ವಿಮಾನ ನಿಲ್ದಾಣದಲ್ಲಿ ಬಂದಿಳಿಯುತ್ತಿದ್ದಂತೆಯೇ ಎಲ್ಲರನ್ನೂ ಪ್ರಾಥಮಿಕ ಹಂತದ ತಪಾಸಣೆಗೆ ಒಳಪಡಿಸಲಾಗಿದೆ. ದಕ್ಷಿಣ ಕನ್ನಡ ಹಾಗೂ ಇತರ ಜಿಲ್ಲೆಗಳ ನಿವಾಸಿಗಳನ್ನು ಮಂಗಳೂರು ನಗರದಲ್ಲೇ ಸಾಂಸ್ಥಿಕ ಕ್ವಾರಂಟೈನ್ನಲ್ಲಿ ಇರಿಸಲಾಗಿದೆ. ಉಡುಪಿ ಜಿಲ್ಲೆಯ ನಿವಾಸಿಗಳು ಬಸ್ ಮೂಲಕ ಉಡುಪಿಗೆ ತೆರಳಿದ್ದು, ಅಲ್ಲಿಯೇ ಸಾಂಸ್ಥಿಕ ಕ್ವಾರಂಟೈನ್ ಪೂರೈಸುತ್ತಾರೆ ಎಂದು ಅಂತರರಾಷ್ಟ್ರೀಯ ಪ್ರಯಾಣಿಕರ ಕ್ವಾರಂಟೈನ್ ಉಸ್ತುವಾರಿಯಾಗಿರುವ ಪುತ್ತೂರು ಉಪ ವಿಭಾಗಾಧಿಕಾರಿ ಯತೀಶ್ ಉಳ್ಳಾಲ್ ತಿಳಿಸಿದರು.