ಇಲ್ಲಿ ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದ ಅವರು,‘ಉರ್ವ ಕೆನರಾ ಹೈಸ್ಕೂಲ್ನಲ್ಲಿ ಇದೇ 13ರಂದು ಸಂಜೆ 4ಕ್ಕೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ಜಿ.ಎಲ್ ಹೆಗಡೆ ಕುಮಟಾ, ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪಿ.ಎಸ್. ಯಡಪಡಿತ್ತಾಯ,ಡಾ. ಪ್ರಭಾಕರ ಜೋಷಿ,ಕುಡುಪು ಕೃಷ್ಣರಾಜ ತಂತ್ರಿ ಮತ್ತಿತರರು ಭಾಗವಹಿಸಲಿದ್ದಾರೆ' ಎಂದರು.