ಮಂಗಳೂರು: ಮಂಗಳೂರು– ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್ ಸೋಮವಾರದಿಂದ ಸಂಚಾರಕ್ಕೆ ಮುಕ್ತವಾಗಿದೆ.
‘ಶಿರಾಡಿ ಘಾಟ್ನಲ್ಲಿ 20 ಟನ್ ಭಾರದೊಳಗಿನ ವಾಹನಗಳಿಗೆ ಸಂಚಾರ ಮುಕ್ತವಾಗಿವೆ. ಆದರೆ, ಸಂಚಾರದ ಕುರಿತು ಸೋಮವಾರ ಹಾಸನ ಜಿಲ್ಲಾಧಿಕಾರಿ ಅಧಿಕೃತವಾಗಿ ಸ್ಪಷ್ಟಪಡಿಸಲಿದ್ದಾರೆ’ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಸುದ್ದಿಗಾರರಿಗೆ ತಿಳಿಸಿದ್ದಾರೆ.