು ಇದ್ದರು.</p>.<p>ಉಪಪ್ರಾಂಶುಪಾಲ ವೆಂಕಟೇಶ್ ಎಸ್.ತುಳುಪುಳೆ ಸ್ವಾಗತಿಸಿದರು. ಶಿಕ್ಷಕಿಯರಾದ ಜ್ಯೋತಿ ಜೂಲಿಯೆಟ್ ಡಿಸೋಜ, ಸುಶೀಲಾ ಜಿ ಕಾರ್ಯಕ್ರಮ ನಿರೂಪಿಸಿದರು.ನೆಲ್ಸನ್ ಹೆರಾಲ್ಡ್ ವಂದಿಸಿದರು.</p>.<p><strong>563ಕ್ಕೂ ಹೆಚ್ಚು ವಿದ್ಯಾರ್ಥಿಗಳು</strong></p><p>ಪ್ರಸ್ತುತ ಈ ಸರ್ಕಾರಿ ವಿದ್ಯಾ ಸಂಸ್ಥೆಯಲ್ಲಿ 563ಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು ಶಾಲೆಯ ಮುಖ್ಯ ಶಿಕ್ಷಕರು ಶಿಕ್ಷಕ ವೃಂದ ಎಸ್ ಡಿಎಂಸಿಯ ಪದಾಧಿಕಾರಿಗಳು ಸದಸ್ಯರು ಶಾಲಾ ಅಭಿವೃದ್ಧಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು ಸಂಸ್ಥೆಯು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದೆ. ಸಂಸ್ಥೆಯ ಅತ್ಯುತ್ತಮ ಶಿಸ್ತು ಸ್ವಚ್ಛ ಪರಿಸರ ಸಹ ಪಠ್ಯ ಚಟುವಟಿಕೆಗಳಲ್ಲಿ ಅತ್ಯುತ್ತಮ ಸಾಧನೆ ಎಲ್ಲವನ್ನು ಪರಿಗಣಿಸಿ ಈ ಸಂಸ್ಥೆಯನ್ನು ಆಯ್ಕೆ ಮಾಡಲಾಗಿದ್ದುಅಮೆರಿಕ ಮೂಲದ ದಾನಿಗಳಿಂದ ಸುಸಜ್ಜಿತ ಕಟ್ಟಡ ನಿರ್ಮಾಣ ಕಾರ್ಯಕ್ಕೆ ಚಾಲನೆ ದೊರಕಿದೆ. ಓಸಾಟ್ ಸಂಸ್ಥೆಯ 127ನೇ ಯೋಜನೆ ಇದಾಗಿದ್ದು ವೇಣೂರು ನಂತಹ ಗ್ರಾಮೀಣ ಪ್ರದೇಶಕ್ಕೆ ಇದೊಂದು ವರದಾನವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>