<p><strong>ಮಂಗಳೂರು</strong>: ‘ಬಿಜೆಪಿ ಟಿಕೆಟ್ ಕೊಡಿಸುವ ನೆಪದಲ್ಲಿ ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಗೆ ವಂಚಿಸಿದ ಪ್ರಕರಣದ ಆರೋಪಿ ಚೈತ್ರಾ ಕುಂದಾಪುರಗೂ ಬಜರಂಗದಳಕ್ಕೂ ಸಂಬಂಧವಿಲ್ಲ. ಆಕೆ ನಮ್ಮ ಸಂಘಟನೆಯ ಸದಸ್ಯೆ ಅಲ್ಲ’ ಎಂದು ವಿಎಚ್ಪಿ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್ವೆಲ್ ಹೇಳಿದರು.</p><p>ಇಲ್ಲಿ ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು, ‘ಆಕೆ ಉತ್ತಮ ಭಾಷಣ ಮಾಡುತ್ತಿದ್ದರು. ಆ ಕಾರಣಕ್ಕೆ ಬಜರಂಗ ದಳದ ಕಾರ್ಯಕ್ರಮಗಳಿಗೆ ಆಹ್ವಾನಿಸಿದ್ದು ನಿಜ. ಅವರು ತಪ್ಪು ಮಾಡಿದ್ದರೆ ಅದಕ್ಕೆ ಶಿಕ್ಷೆ ಆಗಲಿ. ನಮ್ಮ ಸಂಘಟನೆ ಇಂತಹ ಅಕ್ರಮಗಳಿಗೆ ಆಸ್ಪದ ನೀಡುವುದಿಲ್ಲ. ಇಂತಹ ಪ್ರಕರಣಗಳು ಮರುಕಳಿಸಬಾರದು. ಈ ಪ್ರಕರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಅವರನ್ನು ಶಿಕ್ಷೆಗೆ ಒಳಪಡಿಸಬೇಕು’ ಎಂದರು.</p><p>‘ಈ ವಂಚನೆ ಪ್ರಕರಣದ ಬಗ್ಗೆ ಗುರುಪುರ ವಜ್ರದೇಹಿ ಮಠದ ಸ್ವಾಮೀಜಿ ಎರಡು ತಿಂಗಳ ಹಿಂದೆ ನನ್ನ ಗಮನಕ್ಕೆ ತಂದಿದ್ದು ನಿಜ. ನೀವು ತಪ್ಪು ಮಾಡಿಲ್ಲವಾದರೆ ತಲೆಕೆಡಿಸಿಕೊಳ್ಳಬೇಡಿ ಎಂದು ಧೈರ್ಯ ಹೇಳಿದ್ದೆ’ ಎಂದರು.</p><p><strong>ವಿಎಚ್ಪಿಗೆ 60 ವರ್ಷ: ಬಜರಂಗದಳದಿಂದ ಶೌರ್ಯ ಜಾಗರಣ ರಥಯಾತ್ರೆ</strong></p><p>‘ವಿಶ್ವ ಹಿಂದೂ ಪರಿಷತ್ಗೆ 2024ಕ್ಕೆ 60 ವರ್ಷ ತುಂಬಲಿರುವ ಪ್ರಯುಕ್ತ ಬಜರಂಗದಳವು ಇದೇ 25ರಿಂದ ರಾಜ್ಯದಾದ್ಯಂತ 'ಶೌರ್ಯ ಜಾಗರಣ ರಥಯಾತ್ರೆ"ಯನ್ನು ಹಮ್ಮಿಕೊಳ್ಳಲಿದೆ’ ಎಂದು ಶರಣ್ ಪಂಪ್ವೆಲ್ ತಿಳಿಸಿದರು.</p><p>‘ಎರಡೂವರೆ ಸಾವಿರ ವರ್ಷಗಳಿಂದಲೂ ನಮ್ಮ ರಾಷ್ಟ್ರದ ಮೇಲೆ ಪರಕೀಯರಿಂದ ದಾಳಿಗಳು ನಡೆಯುತ್ತಾ ಬಂದಿವೆ. ಅವುಗಳೆಲ್ಲವನ್ನು ಎದುರಿಸಿ ಸನಾತನ ಧರ್ಮವನ್ನು ಸಂರಕ್ಷಿಸುವಲ್ಲಿ ಲಕ್ಷಾಂತರ ವೀರ ಪರಾಕ್ರಮಿಗಳು ಬಲಿದಾನ ಮಾಡಿದ್ದಾರೆ. ಇಂದಿನ ಯುವ ಪೀಳಿಗೆಯು ಈ ಬಲಿದಾನಗಳನ್ನು ಸ್ಮರಿಸುವಂತೆ ಮಾಡಲು ಈ ರಥಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ’ ಎಂದರು.