'ನನ್ನ ಆಶಯದಂತೆ ಸುಮಾರು ₹ 2.5 ಕೋಟಿ ಮೊತ್ತದಲ್ಲಿ ದೇವಸ್ಥಾನ ನವೀಕರಣಗೊಂಡಿದೆ. ಶಿರಾ ಶಿಲೆ ಕಲ್ಲು, ತಾಮ್ರ ಹಾಗೂ ಮರಗಳನ್ನು ಬಳಸಿ ವಾಸ್ತು ಪ್ರಕಾರ ಗುಡಿಯ ವಿನ್ಯಾಸಗೊಳಿಸಲಾಗಿದೆ. ಇದೇ 28 ರಂದು ಸಂಜೆ 5 ರಿಂದ ಉಗ್ರಾಣ ಮುಹೂರ್ತ, ಸಂಜೆ 7 ರಿಂದ ಧಾರ್ಮಿಕ ಸಭೆ, ಇದೇ 29ರಂದು ಬೆಳಿಗ್ಗೆ 11.45ಕ್ಕೆ ಭದ್ರಕಾಳಿ ವಿಗ್ರಹ ಪ್ರತಿಷ್ಠೆ, ಸಂಜೆ 7 ರಿಂದ ಧಾರ್ಮಿಕ ಸಭೆ, ಮಾರ್ಚ್ 1 ರಂದು ಬೆಳಿಗ್ಗೆ 7.43ಕ್ಕೆ ಬ್ರಹ್ಮಕಲಶಾಭಿಷೇಕ ಚಂಡಿಕಾ ಯಾಗ, ಮಹಾಪೂಜೆ ಮತ್ತು ಸಂಜೆ 7 ರಿಂದ ಧಾರ್ಮಿಕ ಸಭೆ ನಡೆಯಲಿವೆ' ಎಂದರು.