<p><strong>ಪುತ್ತೂರು:</strong> ಜೀಜಾಬಾಯಿ ಅವರು ಪುತ್ರ ಛತ್ರಪತಿ ಶಿವಾಜಿ ಅವರನ್ನು ಸ್ವಾಭಿಮಾನಿಯನ್ನಾಗಿ ಬೆಳೆಸಿದ್ದರಿಂದ ಶಿವಾಜಿ ಮಹಾರಾಜರಾದರು. ಪೋಷಕರು ಮಕ್ಕಳನ್ನು ಸ್ಪರ್ಧೆಗೆ ಬೆಳೆಸದೆ, ಜವಾಬ್ದಾರಿ ತಿಳಿಸುವ ಮೂಲಕ ತಳ ಮಟ್ಟದ ಮೌಲ್ಯವನ್ನು ನೀಡಿ ಸತ್ಪ್ರಜೆಗಳನ್ನಾಗಿ ರೂಪಿಸಬೇಕು ಎಂದು ಪುತ್ತೂರು ಉಪವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್ ಹೇಳಿದರು.</p>.<p>ಪುತ್ತೂರು ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲ್ಲೂಕು ಕುಲಾಲ ಸಮಾಜ ಸೇವಾ ಸಂಘದ ವತಿಯಿಂದ ಪುತ್ತೂರು ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಛತ್ರಪತಿ ಶಿವಾಜಿ ಜಯಂತಿ, ಸಂತಕವಿ ಸರ್ವಜ್ಞ ಜಯಂತಿಯಲ್ಲಿ ಅವರು ಮಾತನಾಡಿದರು.</p>.<p>ಶಿವಾಜಿ ಮತ್ತು ಸರ್ವಜ್ಞನ ಕುರಿತು ಉಪನ್ಯಾಸ ನೀಡಿದ ನಿವೃತ್ತ ಶಿಕ್ಷಕಿ ಶುಭಲತಾ ಹಾರಾಡಿ, ಕುಂಬಾರ ವಂಶದ ಹೆಮ್ಮೆಯ ಕುಡಿಯಾದ ಸರ್ವಜ್ಞನ ವಚನವು ಮಾಣಿಕ್ಯವಾಗಿದೆ. ಸರ್ವಜ್ಞ ಹೇಳಿರುವಂತೆ ನಮ್ಮೊಳಗಿರುವ ದೇವರನ್ನು ಗುರುತಿಸುವ ಕೆಲಸಆಗಬೇಕು ಎಂದರು.</p>.<p>ಚತುರೋಪಾಯ, ಸಮಯೋಚಿತ ನಿರ್ಧಾರ, ಚಾಣಾಕ್ಷತೆ ಮೈಗೂಡಿಸಿಕೊಂಡಿದ್ದ ಛತ್ರಪತಿ ಶಿವಾಜಿ ರಾಷ್ಟ್ರಪ್ರೇಮ, ಸ್ವಧರ್ಮ ಪ್ರೇಮ ಮತ್ತು ಸ್ವರಾಜ್ಯ ಪ್ರೇಮವನ್ನು ತೋರಿಸಿಕೊಟ್ಟಿದ್ದಾರೆ ಎಂದರು.</p>.<p>ಪುತ್ತೂರು ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷ, ತಹಶೀಲ್ದಾರ್ ಪುರಂದರ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. </p>.<p>ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ನವೀನ್ಕುಮಾರ್ ಭಂಡಾರಿ, ಪುತ್ತೂರು ತಾಲ್ಲೂಕು ಕುಲಾಲ ಸಮಾಜ ಸೇವಾ ಸಂಘದ ಅಧ್ಯಕ್ಷ ಸೇಸಪ್ಪ ಕುಲಾಲ್ ಭಾಗವಹಿಸಿದ್ದರು.</p>.