ಅಖಿಲ ಭಾರತ ವಿಚಾರವಾದಿ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಪ್ರೊ.ನರೇಂದ್ರ ನಾಯಕ್ ನೇತೃತ್ವದಲ್ಲಿ ಬುಧವಾರ ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಬರಹಗಾರ್ತಿ ಚಂದ್ರಕಲಾ ನಂದಾವರ, ಹಿರಿಯ ದಲಿತ ಮುಖಂಡ ಎಂ.ದೇವದಾಸ್, ಡಿವೈಎಫ್ಐ ರಾಜ್ಯ ಘಟಕದ ಅಧ್ಯಕ್ಷ ಮುನೀರ್ ಕಾಟಿಪಳ್ಳ, ಹಿರಿಯ ವಕೀಲ ದಯಾನಾಥ್ ಕೋಟ್ಯಾನ್, ಅಖಿಲ ಭಾರತ ವಕೀಲರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಯಶವಂತ ಮರೋಳಿ, ಕರಾವಳಿ ಕರ್ನಾಟಕ ಜನಾಭಿವೃದ್ಧಿ ವೇದಿಕೆಯ ಸಂಯೋಜಕಿ ವಿದ್ಯಾ ದಿನಕರ್ ಸೇರಿದಂತೆ 25 ಮಂದಿ ಹೇಳಿಕೆಗೆ ಸಹಿ ಮಾಡಿದ್ದಾರೆ.