ಮಂಗಳೂರು: ಕೋವಿಡ್- 19 ನಿರೋಧಕ ಲಸಿಕೆಯನ್ನು ಸೋಮವಾರ ಬೆಳಿಗ್ಗೆ ನಗರದಲ್ಲಿನ ಜಿಲ್ಲಾ ಸರ್ಕಾರಿ ವೆನ್ಲಾಕ್ ಆಸ್ಪತ್ರೆಯ ಆಯುಷ್ ವಿಭಾಗದಲ್ಲಿ ಸ್ವತಃ ಹಾಕಿಸಿಕೊಳ್ಳುವುದರೊಂದಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಎರಡನೇ ಸುತ್ತಿನ ಕೋವಿಡ್- 19 ನಿರೋಧಕಾ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದರು.
ಮಂಗಳೂರು ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್, ಡಿಸಿಪಿ ಹರಿರಾಂ ಶಂಕರ್, ಆರೋಗ್ಯ ಇಲಾಖೆಯ ಅಧಿಕಾರಿಗಳು ಇದ್ದರು.