ಉಪ್ಪಿನಂಗಡಿ ಹಳೆಗೇಟ್ ಬಳಿ ಹಿಂದೂ ಕಾರ್ಯಕರ್ತನ ಮೇಲೆ ನಡೆದ ತಲ್ವಾರ್ ದಾಳಿಗೆ ಸಂಬಂಧಿಸಿ ಪೊಲೀಸರು ವಶಕ್ಕೆ ಪಡೆದಿದ್ದ ಮೂವರು ಪಿಎಫ್ಐ (ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ) ಮುಖಂಡರನ್ನು ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಿ, ಕಾರ್ಯಕರ್ತರು ಮಂಗಳವಾರ ಠಾಣೆಯ ಎದುರು ಪ್ರತಿಭಟನೆ ನಡೆಸಿದ್ದರು. ‘ರಾತ್ರಿ ವೇಳೆ ಮತ್ತೆ ಠಾಣೆಯ ಎದುರು ಸೇರಿದ್ದ ಪ್ರತಿಭಟನಕಾರರು ಠಾಣೆಗೆ ನುಗ್ಗಲು ಯತ್ನಿಸಿದ್ದರು. ಆ ವೇಳೆ ಅವರನ್ನು ತಡೆಯಲು ಮುಂದಾದ ಪೊಲೀಸರ ಮೇಲೆ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ. ಇನ್ಸ್ಪೆಕ್ಟರ್ ಉಮೇಶ್, ಎಸ್ಐಗಳಾದ ಪ್ರಸನ್ನ, ವಾಮನ ಕುಟ್ಟಿ ಹಾಗೂ ನಾಲ್ವರು ಸಿಬ್ಬಂದಿಗೆ ಗಾಯಗಳಾಗಿವೆ’ ಎಂದು ಎಸ್ಪಿ ಋಷಿಕೇಶ್ ಸೋನಾವಣೆ ತಿಳಿಸಿದ್ದಾರೆ.