<p><strong>ಮಂಗಳೂರು:</strong> ಎಸ್ಡಿಎಂ ಮಂಗಳಜ್ಯೋತಿ ಸಮಗ್ರ ಶಾಲೆಯು ನೂರಾರು ವಿಶೇಷ ಮಕ್ಕಳಿಗೆ ದಾರಿ ತೋರಿದೆ. ಇಂತಹ ಸಂಸ್ಥೆಯನ್ನು ಮುನ್ನೆಸಲು ಅಗತ್ಯವಿರುವುದು ಮಾನಸಿಕ ನಿರ್ಧಾರವೇ ಹೊರತು ಹಣವಲ್ಲ ಎಂದು ಎಸ್ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ. ಹರ್ಷೇಂದ್ರ ಕುಮಾರ್ ಹೇಳಿದರು.</p>.<p>ವಾಮಂಜೂರಿನ ಎಸ್ಡಿಎಂ ಸಮಗ್ರ ಶಾಲೆಯ ರಜತ ಮಹೋತ್ಸವ ಸಂದರ್ಭದಲ್ಲಿ ದಿ. ಮಾತೃಶ್ರೀ ರತ್ನಮ್ಮ ಹೆಗ್ಗಡೆ ಸಂಸ್ಮರಣಾರ್ಥ ಶುಕ್ರವಾರ ಆಯೋಜಿಸಿದ್ದ ವಾರ್ಷಿಕ ಸಾಂಸ್ಕೃತಿಕ ಸ್ಪರ್ಧೆ ‘ಕಲೋತ್ಸವ’ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಸಂಸ್ಥೆಗೆ ಸುಸಜ್ಜಿತ ಗ್ರಂಥಾಲಯ ಒದಗಿಸಲಾಗಿದ್ದು, ವಿದ್ಯಾರ್ಥಿಗಳು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಶಾಲೆಯ ಅಭಿವೃದ್ಧಿಗಾಗಿ ಎಸ್ಡಿಎಂ ಶಿಕ್ಷಣ ಸಂಸ್ಥೆ ಸಾಕಷ್ಟು ಮುತುವರ್ಜಿ ವಹಿಸಿದೆ. ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶಾಲೆಗೆ ಶೇ 100 ಫಲಿತಾಂಶ ಬಂದಿರುವುದು ಇತಿಹಾಸ ಎಂದರು.</p>.<p>ಅಂಗವಿಕಲರ ಕಲ್ಯಾಣ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯೆ ಶ್ರುತಾ ಜಿ. ನವೀಕೃತ ಗ್ರಂಥಾಲಯ ಉದ್ಘಾಟಿಸಿದರು. ಶಾಲೆಯಲ್ಲಿ ಕಾರ್ಯನಿರ್ವಹಿಸಿ ನಿವೃತ್ತರಾಗಿರುವ, ಪ್ರಸಕ್ತ ಕರ್ತವ್ಯದಲ್ಲಿರುವ ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬ್ಬಂದಿಯನ್ನು ಗೌರವಿಸಲಾಯಿತು.</p>.<p>ಅಂಗವಿಕಲರ ಕಲ್ಯಾಣ ಸಂಸ್ಥೆ ಕಾರ್ಯದರ್ಶಿ ಪ್ರೊ. ಎ.ರಾಜೇಂದ್ರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.</p>.<p>ಕಲೋತ್ಸವದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ 11 ಭಿನ್ನ ಚೇತನ ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಮಂಗಳೂರು ಶಕ್ತಿನಗರದ ಸಾನಿಧ್ಯ ವಿಶೇಷ ಶಾಲೆ ಪ್ರಥಮ, ಸುರತ್ಕಲ್ ಲಯನ್ಸ್ ವಿಶೇಷ ಶಾಲೆ ದ್ವಿತೀಯ ಹಾಗೂ ಮರ್ಕಳದ ಬೆಥನಿ ಜೀವನ ಜ್ಯೋತಿ ಶಾಲೆ ತೃತೀಯ ಬಹುಮಾನ ಪಡೆದಿವೆ.</p>.<p>ಶಾಲೆ ಆಡಳಿತಾಧಿಕಾರಿ ನರೇಶ್ ಮಲ್ಲಿಗೆಮಾಡು ಸ್ವಾಗತಿಸಿದರು. ಉದ್ಯಮಿ ಆನಂದ ಶೆಟ್ಟಿ, ಸಂಸ್ಥೆಯ ಖಜಾಂಚಿ ಕೆ. ದೇವರಾಜ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ಸುಚೇತಾ, ಎಸ್ಡಿಎಂ ಐಟಿಐ ಉಪನ್ಯಾಸಕಿ ಪ್ರಫುಲ್ಲಾ, ಮುಖ್ಯ ಶಿಕ್ಷಕ ವಿಠಲ ವಾಗ್ಮೋರೆ, ಶಿಕ್ಷಕಿ ಹರಿಣಾಕ್ಷಿ ಉಪಸ್ಥಿತರಿದ್ದರು. ಶಿಕ್ಷಕಿ ರಮ್ಯಾ ನಿರೂಪಿಸಿದರು. ಪ್ರೌಢಶಾಲಾ ಮುಖ್ಯ ಶಿಕ್ಷಕ ರಮೇಶ್ ಆಚಾರ್ಯ ಕೆ. ವಂದಿಸಿದರು. ಶನಿವಾರ ಸಂಸ್ಥೆಯ ರಜತಮಹೋತ್ಸವ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ಎಸ್ಡಿಎಂ ಮಂಗಳಜ್ಯೋತಿ ಸಮಗ್ರ ಶಾಲೆಯು ನೂರಾರು ವಿಶೇಷ ಮಕ್ಕಳಿಗೆ ದಾರಿ ತೋರಿದೆ. ಇಂತಹ ಸಂಸ್ಥೆಯನ್ನು ಮುನ್ನೆಸಲು ಅಗತ್ಯವಿರುವುದು ಮಾನಸಿಕ ನಿರ್ಧಾರವೇ ಹೊರತು ಹಣವಲ್ಲ ಎಂದು ಎಸ್ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ. ಹರ್ಷೇಂದ್ರ ಕುಮಾರ್ ಹೇಳಿದರು.