<p><strong>ಬಂಟ್ವಾಳ</strong>: ಇಲ್ಲಿನ ವಾಮದಪದವು ಸಮೀಪದ ಅಜ್ಜಿಬೆಟ್ಟು ಗ್ರಾಮದ ಕಾಪು ಗುಡ್ಡ ಪ್ರದೇಶದಲ್ಲಿ ಕೆಲವು ವರ್ಷಗಳ ಹಿಂದೆ ಶಿವಾಲಯದ ಕುರುಹು ಪತ್ತೆಯಾದ ಹಿನ್ನೆಲೆಯಲ್ಲಿ ಸ್ಥಳೀಯ ಭಕ್ತರು ಒಟ್ಟು ಸೇರಿ ಭಜನೆ ನಡೆಸುತ್ತಿದ್ದರು. ಇಲ್ಲಿಗೆ ಸಮೀಪದಲ್ಲೇ ಸೋಮವಾರ ಪುರಾತನ ಶಿವಲಿಂಗ ಪತ್ತೆಯಾಗಿದ್ದು, ಭಕ್ತರಲ್ಲಿ ಸಂತಸಕ್ಕೆ ಕಾರಣವಾಗಿದೆ.</p>.<p>ಈಚೆಗಷ್ಟೇ ನಡೆಸಿದ ಅಷ್ಟಮಂಗಳ ಪ್ರಶ್ನಾ ಚಿಂತನೆಯಲ್ಲಿ ದೇವಸ್ಥಾನ ಹಲವು ವರ್ಷಗಳಿಂದ ಪಾಳು ಬಿದ್ದಿರುವುದು ಭಕ್ತರ ಗಮನಕ್ಕೆ ಬಂದಿತ್ತು. ಇದಕ್ಕಾಗಿ ಸ್ಥಳೀಯ ಪಚ್ಚೇರುಪಲ್ಕೆ ರಾಮಣ್ಣ ಮೂಲ್ಯ ಎಂಬುವರ ಜಮೀನಿನಲ್ಲಿ ಉತ್ಖನನ ನಡೆಸಿದಾಗ ಈ ಶಿವಲಿಂಗ ಪತ್ತೆಯಾಗಿದೆ. ಈ ಸಂದರ್ಭದಲ್ಲಿ ಅಪಾರ ಮಂದಿ ಭಕ್ತರು ಶಿವಲಿಂಗಕ್ಕೆ ಸೀಯಾಳ ಅಭಿಷೇಕ ನಡೆಸಿ ಸಂತಸಪಟ್ಟರು.</p>.<p>ವೇಣೂರು ಅಜಿಲಸೀಮೆ ಮಾಗಣೆಗೆ ಸಂಬಂಧಪಟ್ಟ 4 ಶಿವ ಕ್ಷೇತ್ರಗಳ ಪೈಕಿ ಈ ಶಿವಾಲಯ ಕೂಡಾ ಒಂದು. ಇಲ್ಲಿನ ಅಜ್ಜಿಬೆಟ್ಟು, ಚೆನ್ನೈತ್ತೋಡಿ, ಪಿಲಿಮೊಗರು, ಕುಡಂಬೆಟ್ಟು, ಮೂಡುಪಡುಕೋಡಿ, ಪಿಲಾತಬೆಟ್ಟು, ಇರ್ವತ್ತೂರು ಹೀಗೆ 7 ಗ್ರಾಮಗಳ ಭಕ್ತರ ಆರಾಧನಾ ಕ್ಷೇತ್ರವಾಗಿದೆ ಎಂದು ಪುನರ್ ನಿರ್ಮಾಣ ಸಮಿತಿ ಅಧ್ಯಕ್ಷ ಪ್ರಕಾಶ್ಚಂದ್ರ ಆಳ್ವ ವಾಂಬೆಟ್ಟು ತಿಳಿಸಿದ್ದಾರೆ.</p>.<p>ತಂತ್ರಿ ಶ್ರೀಪಾದ ಪಾಂಗಣ್ಣಾಯ ಮಾರ್ಗದರ್ಶನದಲ್ಲಿ ಶಿವಲಿಂಗಕ್ಕೆ ವಿಶೇಷ ಪೂಜೆ ಸಲ್ಲಿಸಲಾಯಿತು. ಮಾಜಿ ಸಚಿವ ಬಿ.