<p><strong>ಮಂಗಳೂರು</strong>: ಎಲಿಯ ಕನ್ಸ್ಟ್ರಕ್ಷನ್ ಕಂಪನಿಯ ಅವ್ಯವಹಾರ ಪ್ರಕರಣದಲ್ಲಿ ವಶಪಡಿಸಿಕೊಂಡಿದ್ದ ಮೂರು ಕಾರುಗಳ ಪೈಕಿ ಜಾಗ್ವಾರ್ ಕಾರನ್ನು ಪೊಲೀಸರೇ ಮಾರಾಟ ಮಾಡಿರುವುದು ತನಿಖೆಯಲ್ಲಿ ಗೊತ್ತಾಗಿದೆ.</p>.<p>₹30 ಕೋಟಿ ವಂಚನೆ ಸಂಬಂಧ ಎಲಿಯ ಕನ್ಸ್ಟ್ರಕ್ಷನ್ ಆಂಡ್ ಬಿಲ್ಡರ್ಸ್ ಕಂಪನಿಯ ಜಾಗ್ವಾರ್, ಪೋರ್ಷೆ ಹಾಗೂ ಬಿಎಂಡಬ್ಲ್ಯು ಕಾರುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಈ ಪೈಕಿ ಎರಡು ಕಾರುಗಳನ್ನು ಸ್ವಂತಕ್ಕೆ ಬಳಸಿಕೊಂಡಿದ್ದ ಸಿಸಿಬಿ ಪೊಲೀಸರು, ಆರೋಪಿಯೊಬ್ಬನ ಮೂಲಕವೇ ಜಾಗ್ವಾರ್ ಕಾರು ಮಾರಾಟ ಮಾಡಿಸಿದ್ದರು.</p>.<p>ಈ ಬಗ್ಗೆ ತನಿಖೆ ನಡೆಸುವಂತೆ ಡಿಜಿಪಿ ಪ್ರವೀಣ್ ಸೂದ್ ಅವರು ಸಿಐಡಿಗೆ ಸೂಚಿಸಿದ್ದರು. ಅದರಂತೆ ಸಿಐಡಿ ಅಧಿಕಾರಿಗಳು ವರದಿ ನೀಡುವಂತೆ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅವರಿಗೆ ಸೂಚನೆ ನೀಡಿದ್ದರು. ಈ ಕುರಿತು ಡಿಸಿಪಿ ವಿನಯ್ ಗಾಂವ್ಕರ್ ಅವರ ವರದಿಯನ್ನು ಆಧರಿಸಿ, ಸಿಐಡಿಯಿಂದ ಡಿಜಿಪಿಗೆ ತನಿಖಾ ವರದಿ ಸಲ್ಲಿಕೆಯಾಗಿದೆ.</p>.<p>ಎರಡು ಕಾರುಗಳನ್ನು ಪೊಲೀಸರು ಸ್ವಂತಕ್ಕೆ ಬಳಕೆ ಮಾಡಿಕೊಂಡಿದ್ದು, ಜಾಗ್ವಾರ್ ಕಾರನ್ನು ಪ್ರಕರಣದ ಆರೋಪಿಯಿಂದಲೇ ಮಾರಾಟ ಮಾಡಿಸಿ, ಬಂದ ಹಣದಲ್ಲೂ ಅವ್ಯವಹಾರ ಮಾಡಿದ್ದರು ಎಂಬುದನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ಎಲಿಯ ಕನ್ಸ್ಟ್ರಕ್ಷನ್ ಕಂಪನಿಯ ಅವ್ಯವಹಾರ ಪ್ರಕರಣದಲ್ಲಿ ವಶಪಡಿಸಿಕೊಂಡಿದ್ದ ಮೂರು ಕಾರುಗಳ ಪೈಕಿ ಜಾಗ್ವಾರ್ ಕಾರನ್ನು ಪೊಲೀಸರೇ ಮಾರಾಟ ಮಾಡಿರುವುದು ತನಿಖೆಯಲ್ಲಿ ಗೊತ್ತಾಗಿದೆ.</p>.<p>₹30 ಕೋಟಿ ವಂಚನೆ ಸಂಬಂಧ ಎಲಿಯ ಕನ್ಸ್ಟ್ರಕ್ಷನ್ ಆಂಡ್ ಬಿಲ್ಡರ್ಸ್ ಕಂಪನಿಯ ಜಾಗ್ವಾರ್, ಪೋರ್ಷೆ ಹಾಗೂ ಬಿಎಂಡಬ್ಲ್ಯು ಕಾರುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಈ ಪೈಕಿ ಎರಡು ಕಾರುಗಳನ್ನು ಸ್ವಂತಕ್ಕೆ ಬಳಸಿಕೊಂಡಿದ್ದ ಸಿಸಿಬಿ ಪೊಲೀಸರು, ಆರೋಪಿಯೊಬ್ಬನ ಮೂಲಕವೇ ಜಾಗ್ವಾರ್ ಕಾರು ಮಾರಾಟ ಮಾಡಿಸಿದ್ದರು.</p>.<p>ಈ ಬಗ್ಗೆ ತನಿಖೆ ನಡೆಸುವಂತೆ ಡಿಜಿಪಿ ಪ್ರವೀಣ್ ಸೂದ್ ಅವರು ಸಿಐಡಿಗೆ ಸೂಚಿಸಿದ್ದರು. ಅದರಂತೆ ಸಿಐಡಿ ಅಧಿಕಾರಿಗಳು ವರದಿ ನೀಡುವಂತೆ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅವರಿಗೆ ಸೂಚನೆ ನೀಡಿದ್ದರು. ಈ ಕುರಿತು ಡಿಸಿಪಿ ವಿನಯ್ ಗಾಂವ್ಕರ್ ಅವರ ವರದಿಯನ್ನು ಆಧರಿಸಿ, ಸಿಐಡಿಯಿಂದ ಡಿಜಿಪಿಗೆ ತನಿಖಾ ವರದಿ ಸಲ್ಲಿಕೆಯಾಗಿದೆ.</p>.<p>ಎರಡು ಕಾರುಗಳನ್ನು ಪೊಲೀಸರು ಸ್ವಂತಕ್ಕೆ ಬಳಕೆ ಮಾಡಿಕೊಂಡಿದ್ದು, ಜಾಗ್ವಾರ್ ಕಾರನ್ನು ಪ್ರಕರಣದ ಆರೋಪಿಯಿಂದಲೇ ಮಾರಾಟ ಮಾಡಿಸಿ, ಬಂದ ಹಣದಲ್ಲೂ ಅವ್ಯವಹಾರ ಮಾಡಿದ್ದರು ಎಂಬುದನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>