ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಾಂಗ್ರೆಸ್ ತನ್ನ ಸಾಧನೆಗಳಿಂದ ಅಧಿಕಾರಕ್ಕೆ ಬಂದಿದ್ದಲ್ಲ, ಬಿಜೆಪಿಯ ಆಡಳಿತ ವೈಫಲ್ಯದಿಂದ ಅಧಿಕಾರ ಹಿಡಿದಿದೆ. ಕಳೆದ ಚುನಾವಣೆಯಲ್ಲಿ ಶೇ 67ರಷ್ಟು ದಲಿತ ಮತಗಳು, ಶೇ 92ರಷ್ಟು ಮುಸ್ಲಿಂ ಮತಗಳು ಕಾಂಗ್ರೆಸ್ಗೆ ದೊರೆತಿವೆ. ಆದರೆ, ಕಾಂಗ್ರೆಸ್ ಸರ್ಕಾರವು, ಮೀಸಲಾತಿ ಜಾರಿ ಸೇರಿದಂತೆ ಯಾವ ಭರವಸೆಯನ್ನೂ ಈಡೇರಿಸಿಲ್ಲ. ಮುಸ್ಲಿಂ ಸಮುದಾಯಕ್ಕೆ ಶೇ 8ರಷ್ಟು ಮೀಸಲಾತಿ ನೀಡಬೇಕು ಎಂಬ ಆಗ್ರಹಕ್ಕೆ ಪ್ರತಿಯಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಹಿಜಾಬ್ ವಿಷಯ ಪ್ರಸ್ತಾಪಿಸಿ, ದಿಕ್ಕು ತಪ್ಪಿಸುವ ಹುನ್ನಾರ ಮಾಡಿದ್ದಾರೆ. ಪ್ಯಾಲೆಸ್ತೀನ್ ಪರ ಪ್ರಧಾನಿ ಕೂಡ ಬೆಂಬಲ ಸೂಚಿಸಿದ್ದಾರೆ, ಆದರೆ, ಪ್ಯಾಲಸ್ತೀನ್ ಶಾಂತಿಗಾಗಿ ಪ್ರತಿಭಟನೆ ನಡೆಸಿದವರನ್ನು ಬಂಧಿಸುವ ಮೂಲಕ ಕಾಂಗ್ರೆಸ್ ತನ್ನ ಮಾನಸಿಕತೆಯನ್ನು ಪ್ರದರ್ಶಿಸಿದೆ’ ಎಂದರು.