</p>.<p>ವಾಮಂಜೂರಿನ ಎಸ್ಡಿಎಂ ಸಮಗ್ರ ಶಾಲೆಯ ರಜತ ಮಹೋತ್ಸವ ಸಂದರ್ಭದಲ್ಲಿ ದಿ. ಮಾತೃಶ್ರೀ ರತ್ನಮ್ಮ ಹೆಗ್ಗಡೆ ಸಂಸ್ಮರಣಾರ್ಥ ಶುಕ್ರವಾರ ಆಯೋಜಿಸಿದ್ದ ವಾರ್ಷಿಕ ಸಾಂಸ್ಕೃತಿಕ ಸ್ಪರ್ಧೆ ‘ಕಲೋತ್ಸವ’ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಸಂಸ್ಥೆಗೆ ಸುಸಜ್ಜಿತ ಗ್ರಂಥಾಲಯ ಒದಗಿಸಲಾಗಿದ್ದು, ವಿದ್ಯಾರ್ಥಿಗಳು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಶಾಲೆಯ ಅಭಿವೃದ್ಧಿಗಾಗಿ ಎಸ್ಡಿಎಂ ಶಿಕ್ಷಣ ಸಂಸ್ಥೆ ಸಾಕಷ್ಟು ಮುತುವರ್ಜಿ ವಹಿಸಿದೆ. ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶಾಲೆಗೆ ಶೇ 100 ಫಲಿತಾಂಶ ಬಂದಿರುವುದು ಇತಿಹಾಸ ಎಂದರು.</p>.<p>ಅಂಗವಿಕಲರ ಕಲ್ಯಾಣ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯೆ ಶ್ರುತಾ ಜಿ. ನವೀಕೃತ ಗ್ರಂಥಾಲಯ ಉದ್ಘಾಟಿಸಿದರು. ಶಾಲೆಯಲ್ಲಿ ಕಾರ್ಯನಿರ್ವಹಿಸಿ ನಿವೃತ್ತರಾಗಿರುವ, ಪ್ರಸಕ್ತ ಕರ್ತವ್ಯದಲ್ಲಿರುವ ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬ್ಬಂದಿಯನ್ನು ಗೌರವಿಸಲಾಯಿತು.</p>.<p>ಅಂಗವಿಕಲರ ಕಲ್ಯಾಣ ಸಂಸ್ಥೆ ಕಾರ್ಯದರ್ಶಿ ಪ್ರೊ. ಎ.ರಾಜೇಂದ್ರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.</p>.<p>ಕಲೋತ್ಸವದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ 11 ಭಿನ್ನ ಚೇತನ ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಮಂಗಳೂರು ಶಕ್ತಿನಗರದ ಸಾನಿಧ್ಯ ವಿಶೇಷ ಶಾಲೆ ಪ್ರಥಮ, ಸುರತ್ಕಲ್ ಲಯನ್ಸ್ ವಿಶೇಷ ಶಾಲೆ ದ್ವಿತೀಯ ಹಾಗೂ ಮರ್ಕಳದ ಬೆಥನಿ ಜೀವನ ಜ್ಯೋತಿ ಶಾಲೆ ತೃತೀಯ ಬಹುಮಾನ ಪಡೆದಿವೆ.</p>.<p>ಶಾಲೆ ಆಡಳಿತಾಧಿಕಾರಿ ನರೇಶ್ ಮಲ್ಲಿಗೆಮಾಡು ಸ್ವಾಗತಿಸಿದರು. ಉದ್ಯಮಿ ಆನಂದ ಶೆಟ್ಟಿ, ಸಂಸ್ಥೆಯ ಖಜಾಂಚಿ ಕೆ. ದೇವರಾಜ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ಸುಚೇತಾ, ಎಸ್ಡಿಎಂ ಐಟಿಐ ಉಪನ್ಯಾಸಕಿ ಪ್ರಫುಲ್ಲಾ, ಮುಖ್ಯ ಶಿಕ್ಷಕ ವಿಠಲ ವಾಗ್ಮೋರೆ, ಶಿಕ್ಷಕಿ ಹರಿಣಾಕ್ಷಿ ಉಪಸ್ಥಿತರಿದ್ದರು. ಶಿಕ್ಷಕಿ ರಮ್ಯಾ ನಿರೂಪಿಸಿದರು. ಪ್ರೌಢಶಾಲಾ ಮುಖ್ಯ ಶಿಕ್ಷಕ ರಮೇಶ್ ಆಚಾರ್ಯ ಕೆ. ವಂದಿಸಿದರು. ಶನಿವಾರ ಸಂಸ್ಥೆಯ ರಜತಮಹೋತ್ಸವ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>