‘ವಿದ್ಯಾರ್ಥಿನಿಯು ಮರು ಪರೀಕ್ಷೆ ಬರೆಯುವ ಉದ್ದೇಶದಿಂದ ಸೋಮವಾರ ಪರೀಕ್ಷಾ ಶುಲ್ಕ ಪಾವತಿಸಲು ಬಂದಿದ್ದಳು. ಆಗ ಆರೋಪಿ ಶಿಕ್ಷಕ ಜೀವ ವಿಜ್ಞಾನ ವಿಷಯದಲ್ಲಿ ಸಂತಾನೋತ್ಪತ್ತಿ ಕುರಿತ ಪಾಠ ಮಾಡುವುದಾಗಿ ಹೇಳಿ ಆಕೆಯೊಂದಿಗೆ ಲೈಂಗಿಕ ಉದ್ದೇಶದಲ್ಲಿ ಮಾತನಾಡಿದ್ದಾನೆ. ಅನುಚಿತವಾಗಿ ವರ್ತಿಸಿದ್ದಾನೆ. ಈ ಕುರಿತು ಬಾಲಕಿ ನೀಡಿದ ದೂರನ್ನು ಆಧರಿಸಿ ಪ್ರಕರಣ ದಾಖಲಿಸಿ, ಆತನನ್ನು ಬಂಧಿಸಲಾಗಿದೆ’ ಎಂದು ಪುತ್ತೂರು ಉಪ ವಿಭಾಗದ ಡಿವೈಎಸ್ಪಿ ದಿನಕರ ಶೆಟ್ಟಿ ತಿಳಿಸಿದರು.