<p><strong>ಕಡಬ (ಉಪ್ಪಿನಂಗಡಿ): </strong>ಕಡಬ ರಬ್ಬರ್ ಸಂಶೋಧನಾ ಕೇಂದ್ರದ ವಿಜ್ಞಾನಿಯೊಬ್ಬರು ಹೊಳೆಗೆ ಹಾರಿದ್ದನ್ನು ಕಂಡ ಸಾರ್ವಜನಿಕರು, ಅವರನ್ನು ರಕ್ಷಿಸಿದ್ದಾರೆ.</p>.<p>ಕಡಬ ಕೆಂಚಭಟ್ರೆಯಲ್ಲಿರುವ ಭಾರತೀಯ ರಬ್ಬರ್ ಸಂಶೋಧನಾ ಕೇಂದ್ರದ ವಿಜ್ಞಾನಿ, ತಮಿಳುನಾಡಿನ ರವಿಚಂದ್ರನ್ ಅವರು ಬುಧವಾರ ಸಂಜೆ ಬೈಕ್ನಲ್ಲಿ ಬಂದು, ಇಲ್ಲಿಗೆ ಸಮೀಪದ ಹೊಸ್ಮಠದಲ್ಲಿ ಹೊಳೆಗೆ ಹಾರಿದ್ದಾರೆ. ನೀರಿನಲ್ಲಿ ಕೊಚ್ಚಿಕೊಂಡು ಹೋಗುತ್ತಿದ್ದ ಅವರನ್ನು ಸಾರ್ವಜನಿಕರು ಹಾಗೂ ಇಬ್ಬರು ಲೈನ್ಮನ್ಗಳು ಸೇರಿ ರಕ್ಷಣೆ ಮಾಡಿದ್ದಾರೆ. ಕಡಬ ಎಸ್.ಐ ರುಕ್ಮ ನಾಯ್ಕ್ ಮತ್ತು ಸಿಬ್ಬಂದಿ, ಅವರನ್ನು ಸಮುದಾಯ ಆಸ್ಪತ್ರೆಗೆ ದಾಖಲಿಸಿದರು.</p>.<p>‘ರವಿಚಂದ್ರನ್ ಅವರು ಪತ್ನಿ, ಇಬ್ಬರು ಮಕ್ಕಳೊಂದಿಗೆ ರಬ್ಬರ್ ಸಂಶೋಧನಾ ಕೇಂದ್ರದ ವಸತಿ ಗೃಹದಲ್ಲಿ ವಾಸವಾಗಿದ್ದಾರೆ. ಹೊಳೆಗೆ ಹಾರುವ ವೇಳೆ ಅವರು ಮದ್ಯಸೇವನೆ ಮಾಡಿದ್ದರು’ ಎಂದು ಸ್ಥಳೀಯರು ತಿಳಿಸಿದ್ದಾರೆ. ‘ಹೊಳೆಗೆ ಹಾರಲು ಕಾರಣ ತಿಳಿದು ಬಂದಿಲ್ಲ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಡಬ (ಉಪ್ಪಿನಂಗಡಿ): </strong>ಕಡಬ ರಬ್ಬರ್ ಸಂಶೋಧನಾ ಕೇಂದ್ರದ ವಿಜ್ಞಾನಿಯೊಬ್ಬರು ಹೊಳೆಗೆ ಹಾರಿದ್ದನ್ನು ಕಂಡ ಸಾರ್ವಜನಿಕರು, ಅವರನ್ನು ರಕ್ಷಿಸಿದ್ದಾರೆ.</p>.<p>ಕಡಬ ಕೆಂಚಭಟ್ರೆಯಲ್ಲಿರುವ ಭಾರತೀಯ ರಬ್ಬರ್ ಸಂಶೋಧನಾ ಕೇಂದ್ರದ ವಿಜ್ಞಾನಿ, ತಮಿಳುನಾಡಿನ ರವಿಚಂದ್ರನ್ ಅವರು ಬುಧವಾರ ಸಂಜೆ ಬೈಕ್ನಲ್ಲಿ ಬಂದು, ಇಲ್ಲಿಗೆ ಸಮೀಪದ ಹೊಸ್ಮಠದಲ್ಲಿ ಹೊಳೆಗೆ ಹಾರಿದ್ದಾರೆ. ನೀರಿನಲ್ಲಿ ಕೊಚ್ಚಿಕೊಂಡು ಹೋಗುತ್ತಿದ್ದ ಅವರನ್ನು ಸಾರ್ವಜನಿಕರು ಹಾಗೂ ಇಬ್ಬರು ಲೈನ್ಮನ್ಗಳು ಸೇರಿ ರಕ್ಷಣೆ ಮಾಡಿದ್ದಾರೆ. ಕಡಬ ಎಸ್.ಐ ರುಕ್ಮ ನಾಯ್ಕ್ ಮತ್ತು ಸಿಬ್ಬಂದಿ, ಅವರನ್ನು ಸಮುದಾಯ ಆಸ್ಪತ್ರೆಗೆ ದಾಖಲಿಸಿದರು.</p>.<p>‘ರವಿಚಂದ್ರನ್ ಅವರು ಪತ್ನಿ, ಇಬ್ಬರು ಮಕ್ಕಳೊಂದಿಗೆ ರಬ್ಬರ್ ಸಂಶೋಧನಾ ಕೇಂದ್ರದ ವಸತಿ ಗೃಹದಲ್ಲಿ ವಾಸವಾಗಿದ್ದಾರೆ. ಹೊಳೆಗೆ ಹಾರುವ ವೇಳೆ ಅವರು ಮದ್ಯಸೇವನೆ ಮಾಡಿದ್ದರು’ ಎಂದು ಸ್ಥಳೀಯರು ತಿಳಿಸಿದ್ದಾರೆ. ‘ಹೊಳೆಗೆ ಹಾರಲು ಕಾರಣ ತಿಳಿದು ಬಂದಿಲ್ಲ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>