</p><p>‘ರಾಜ್ಯದಲ್ಲಿ ಬಜರಂಗ ದಳದ 2000 ಶಾಖೆಗಳಿವೆ. ಇದನ್ನು 2024ರ ವೇಳೆಗೆ 5 ಸಾವಿರಕ್ಕೆ ಹೆಚ್ಚಿಸುವ ಗುರಿಯನ್ನು ಹೊಂದಿದ್ದೇವೆ. ಪಾಶ್ಚಾತ್ಯ ಸಂಸ್ಕೃತಿಯಿಂದ , ದುಶ್ಚಟಗಳಿಂದ ಮುಕ್ತಿ ಪಡೆದು, ಸ್ವಾವಲಂಬಿ ಬದುಕು ಕಟ್ಟಿಕೊಳ್ಳುವಂತೆ ಯುವಪೀಳಿಗೆಯನ್ನು ಪ್ರೇರೇಪಿಸುವುದೂ ಈ ರಥಯಾತ್ರೆಯ ಉದ್ದೇಶ. ಲವ್ ಜಿಹಾದ್, ಮತಾಂತರ ಹಾಗೂ ಗೋಹತ್ಯೆ ತಡೆಯ ಬಗ್ಗೆಯೂ ಜಾಗೃತಿ ಮೂಡಿಸಲಿದ್ದೇವೆ’ ಎಂದರು.</p><p>‘ಚಿತ್ರದುರ್ಗದಲ್ಲಿ ಇದೇ 25ರಂದು ರಥಯಾತ್ರೆಗೆ ಚಾಲನೆ ನೀಡಲಾಗುತ್ತದೆ. ದಾವಣಗೆರೆ, ಶಿವಮೊಗ್ಗ, ಸಾಗರ, ಶೃಂಗೇರಿ, ಬಾಳೆಹೊನ್ನೂರು, ಚಿಕ್ಕಮಗಳೂರು, ಹಾಸನ, ತುಮಕೂರು, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ಮಂಡ್ಯ, ಮೈಸೂರು, ಕೊಡಗು, ಸುಳ್ಯ, ಪುತ್ತೂರು, ಮಂಗಳೂರು, ಮೂಲಕ ಸಾಗುವ ಈ ಯಾತ್ರೆಯು ಉಡುಪಿಯಲ್ಲಿ ಅ.10ರಂದು ಸಮಾರೋಪಗೊಳ್ಳಲಿದೆ. ಆ ಪ್ರಯುಕ್ತ ಹಿಂದೂ ಸಮಾಜೋತ್ಸವವನ್ನು ಏರ್ಪಡಿಸಲಿದ್ದು, 25 ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆ ಇದೆ’ ಎಂದರು.</p><p>‘ರಥಯಾತ್ರೆಯು ಅ. 6ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯವನ್ನು ಪ್ರವೇಶಿಸಲಿದೆ. ಅ. 7ರಂದು ಪುತ್ತೂರಿನಲ್ಲಿ, ಅ. 9ರಂದು ಮಂಗಳೂರಿನಲ್ಲಿ ಸಾರ್ವಜನಿಕ ಸಭೆಗಳನ್ನು ಏರ್ಪಡಿಸಲಿದ್ದೇವೆ’ ಎಂದು ತಿಳಿಸಿದರು.</p><p>‘2024ರಲ್ಲಿ ನಡೆಯುವ ಲೋಕಸಭಾ ಚುನಾವಣೆಗೂ ಈ ರಥಯಾತ್ರೆಗೂ ಸಂಬಂಧ ಇಲ್ಲ’ ಎಂದು ಅವರು ಪ್ರತಿಕ್ರಿಯಿಸಿದರು.</p><p>ಸುದ್ದಿಗೋಷ್ಠಿಯಲ್ಲಿ ಬಜರಂಗದಳದ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಕೆ.