ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಂಗಳೂರಿನ ಹವ್ಯಕ ಮಂಡಲದ ಆಶ್ರಯದಲ್ಲಿ ಶುಕ್ರವಾರ ನಂತೂರಿನ ಭಾರತಿ ಸಮೂಹ ಸಂಸ್ಥೆಯ ಶಂಕರ ಸಭಾಭವನದಲ್ಲಿ ಆಯೋಜಿಸಿದ್ದ ಶಂಕರಾಚಾರ್ಯರ ಜಯಂತಿಯಲ್ಲಿ ಅವರು ಮಾತನಾಡಿದರು. ‘ಕ್ರಿಸ್ತಪೂರ್ವದಿಂದಲೂ ಭಾರತ ದೇಶ ಹಲವು ದಾಳಿಗಳಿಗೆ ತುತ್ತಾಗಿ ಸಾಕಷ್ಟು ಸಂಪತ್ತನ್ನು ಕಳೆದುಕೊಂಡಿದೆ. ಆದರೆ, ಯಾರಿಂದಲೂ ಹಿಂದೂ ಧರ್ಮ ಹಾಗೂ ಸಂಸ್ಕೃತಿಯನ್ನು ನಾಶಪಡಿಸಲು ಆಗಲಿಲ್ಲ. ಇದಕ್ಕೆ ಬಹುಮುಖ್ಯ ಕಾರಣ ಶಂಕರಾಚಾರ್ಯರು ನೀಡಿದ ಕಾಣಿಕೆ’ ಎಂದರು.