ರಮಾನಾಥ ರೈ ಭೇಟಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಂಟ್ವಾಳ</strong>: ಇಲ್ಲಿನ ವಾಮದಪದವು ಸಮೀಪದ ಅಜ್ಜಿಬೆಟ್ಟು ಗ್ರಾಮದ ಕಾಪು ಗುಡ್ಡ ಪ್ರದೇಶದಲ್ಲಿ ಕೆಲವು ವರ್ಷಗಳ ಹಿಂದೆ ಶಿವಾಲಯದ ಕುರುಹು ಪತ್ತೆಯಾದ ಹಿನ್ನೆಲೆಯಲ್ಲಿ ಸ್ಥಳೀಯ ಭಕ್ತರು ಒಟ್ಟು ಸೇರಿ ಭಜನೆ ನಡೆಸುತ್ತಿದ್ದರು. ಇಲ್ಲಿಗೆ ಸಮೀಪದಲ್ಲೇ ಸೋಮವಾರ ಪುರಾತನ ಶಿವಲಿಂಗ ಪತ್ತೆಯಾಗಿದ್ದು, ಭಕ್ತರಲ್ಲಿ ಸಂತಸಕ್ಕೆ ಕಾರಣವಾಗಿದೆ.</p>.<p>ಈಚೆಗಷ್ಟೇ ನಡೆಸಿದ ಅಷ್ಟಮಂಗಳ ಪ್ರಶ್ನಾ ಚಿಂತನೆಯಲ್ಲಿ ದೇವಸ್ಥಾನ ಹಲವು ವರ್ಷಗಳಿಂದ ಪಾಳು ಬಿದ್ದಿರುವುದು ಭಕ್ತರ ಗಮನಕ್ಕೆ ಬಂದಿತ್ತು. ಇದಕ್ಕಾಗಿ ಸ್ಥಳೀಯ ಪಚ್ಚೇರುಪಲ್ಕೆ ರಾಮಣ್ಣ ಮೂಲ್ಯ ಎಂಬುವರ ಜಮೀನಿನಲ್ಲಿ ಉತ್ಖನನ ನಡೆಸಿದಾಗ ಈ ಶಿವಲಿಂಗ ಪತ್ತೆಯಾಗಿದೆ. ಈ ಸಂದರ್ಭದಲ್ಲಿ ಅಪಾರ ಮಂದಿ ಭಕ್ತರು ಶಿವಲಿಂಗಕ್ಕೆ ಸೀಯಾಳ ಅಭಿಷೇಕ ನಡೆಸಿ ಸಂತಸಪಟ್ಟರು.</p>.<p>ವೇಣೂರು ಅಜಿಲಸೀಮೆ ಮಾಗಣೆಗೆ ಸಂಬಂಧಪಟ್ಟ 4 ಶಿವ ಕ್ಷೇತ್ರಗಳ ಪೈಕಿ ಈ ಶಿವಾಲಯ ಕೂಡಾ ಒಂದು. ಇಲ್ಲಿನ ಅಜ್ಜಿಬೆಟ್ಟು, ಚೆನ್ನೈತ್ತೋಡಿ, ಪಿಲಿಮೊಗರು, ಕುಡಂಬೆಟ್ಟು, ಮೂಡುಪಡುಕೋಡಿ, ಪಿಲಾತಬೆಟ್ಟು, ಇರ್ವತ್ತೂರು ಹೀಗೆ 7 ಗ್ರಾಮಗಳ ಭಕ್ತರ ಆರಾಧನಾ ಕ್ಷೇತ್ರವಾಗಿದೆ ಎಂದು ಪುನರ್ ನಿರ್ಮಾಣ ಸಮಿತಿ ಅಧ್ಯಕ್ಷ ಪ್ರಕಾಶ್ಚಂದ್ರ ಆಳ್ವ ವಾಂಬೆಟ್ಟು ತಿಳಿಸಿದ್ದಾರೆ.</p>.<p>ತಂತ್ರಿ ಶ್ರೀಪಾದ ಪಾಂಗಣ್ಣಾಯ ಮಾರ್ಗದರ್ಶನದಲ್ಲಿ ಶಿವಲಿಂಗಕ್ಕೆ ವಿಶೇಷ ಪೂಜೆ ಸಲ್ಲಿಸಲಾಯಿತು. ಮಾಜಿ ಸಚಿವ ಬಿ.ರಮಾನಾಥ ರೈ ಭೇಟಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>