ಪುರುಷೋತ್ತಮ, ವಿಭಾಗ ಸಂಯೋಜಕ ಭುಜಂಗ ಕುಲಾಲ್, ಜಿಲ್ಲಾ ಸಂಚಾಲಕ ನವೀನ್ ಮೂಡುಶೆಡ್ಡೆ, ವಿಭಾಗ ಸಹಸಂಚಾಲಕ ಪುನೀತ್ ಅತ್ತಾವರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ‘ಬಿಜೆಪಿ ಟಿಕೆಟ್ ಕೊಡಿಸುವ ನೆಪದಲ್ಲಿ ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಗೆ ವಂಚಿಸಿದ ಪ್ರಕರಣದ ಆರೋಪಿ ಚೈತ್ರಾ ಕುಂದಾಪುರಗೂ ಬಜರಂಗದಳಕ್ಕೂ ಸಂಬಂಧವಿಲ್ಲ. ಆಕೆ ನಮ್ಮ ಸಂಘಟನೆಯ ಸದಸ್ಯೆ ಅಲ್ಲ’ ಎಂದು ವಿಎಚ್ಪಿ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್ವೆಲ್ ಹೇಳಿದರು.</p><p>ಇಲ್ಲಿ ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು, ‘ಆಕೆ ಉತ್ತಮ ಭಾಷಣ ಮಾಡುತ್ತಿದ್ದರು. ಆ ಕಾರಣಕ್ಕೆ ಬಜರಂಗ ದಳದ ಕಾರ್ಯಕ್ರಮಗಳಿಗೆ ಆಹ್ವಾನಿಸಿದ್ದು ನಿಜ. ಅವರು ತಪ್ಪು ಮಾಡಿದ್ದರೆ ಅದಕ್ಕೆ ಶಿಕ್ಷೆ ಆಗಲಿ. ನಮ್ಮ ಸಂಘಟನೆ ಇಂತಹ ಅಕ್ರಮಗಳಿಗೆ ಆಸ್ಪದ ನೀಡುವುದಿಲ್ಲ. ಇಂತಹ ಪ್ರಕರಣಗಳು ಮರುಕಳಿಸಬಾರದು. ಈ ಪ್ರಕರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಅವರನ್ನು ಶಿಕ್ಷೆಗೆ ಒಳಪಡಿಸಬೇಕು’ ಎಂದರು.</p><p>‘ಈ ವಂಚನೆ ಪ್ರಕರಣದ ಬಗ್ಗೆ ಗುರುಪುರ ವಜ್ರದೇಹಿ ಮಠದ ಸ್ವಾಮೀಜಿ ಎರಡು ತಿಂಗಳ ಹಿಂದೆ ನನ್ನ ಗಮನಕ್ಕೆ ತಂದಿದ್ದು ನಿಜ. ನೀವು ತಪ್ಪು ಮಾಡಿಲ್ಲವಾದರೆ ತಲೆಕೆಡಿಸಿಕೊಳ್ಳಬೇಡಿ ಎಂದು ಧೈರ್ಯ ಹೇಳಿದ್ದೆ’ ಎಂದರು.</p><p><strong>ವಿಎಚ್ಪಿಗೆ 60 ವರ್ಷ: ಬಜರಂಗದಳದಿಂದ ಶೌರ್ಯ ಜಾಗರಣ ರಥಯಾತ್ರೆ</strong></p><p>‘ವಿಶ್ವ ಹಿಂದೂ ಪರಿಷತ್ಗೆ 2024ಕ್ಕೆ 60 ವರ್ಷ ತುಂಬಲಿರುವ ಪ್ರಯುಕ್ತ ಬಜರಂಗದಳವು ಇದೇ 25ರಿಂದ ರಾಜ್ಯದಾದ್ಯಂತ 'ಶೌರ್ಯ ಜಾಗರಣ ರಥಯಾತ್ರೆ"ಯನ್ನು ಹಮ್ಮಿಕೊಳ್ಳಲಿದೆ’ ಎಂದು ಶರಣ್ ಪಂಪ್ವೆಲ್ ತಿಳಿಸಿದರು.</p><p>‘ಎರಡೂವರೆ ಸಾವಿರ ವರ್ಷಗಳಿಂದಲೂ ನಮ್ಮ ರಾಷ್ಟ್ರದ ಮೇಲೆ ಪರಕೀಯರಿಂದ ದಾಳಿಗಳು ನಡೆಯುತ್ತಾ ಬಂದಿವೆ. ಅವುಗಳೆಲ್ಲವನ್ನು ಎದುರಿಸಿ ಸನಾತನ ಧರ್ಮವನ್ನು ಸಂರಕ್ಷಿಸುವಲ್ಲಿ ಲಕ್ಷಾಂತರ ವೀರ ಪರಾಕ್ರಮಿಗಳು ಬಲಿದಾನ ಮಾಡಿದ್ದಾರೆ. ಇಂದಿನ ಯುವ ಪೀಳಿಗೆಯು ಈ ಬಲಿದಾನಗಳನ್ನು ಸ್ಮರಿಸುವಂತೆ ಮಾಡಲು ಈ ರಥಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ’ ಎಂದರು.</p><p>‘ರಾಜ್ಯದಲ್ಲಿ ಬಜರಂಗ ದಳದ 2000 ಶಾಖೆಗಳಿವೆ. ಇದನ್ನು 2024ರ ವೇಳೆಗೆ 5 ಸಾವಿರಕ್ಕೆ ಹೆಚ್ಚಿಸುವ ಗುರಿಯನ್ನು ಹೊಂದಿದ್ದೇವೆ. ಪಾಶ್ಚಾತ್ಯ ಸಂಸ್ಕೃತಿಯಿಂದ , ದುಶ್ಚಟಗಳಿಂದ ಮುಕ್ತಿ ಪಡೆದು, ಸ್ವಾವಲಂಬಿ ಬದುಕು ಕಟ್ಟಿಕೊಳ್ಳುವಂತೆ ಯುವಪೀಳಿಗೆಯನ್ನು ಪ್ರೇರೇಪಿಸುವುದೂ ಈ ರಥಯಾತ್ರೆಯ ಉದ್ದೇಶ. ಲವ್ ಜಿಹಾದ್, ಮತಾಂತರ ಹಾಗೂ ಗೋಹತ್ಯೆ ತಡೆಯ ಬಗ್ಗೆಯೂ ಜಾಗೃತಿ ಮೂಡಿಸಲಿದ್ದೇವೆ’ ಎಂದರು.</p><p>‘ಚಿತ್ರದುರ್ಗದಲ್ಲಿ ಇದೇ 25ರಂದು ರಥಯಾತ್ರೆಗೆ ಚಾಲನೆ ನೀಡಲಾಗುತ್ತದೆ. ದಾವಣಗೆರೆ, ಶಿವಮೊಗ್ಗ, ಸಾಗರ, ಶೃಂಗೇರಿ, ಬಾಳೆಹೊನ್ನೂರು, ಚಿಕ್ಕಮಗಳೂರು, ಹಾಸನ, ತುಮಕೂರು, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ಮಂಡ್ಯ, ಮೈಸೂರು, ಕೊಡಗು, ಸುಳ್ಯ, ಪುತ್ತೂರು, ಮಂಗಳೂರು, ಮೂಲಕ ಸಾಗುವ ಈ ಯಾತ್ರೆಯು ಉಡುಪಿಯಲ್ಲಿ ಅ.10ರಂದು ಸಮಾರೋಪಗೊಳ್ಳಲಿದೆ. ಆ ಪ್ರಯುಕ್ತ ಹಿಂದೂ ಸಮಾಜೋತ್ಸವವನ್ನು ಏರ್ಪಡಿಸಲಿದ್ದು, 25 ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆ ಇದೆ’ ಎಂದರು.</p><p>‘ರಥಯಾತ್ರೆಯು ಅ. 6ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯವನ್ನು ಪ್ರವೇಶಿಸಲಿದೆ. ಅ. 7ರಂದು ಪುತ್ತೂರಿನಲ್ಲಿ, ಅ. 9ರಂದು ಮಂಗಳೂರಿನಲ್ಲಿ ಸಾರ್ವಜನಿಕ ಸಭೆಗಳನ್ನು ಏರ್ಪಡಿಸಲಿದ್ದೇವೆ’ ಎಂದು ತಿಳಿಸಿದರು.</p><p>‘2024ರಲ್ಲಿ ನಡೆಯುವ ಲೋಕಸಭಾ ಚುನಾವಣೆಗೂ ಈ ರಥಯಾತ್ರೆಗೂ ಸಂಬಂಧ ಇಲ್ಲ’ ಎಂದು ಅವರು ಪ್ರತಿಕ್ರಿಯಿಸಿದರು.</p><p>ಸುದ್ದಿಗೋಷ್ಠಿಯಲ್ಲಿ ಬಜರಂಗದಳದ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಕೆ.ಪುರುಷೋತ್ತಮ, ವಿಭಾಗ ಸಂಯೋಜಕ ಭುಜಂಗ ಕುಲಾಲ್, ಜಿಲ್ಲಾ ಸಂಚಾಲಕ ನವೀನ್ ಮೂಡುಶೆಡ್ಡೆ, ವಿಭಾಗ ಸಹಸಂಚಾಲಕ ಪುನೀತ್ ಅತ್ತಾವರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>