ಈ ವೇಳೆ ಅವರು ಪತಿ, ಪುತ್ರನನ್ನು ಕರೆಸಿದ್ದರು. ಅಶ್ರಫ್, ಚಂದ್ರಹಾಸ, ರಾಜೇಶ್ ಪ್ರಭು, ಸುಧೀಂದ್ರ ಪ್ರಭು ನಡುವೆ ಮಾತಿನ ಚಕಮಕಿ ನಡೆದು ವಾಗ್ವಾದಕ್ಕೆ ಕಾರಣವಾಗಿತ್ತು. ತಳ್ಳಾಟದ ವೇಳೆ ರಾಜೇಶ್ ಎರಡು ಸುತ್ತಿನ ಗುಂಡು ಹಾರಿಸಿದ್ದು, ಅಶ್ರಫ್, ಚಂದ್ರಹಾಸರತ್ತ ಹಾರಿಸಿದ್ದ ಗುಂಡು ಮಗ ಸುಧೀಂದ್ರನ ಎಡಗಣ್ಣಿನ ಪಕ್ಕ ಹಾದು, ತಲೆಯ ಒಳಭಾಗದಲ್ಲಿ ಹೊಕ್ಕಿತ್ತು.