ಕೃಷಿ ಇಲಾಖೆಯ ವಿಶೇಷ ಘಟಕ ಯೋಜನೆಯಡಿ ಮಣ್ಣಿನ ಸತ್ವ ಹೆಚ್ಚಿಸುವಿಕೆ ಯೋಜನೆಯನ್ವಯ ಹಸಿರೆಲೆ ಗೊಬ್ಬರ, ಬೀಜ, ಕೃಷಿ, ಸುಣ್ಣ ಕಾರ್ಯಕ್ರಮದಲ್ಲಿ ಲಘು ಪೋಷಕಾಂಶ. ಸಾವಯವ ಗೊಬ್ಬರ ವಿತರಣೆಗೆ ರಾಜ್ಯ ವಲಯದಲ್ಲಿ ಶೇ 0.64ರಷ್ಟು ಅನುದಾನ ಬಿಡುಗಡೆಗೊಂಡಿದೆ. ಜಿಲ್ಲಾ ವಲಯದಲ್ಲಿ ಅನುದಾನ ಬಿಡುಗಡೆಗೊಂಡಿಲ್ಲ. ಪರಿಶಿಷ್ಟ ವರ್ಗಗಳ ಉಪಯೋಜನೆಯಡಿ 2020-21 ನೇ ಸಾಲಿಗೆ ರಾಜ್ಯ ವಲಯದಲ್ಲಿ ಶೇ 0.21 ರಷ್ಟು ಅನುದಾನ ಬಿಡುಗಡೆಗೊಂಡಿದೆ. ಜಿಲ್ಲಾ ವಲಯದಲ್ಲಿ ಅನುದಾನ ಬಿಡುಗಡೆಗೊಂಡಿಲ್ಲ ಎಂದು ಮಂಗಳೂರು ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದರು.