ಸಾಮಾನ್ಯ ಸಭೆಯಲ್ಲಿ ನಿರ್ಣಯ ಕೈಗೊಳ್ಳದೆ ತಾವೇ ಗುತ್ತಿಗೆದಾರರನ್ನು ನೇಮಕ ಮಾಡಿಕೊಂಡಿದ್ದಾರೆ, ಏಲಂ ಪ್ರಕ್ರಿಯೆ ನಿಯಮಾನುಸಾರ ನಡೆಸಲಿಲ್ಲ, ಫಲಾನುಭವಿಗಳಿಗೆ ಚೆಕ್ ಮೂಲಕ ಸಹಾಯಧನ ಪಾವತಿಸಿದ್ದಾರೆ, ಕರ್ತವ್ಯಕ್ಕೆ ಸರಿಯಾಗಿ ಹಾಜರಾಗಲಿಲ್ಲ, ಖರೀದಿ ಪ್ರಕ್ರಿಯೆಯಲ್ಲಿ ನಿಯಮ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ವೆಂಕಟೇಶ್ ಅವರನ್ನು ಜೂನ್ 7ರಂದು ಮಂಗಳೂರು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್ ಅಮಾನತುಗೊಳಿಸಿದ್ದರು.