ಇಲ್ಲಿ ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು,‘ಉಳ್ಳಾಲ ನಗರದಲ್ಲೇ ಪರ್ಯಾಯ ನಿವೇಶನ ನೀಡಲು ಸಾಧ್ಯವಿಲ್ಲ. ಅಲ್ಲಿ ಒಂದಿಂಚೂ ಸರ್ಕಾರಿ ಜಾಗ ಲಭ್ಯ ಇಲ್ಲ. ಗ್ರಾಮಾಂತರ ಪ್ರದೇಶದಲ್ಲಿ ಸರ್ಕಾರಿ ಜಾಗ ಲಭ್ಯ ಇದ್ದು, ಅಲ್ಲಿಗೆ ಹೋಗಲು ಸಂತ್ರಸ್ತರು ಸಿದ್ಧರಿರಬೇಕು. ಅವರಿಗೆ ಹಕ್ಕುಪತ್ರ ನೀಡುತ್ತೇವೆ. ಆ ಜಾಗದಕ್ಕೆ ಸರ್ಕಾರದಿಂದ ಮೂಲಸೌಕರ್ಯ ಕಲ್ಪಿಸುತ್ತೇವೆ. ನಾನು ವೈಯಕ್ತಿಕವಾಗಿಯೂ ನೆರವಾಗುತ್ತೇನೆ’ ಎಂದರು.