ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೈಂಗಿಕ ಕಿರುಕುಳ ಪ್ರಕರಣ: ರಾಜೇಶ್ ಭಟ್ ಪತ್ನಿ ಸೇರಿ ಇಬ್ಬರ ಬಂಧನ, ಜಾಮೀನು ಮಂಜೂರು

ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ‌ ಕಿರುಕುಳ ಆರೋಪ
Last Updated 10 ಡಿಸೆಂಬರ್ 2021, 4:59 IST
ಅಕ್ಷರ ಗಾತ್ರ

ಮಂಗಳೂರು: ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಆರೋಪಿಯ ರಾಜೇಶ್ ಭಟ್ ಪತ್ನಿ ಹಾಗೂ ಆರೋಪಿಗೆ ಸಹಕಾರ ನೀಡಿದ್ದ ಅಚ್ಯುತ ಭಟ್ ಅವರ ಪುತ್ರ ಅಲೋಕ್ ನನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಜಾಮೀನು ಮಂಜೂರು ಮಾಡಲಾಗಿದೆ.

ಆರೋಪಿ ವಕೀಲ ಕೆ.ಎಸ್‌.ಎನ್‌. ರಾಜೇಶ್‌ ಭಟ್‌ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ ನಡೆಸಿದ ಬಗ್ಗೆ ಅ.18ರಂದು ನಗರದ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅದಾದ ಬಳಿಕ ಆರೋಪಿ ತಲೆಮರೆಸಿಕೊಂಡಿದ್ದಾನೆ.

ರಾಜೇಶ್ ಭಟ್‌ಗೆ ಸಹಕಾರ ನೀಡಿದ್ದ ಆರೋಪದ ಮೇಲೆ ಈ ಹಿಂದೆ ಅನಂತ ಭಟ್‌ನನ್ನು ಬಂಧಿಸಲಾಗಿತ್ತು. ಈ ಮಧ್ಯೆ ಮತ್ತೊಬ್ಬ ಆರೋಪಿ ಅಚ್ಯುತ ಭಟ್ ಮತ್ತು ಆತನ ಪುತ್ರ ಅಲೋಕ್ ಕೂಡ ಆರೋಪಿ ರಾಜೇಶ್ ಭಟ್‌ಗೆ ನೆರವು ನೀಡುತ್ತಿದ್ದರು ಎನ್ನಲಾಗಿದೆ. ಈ ಬಗ್ಗೆ ಮಾಹಿತಿ ಕಲೆ ಹಾಕಿದ ಪೊಲೀಸರು ಗುರುವಾರ ಅಚ್ಚುತ ಭಟ್‌ನ ಮಗ ಆಲೋಕ್ ಮತ್ತು ರಾಜೇಶ್ ಭಟ್‌ನ ಪತ್ನಿಯನ್ನೂ ಬಂಧಿಸಿದ್ದಾರೆ. ಈಕೆ ಆರೋಪಿ ಪತಿಗೆ ಸಹಕಾರ ನೀಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT