<p><strong>ಉಜಿರೆ/ ಉಪ್ಪಿನಂಗಡಿ</strong>: ಬೆಳ್ತಂಗಡಿ ತಾಲ್ಲೂಕಿನ ಶಿಶಿಲ ಗ್ರಾಮದ ಮತ್ಸ್ಯತೀರ್ಥ ಎಂದು ಪ್ರಸಿದ್ಧವಾದ ಶಿಶಿಲೇಶ್ವರ ದೇವಸ್ಥಾನದ ಬಳಿಯ ಬರ್ಗುಳ ಕಿಂಡಿ ಅಣೆಕಟ್ಟೆ ಪ್ರದೇಶದಲ್ಲಿ ಶುಕ್ರವಾರ ರಾತ್ರಿ ಮೈಲುತುತ್ತ (ಕಾಪರ್ ಸಲ್ಫೇಟ್) ಬಳಸಿ ಅಕ್ರಮವಾಗಿ ಮೀನು ಹಿಡಿಯಲು ಯತ್ನಿಸಿದ್ದು, ಸಾವಿರಾರು ಮೀನುಗಳು ಮೃತಪಟ್ಟಿವೆ.</p>.<p>ಶನಿವಾರ ಸ್ಥಳೀಯರು ನದಿತೀರದಲ್ಲಿ ಓಡಾಡುವ ವೇಳೆ ನೀರಿನಲ್ಲಿ ಸತ್ತು ತೇಲುತ್ತಿದ್ದ ಹಾಗೂ ದಡದಲ್ಲಿ ಸತ್ತು ಬಿದ್ದ ಮೀನುಗಳ ರಾಶಿ ಕಂಡು ಮಾಹಿತಿ ನೀಡಿದ್ದಾರೆ. ನೀರಿಗೆ ರಾಸಾಯನಿಕ ಹಾಕಿದ್ದರಿಂದ ಮೀನುಗಳ ಜೊತೆ ಇತರ ಜಲಚರಗಳೂ ಮೃತಪಟ್ಟಿವೆ.</p>.<p>ಘಟನಾಸ್ಥಳಕ್ಕೆ ಭೇಟಿ ನೀಡಿದ ಸ್ಥಳೀಯ ಪ್ರಮುಖರಾದ ಕರುಣಾಕರ ಶಿಶಿಲ, ಮನೋಜ್, ಉಮೇಶ್, ಲೋಕೇಶ್ ಮತ್ತು ಪುರುಷೋತ್ತಮ, ಘಟನೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ, ಶಿಶಿಲೇಶ್ವರ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಮೀನುಗಾರಿಕಾ ಇಲಾಖೆಗೆ ಮಾಹಿತಿ ನೀಡಿ ತಪ್ಪಿಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದ್ದಾರೆ.</p>.<p>ಶಿಶಿಲೇಶ್ವರ ದೇವಸ್ಥಾನದ ಸುತ್ತ ಮುತ್ತ ಸುಮಾರು ಎರಡು ಕಿ.ಮೀ. ವ್ಯಾಪ್ತಿಯನ್ನು ಮೀನುಗಳ ಸುರಕ್ಷಿತ ವಲಯ ಎಂದು ಪರಿಗಣಿಸಲಾಗಿದ್ದು, ಅಲ್ಲಿ ಮೀನುಗಾರಿಕೆಗೆ ಅವಕಾಶವಿಲ್ಲ. ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡಿ ನೀರಿನ ಮಾದರಿ ಸಂಗ್ರಹಿಸಿ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.</p>.<p>ದೇವರ ಮೀನುಗಳ ಮೇಲೆ ನಿರಂತರವಾಗಿ ನಡೆಯುತ್ತಿರುವ ಇಂಥ ದುಷೃತ್ಯ ಖಂಡನೀಯ. ಈ ರೀತಿಯ ಘಟನೆ ಮರುಕಳಿಸುತ್ತಿರುವುದು ವಿಷಾದನೀಯ. ಮುಜರಾಯಿ ಇಲಾಖೆ ಹಾಗೂ ಮೀನುಗಾರಿಕೆ ಇಲಾಖೆಗಳು ದೇವರ ಮೀನುಗಳ ಸಂರಕ್ಷಣೆಯ ವಿಚಾರದಲ್ಲಿ ಬೇಜವಾಬ್ದಾರಿತನ ತೋರಬಾರದು. ಈ ಕುರಿತು ಕರಪತ್ರ ವಿತರಣೆ, ಸೂಚನಾ ಫಲಕಗಳ ಅಳವಡಿಕೆ, ಭಕ್ತರ ಸಭೆ ಸೇರಿದಂತೆ ಜಾಗೃತಿ ಕಾರ್ಯಕ್ರಮಗಳನ್ನು ನಿರಂತರವಾಗಿ ಹಮ್ಮಿಕೊಳ್ಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಹಿಂದೂ ಸಂಘಟನೆಗಳು ತೀವ್ರ ಪ್ರತಿಭಟನೆ ನಡೆಸುವುದುಅನಿವಾರ್ಯ ವಾಗಬಹುದು ಎಂದು ಜಿಲ್ಲಾ ಧರ್ಮಪ್ರಸಾರ ಪ್ರಮುಖ ಬಿ.ಜಯರಾಮ ನೆಲ್ಲಿತ್ತಾಯ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260531-29-1417304501</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಜಿರೆ/ ಉಪ್ಪಿನಂಗಡಿ</strong>: ಬೆಳ್ತಂಗಡಿ ತಾಲ್ಲೂಕಿನ ಶಿಶಿಲ ಗ್ರಾಮದ ಮತ್ಸ್ಯತೀರ್ಥ ಎಂದು ಪ್ರಸಿದ್ಧವಾದ ಶಿಶಿಲೇಶ್ವರ ದೇವಸ್ಥಾನದ ಬಳಿಯ ಬರ್ಗುಳ ಕಿಂಡಿ ಅಣೆಕಟ್ಟೆ ಪ್ರದೇಶದಲ್ಲಿ ಶುಕ್ರವಾರ ರಾತ್ರಿ ಮೈಲುತುತ್ತ (ಕಾಪರ್ ಸಲ್ಫೇಟ್) ಬಳಸಿ ಅಕ್ರಮವಾಗಿ ಮೀನು ಹಿಡಿಯಲು ಯತ್ನಿಸಿದ್ದು, ಸಾವಿರಾರು ಮೀನುಗಳು ಮೃತಪಟ್ಟಿವೆ.</p>.<p>ಶನಿವಾರ ಸ್ಥಳೀಯರು ನದಿತೀರದಲ್ಲಿ ಓಡಾಡುವ ವೇಳೆ ನೀರಿನಲ್ಲಿ ಸತ್ತು ತೇಲುತ್ತಿದ್ದ ಹಾಗೂ ದಡದಲ್ಲಿ ಸತ್ತು ಬಿದ್ದ ಮೀನುಗಳ ರಾಶಿ ಕಂಡು ಮಾಹಿತಿ ನೀಡಿದ್ದಾರೆ. ನೀರಿಗೆ ರಾಸಾಯನಿಕ ಹಾಕಿದ್ದರಿಂದ ಮೀನುಗಳ ಜೊತೆ ಇತರ ಜಲಚರಗಳೂ ಮೃತಪಟ್ಟಿವೆ.</p>.<p>ಘಟನಾಸ್ಥಳಕ್ಕೆ ಭೇಟಿ ನೀಡಿದ ಸ್ಥಳೀಯ ಪ್ರಮುಖರಾದ ಕರುಣಾಕರ ಶಿಶಿಲ, ಮನೋಜ್, ಉಮೇಶ್, ಲೋಕೇಶ್ ಮತ್ತು ಪುರುಷೋತ್ತಮ, ಘಟನೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ, ಶಿಶಿಲೇಶ್ವರ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಮೀನುಗಾರಿಕಾ ಇಲಾಖೆಗೆ ಮಾಹಿತಿ ನೀಡಿ ತಪ್ಪಿಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದ್ದಾರೆ.</p>.<p>ಶಿಶಿಲೇಶ್ವರ ದೇವಸ್ಥಾನದ ಸುತ್ತ ಮುತ್ತ ಸುಮಾರು ಎರಡು ಕಿ.ಮೀ. ವ್ಯಾಪ್ತಿಯನ್ನು ಮೀನುಗಳ ಸುರಕ್ಷಿತ ವಲಯ ಎಂದು ಪರಿಗಣಿಸಲಾಗಿದ್ದು, ಅಲ್ಲಿ ಮೀನುಗಾರಿಕೆಗೆ ಅವಕಾಶವಿಲ್ಲ. ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡಿ ನೀರಿನ ಮಾದರಿ ಸಂಗ್ರಹಿಸಿ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.</p>.<p>ದೇವರ ಮೀನುಗಳ ಮೇಲೆ ನಿರಂತರವಾಗಿ ನಡೆಯುತ್ತಿರುವ ಇಂಥ ದುಷೃತ್ಯ ಖಂಡನೀಯ. ಈ ರೀತಿಯ ಘಟನೆ ಮರುಕಳಿಸುತ್ತಿರುವುದು ವಿಷಾದನೀಯ. ಮುಜರಾಯಿ ಇಲಾಖೆ ಹಾಗೂ ಮೀನುಗಾರಿಕೆ ಇಲಾಖೆಗಳು ದೇವರ ಮೀನುಗಳ ಸಂರಕ್ಷಣೆಯ ವಿಚಾರದಲ್ಲಿ ಬೇಜವಾಬ್ದಾರಿತನ ತೋರಬಾರದು. ಈ ಕುರಿತು ಕರಪತ್ರ ವಿತರಣೆ, ಸೂಚನಾ ಫಲಕಗಳ ಅಳವಡಿಕೆ, ಭಕ್ತರ ಸಭೆ ಸೇರಿದಂತೆ ಜಾಗೃತಿ ಕಾರ್ಯಕ್ರಮಗಳನ್ನು ನಿರಂತರವಾಗಿ ಹಮ್ಮಿಕೊಳ್ಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಹಿಂದೂ ಸಂಘಟನೆಗಳು ತೀವ್ರ ಪ್ರತಿಭಟನೆ ನಡೆಸುವುದುಅನಿವಾರ್ಯ ವಾಗಬಹುದು ಎಂದು ಜಿಲ್ಲಾ ಧರ್ಮಪ್ರಸಾರ ಪ್ರಮುಖ ಬಿ.ಜಯರಾಮ ನೆಲ್ಲಿತ್ತಾಯ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260531-29-1417304501</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>