ಪೋಷಣ್ ಮಾಸಾಚರಣೆ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನೆಯ ಮಂಗಳೂರು ಗ್ರಾಮಾಂತರ ಘಟಕದ ವತಿಯಿಂದ ಕೊಲ್ಯ ನಾರಾಯಣಗುರು ಸಭಾಭವನದಲ್ಲಿ ಅನ್ನಪ್ರಾಶನ, ಪೌಷ್ಟಿಕ ಆಹಾರ ಪ್ರದರ್ಶನ ಹಾಗೂ ಸೀಮಂತ ಕಾರ್ಯಕ್ರಮ ಆಯೋಜಿಸಲಾಗಿತ್ತು. ತಾಲ್ಲೂಕು ಮಟ್ಟದಈ ಕಾರ್ಯಕ್ರಮದ ಪ್ರಚಾರಕ್ಕಾಗಿ ಸಭಾಂಗಣದ ಮುಂದೆ ಅಳವಡಿಸಲಾಗಿದ್ದ ಫ್ಲೆಕ್ಸ್ನಲ್ಲಿ ಗರ್ಭಿಣಿಯೊಬ್ಬರ ಭಾವಚಿತ್ರವನ್ನು ಬಳಸಲಾಗಿತ್ತು.ಗರ್ಭಿಣಿಯ ಅನುಮತಿ ಪಡೆಯದೆಯೇ ಅವರ ಭಾವಚಿತ್ರವನ್ನು ಫ್ಲೆಕ್ಸ್ನಲ್ಲಿ ಬಳಸಲಾಗಿದೆ ಎಂದು ಬಜರಂಗದಳದ ಆರೋಪಿಸಿದ ಕಾರ್ಯಕರ್ತರು ಇದಕ್ಕೆ ವಿರೋಧ ವ್ಯಕ್ತಪಡಿಸಿದರು.