ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್‌ಸಿಪಿ, ಟಿಎಸ್‌ಪಿ ಸಮರ್ಪಕ ಅನುಷ್ಠಾನ

ಮೇಲ್ವಿಚಾರಣಾ ಸಮಿತಿ ಸಭೆಯಲ್ಲಿ ತಾಲ್ಲೂಕು ಪಂಚಾಯಿತಿ ಇಒ ಸದಾನಂದ
Last Updated 20 ಆಗಸ್ಟ್ 2020, 7:26 IST
ಅಕ್ಷರ ಗಾತ್ರ

ಮಂಗಳೂರು: ಪರಿಶಿಷ್ಟ ಜಾತಿ ಉಪ- ಯೋಜನೆ (ಎಸ್‌ಸಿಪಿ) ಮತ್ತು ಬುಡಕಟ್ಟು ಉಪ(ಟಿಎಸ್‌ಪಿ) ಯೋಜನೆಯಡಿ ಎಲ್ಲ ಇಲಾಖೆಗಳು ಬಿಡುಗಡೆಗೊಂಡ ಅನುದಾನವನ್ನು ಸಮರ್ಪಕವಾಗಿ ಖರ್ಚು ಮಾಡಬೇಕು ಎಂದು ಮಂಗಳೂರು ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಣಾಧಿಕಾರಿ ಸದಾನಂದ ತಿಳಿಸಿದ್ದಾರೆ.

ಬುಧವಾರ ಮಂಗಳೂರು ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಪರಿಶಿಷ್ಟ ಜಾತಿ ಉಪ-ಯೋಜನೆ ಮತ್ತು ಬುಡಕಟ್ಟು ಉಪ ಯೋಜನೆ ಮೇಲ್ವಿಚಾರಣಾ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

ಕೃಷಿ ಇಲಾಖೆಯ ವಿಶೇಷ ಘಟಕ ಯೋಜನೆಯಡಿ ಮಣ್ಣಿನ ಸತ್ವ ಹೆಚ್ಚಿಸುವಿಕೆ ಯೋಜನೆಯನ್ವಯ ಹಸಿರೆಲೆ ಗೊಬ್ಬರ, ಬೀಜ, ಕೃಷಿ, ಸುಣ್ಣ ಕಾರ್ಯಕ್ರಮದಲ್ಲಿ ಲಘು ಪೋಷಕಾಂಶ. ಸಾವಯವ ಗೊಬ್ಬರ ವಿತರಣೆಗೆ ರಾಜ್ಯ ವಲಯದಲ್ಲಿ ಶೇ 0.64ರಷ್ಟು ಅನುದಾನ ಬಿಡುಗಡೆಗೊಂಡಿದೆ. ಜಿಲ್ಲಾ ವಲಯದಲ್ಲಿ ಅನುದಾನ ಬಿಡುಗಡೆಗೊಂಡಿಲ್ಲ. ಪರಿಶಿಷ್ಟ ವರ್ಗಗಳ ಉಪಯೋಜನೆಯಡಿ 2020-21 ನೇ ಸಾಲಿಗೆ ರಾಜ್ಯ ವಲಯದಲ್ಲಿ ಶೇ 0.21 ರಷ್ಟು ಅನುದಾನ ಬಿಡುಗಡೆಗೊಂಡಿದೆ. ಜಿಲ್ಲಾ ವಲಯದಲ್ಲಿ ಅನುದಾನ ಬಿಡುಗಡೆಗೊಂಡಿಲ್ಲ ಎಂದು ಮಂಗಳೂರು ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದರು.

ತೋಟಗಾರಿಕೆ ಇಲಾಖೆಯ ವಿಶೇಷ ಘಟಕ ಯೋಜನೆಯಡಿ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆ ಕಾರ್ಯಕ್ರಮದಲ್ಲಿ ಹೂ ಬೆಳೆಗಾರರಿಗೆ ಪರಿಹಾರ ಧನ ಘಟಕಕ್ಕೆ ರಾಜ್ಯವಲಯದಲ್ಲಿ ಅನುದಾನ ಬಿಡುಗಡೆಯಾಗಿದೆ. ಜಿಲ್ಲಾ ವಲಯದಲ್ಲಿ ರೈತರಿಗೆ ತರಬೇತಿ ಕಾರ್ಯಕ್ರಮದಡಿ ₹5ಸಾವಿರ ಅನುದಾನ ಬಿಡುಗಡೆಯಾಗಿದೆ. ಪರಿಶಿಷ್ಟ ವರ್ಗಗಳ ಉಪಯೋಜನೆಯಡಿ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆ ಕಾರ್ಯಕ್ರಮದಲ್ಲಿ ಹೂ ಬೆಳೆಗಾರರಿಗೆ ಪರಿಹಾರ ಧನ ಘಟಕಕ್ಕೆ ರಾಜ್ಯವಲಯದಲ್ಲಿ ₹2ಸಾವಿರ ಬಿಡುಗಡೆಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಪರಿಶಿಷ್ಟ ವರ್ಗಗಳ ಉಪ ಯೋಜನೆಯಡಿ ಜಿಲ್ಲಾ ವಲಯ, ಹೈನುಗಾರಿಕೆ ಘಟಕಕ್ಕೆ ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ 1 ಮಿಶ್ರತಳಿ ಹಸು ಸಾಕಾಣಿಕೆಗೆ ಬ್ಯಾಂಕ್ ಸಾಲದೊಂದಿಗೆ ಶೇ 90 ರಷ್ಟು ಸಹಾಯಧನ ನೀಡುವ ಕಾರ್ಯಕ್ರಮದಲ್ಲಿ 2020-21 ನೇ ಸಾಲಿಗೆ ನಿಗದಿಪಡಿಸಿದ ಗುರಿಯನ್ವಯ 3 ರಷ್ಟು ಭೌತಿಕ ಹಾಗೂ ₹1.62 ಲಕ್ಷ ಆರ್ಥಿಕ ಪ್ರಗತಿ ಸಾಧಿಸಿದೆ ಎಂದು ವಲಯ ಅರಣ್ಯಾಧಿಕಾರಿ ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಮಂಗಳೂರು (ನಗರ) ವಿಶೇಷ ಘಟಕ ಯೋಜನೆಯಡಿ ಪೂರಕ ಪೌಷ್ಟಿಕ ಆಹಾರ ಕಾರ್ಯಕ್ರಮದನ್ವಯ ಶೇ 15.83 ರಷ್ಟು ಅನುದಾನ ಬಿಡುಗಡೆಯಾಗಿದೆ.

ಶೇ 7.60 ರಷ್ಟು ಪ್ರಗತಿ ಸಾಧಿಸಿದೆ. ಸ್ತ್ರೀ ಶಕ್ತಿ ಯೋಜನೆ ಕಾರ್ಯಕ್ರಮಕ್ಕೆ ಅನುದಾನ ಬಂದಿಲ್ಲ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ತಿಳಿಸಿದರು.

ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಸುನೀತಾ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ಧರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT