ಪಾಲಿಕೆಯ ಪರಿಸರ ಎಂಜಿನಿಯರ್ ಮಧು ಮನೋಹರ್ ಮಾತನಾಡಿ, ಕರ್ನಾಟಕ ಕಾನೂನು ಸೇವಾ ಪ್ರಾಧಿಕಾರದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ನಗರದ ಘನ ತ್ಯಾಜ್ಯ ವಿಲೇವಾರಿಯನ್ನು ಗಂಭೀರವಾಗಿ ಪರಿಗಣಿಸಿದೆ. ಘನ ತ್ಯಾಜ್ಯ ನಿರ್ವಹಣೆ ಕಾಯ್ದೆ 2016 ಅನ್ನು ಪರಿಣಾಮಕಾರಿ ಅನುಷ್ಠಾನ ಮಾಡುವಂತೆ ಮಹಾನಗರ ಪಾಲಿಕೆಗೆ ಹೈಕೋರ್ಟ್ ಸೂಚನೆ ನೀಡಿದೆ. ಅದರಂತೆ ಕಸ ವಿಂಗಡನೆ ಮಾಡುವ ವಿಷಯದಲ್ಲಿ ತ್ಯಾಜ್ಯ ಉತ್ಪಾದಕರು, ಪಾಲಿಕೆಗೆ ತಮ್ಮದೇ ಆದ ಜವಾಬ್ದಾರಿ ಇದೆ ಎಂದು ಹೇಳಿದರು.