ಮಧ್ಯಾಹ್ನದ ಬಿಸಿಯೂಟಕ್ಕೆ ಅನ್ನ, ಸಾಂಬಾರು ಜೊತೆಗೆ ಪಾಯಸ, ಲಾಡು, ಬರ್ಫಿ ಇನ್ನಿತರ ಸಿಹಿಯನ್ನು ಮಕ್ಕಳಿಗೆ ನೀಡಲಾಯಿತು. ಶಕ್ತಿನಗರದ ನಾಲ್ಯಪದವು ಸರ್ಕಾರಿ ಪ್ರೌಢಶಾಲೆಯಲ್ಲಿ ಮಕ್ಕಳಿಗೆ ಪೆನ್ನು ಮತ್ತು ಒಂದು ಪ್ಯಾಕ್ ಬಿಸ್ಕತ್ ನೀಡಿ ಶಿಕ್ಷಕರು ಸ್ವಾಗತಿಸಿದರು. ‘15 ದಿನ ಮುಂಚಿತವಾಗಿ ಶಾಲೆಗೆ ಬಣ್ಣ ಬಳಿದು, ಗೋಡೆಯ ಮೇಲೆ ಬುದ್ಧನ ಚಿತ್ರ, ವರ್ಲಿ ಚಿತ್ರಗಳನ್ನು ಚಿತ್ರಿಸಲಾಗಿದೆ. ಮೊದಲ ದಿನವೇ ಮಕ್ಕಳಿಗೆ ಪಠ್ಯಪುಸ್ತಕ, ಸಮವಸ್ತ್ರ ವಿತರಣೆ ಮಾಡಲಾಯಿತು’ ಎಂದು ಮುಖ್ಯ ಶಿಕ್ಷಕಿ ಶರ್ಮಿಳಾ ತಿಳಿಸಿದರು.