ಬಂಟ್ವಾಳ: ಇಲ್ಲಿನ ಸಜಿಪಮುನ್ನೂರು ಗ್ರಾಮದ ಕಂದೂ ಎಂಬಲ್ಲಿ ಲಾರಿ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ಮೃತಪಟ್ಟ ಘಟನೆ ಶನಿವಾರ ಸಂಜೆ ನಡೆದಿದೆ.
ಇಲ್ಲಿನ ಅಮ್ಟಾಡಿ ಗ್ರಾಮದ ಕಲಾಯಿ ನಿವಾಸಿ, ಬಂಟ್ವಾಳ ಬೈಪಾಸ್ ಪೆಟ್ರೋಲ್ ಪಂಪ್ ಮ್ಯಾನೇಜರ್ ರಾಮ ನಾಯ್ಕ್ (47) ಮೃತಪಟ್ಟವರು. ಅವರಿ ಸ್ಕೂಟರ್ನಲ್ಲಿ ಮುಡಿಪುವಿಗೆ ಹೋಗಿ ಬಿ.ಸಿ.ರೋಡಿಗೆ ಬರುವಾಗ ಹಿಂಬದಿಯಿಂದ ಬಂದ ಲಾರಿ ಡಿಕ್ಕಿಯಾಗಿದ್ದು, ಮೃತಪಟ್ಟಿದ್ದಾರೆ ಎಂದು ಸಂಚಾರ ಠಾಣೆ ಪೊಲೀಸರು ತಿಳಿಸಿದ್ದಾರೆ.