<p>ತಾಲ್ಲೂಕು ಕಚೇರಿಯ ಸಿಬ್ಬಂದಿ ದಯಾನಂದ ಸ್ವಾಗತಿಸಿ, ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುತ್ತೂರು:</strong> ಜೀಜಾಬಾಯಿ ಅವರು ಪುತ್ರ ಛತ್ರಪತಿ ಶಿವಾಜಿ ಅವರನ್ನು ಸ್ವಾಭಿಮಾನಿಯನ್ನಾಗಿ ಬೆಳೆಸಿದ್ದರಿಂದ ಶಿವಾಜಿ ಮಹಾರಾಜರಾದರು. ಪೋಷಕರು ಮಕ್ಕಳನ್ನು ಸ್ಪರ್ಧೆಗೆ ಬೆಳೆಸದೆ, ಜವಾಬ್ದಾರಿ ತಿಳಿಸುವ ಮೂಲಕ ತಳ ಮಟ್ಟದ ಮೌಲ್ಯವನ್ನು ನೀಡಿ ಸತ್ಪ್ರಜೆಗಳನ್ನಾಗಿ ರೂಪಿಸಬೇಕು ಎಂದು ಪುತ್ತೂರು ಉಪವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್ ಹೇಳಿದರು.</p>.<p>ಪುತ್ತೂರು ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲ್ಲೂಕು ಕುಲಾಲ ಸಮಾಜ ಸೇವಾ ಸಂಘದ ವತಿಯಿಂದ ಪುತ್ತೂರು ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಛತ್ರಪತಿ ಶಿವಾಜಿ ಜಯಂತಿ, ಸಂತಕವಿ ಸರ್ವಜ್ಞ ಜಯಂತಿಯಲ್ಲಿ ಅವರು ಮಾತನಾಡಿದರು.</p>.<p>ಶಿವಾಜಿ ಮತ್ತು ಸರ್ವಜ್ಞನ ಕುರಿತು ಉಪನ್ಯಾಸ ನೀಡಿದ ನಿವೃತ್ತ ಶಿಕ್ಷಕಿ ಶುಭಲತಾ ಹಾರಾಡಿ, ಕುಂಬಾರ ವಂಶದ ಹೆಮ್ಮೆಯ ಕುಡಿಯಾದ ಸರ್ವಜ್ಞನ ವಚನವು ಮಾಣಿಕ್ಯವಾಗಿದೆ. ಸರ್ವಜ್ಞ ಹೇಳಿರುವಂತೆ ನಮ್ಮೊಳಗಿರುವ ದೇವರನ್ನು ಗುರುತಿಸುವ ಕೆಲಸಆಗಬೇಕು ಎಂದರು.</p>.<p>ಚತುರೋಪಾಯ, ಸಮಯೋಚಿತ ನಿರ್ಧಾರ, ಚಾಣಾಕ್ಷತೆ ಮೈಗೂಡಿಸಿಕೊಂಡಿದ್ದ ಛತ್ರಪತಿ ಶಿವಾಜಿ ರಾಷ್ಟ್ರಪ್ರೇಮ, ಸ್ವಧರ್ಮ ಪ್ರೇಮ ಮತ್ತು ಸ್ವರಾಜ್ಯ ಪ್ರೇಮವನ್ನು ತೋರಿಸಿಕೊಟ್ಟಿದ್ದಾರೆ ಎಂದರು.</p>.<p>ಪುತ್ತೂರು ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷ, ತಹಶೀಲ್ದಾರ್ ಪುರಂದರ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. </p>.<p>ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ನವೀನ್ಕುಮಾರ್ ಭಂಡಾರಿ, ಪುತ್ತೂರು ತಾಲ್ಲೂಕು ಕುಲಾಲ ಸಮಾಜ ಸೇವಾ ಸಂಘದ ಅಧ್ಯಕ್ಷ ಸೇಸಪ್ಪ ಕುಲಾಲ್ ಭಾಗವಹಿಸಿದ್ದರು.</p>.<p>ತಾಲ್ಲೂಕು ಕಚೇರಿಯ ಸಿಬ್ಬಂದಿ ದಯಾನಂದ ಸ್ವಾಗತಿಸಿ, ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>