ಪುತ್ತೂರು: ಸರ್ಕಾರದ ಕೋವಿಡ್ ನಿಯಮಾವಳಿಯಿಂದ ಈಗಾಗಲೇ ಉದ್ಯಮ ಕ್ಷೇತ್ರ ಸಂಕಷ್ಟಕ್ಕೆ ಸಿಲುಕಿದ್ದು, ರಾತ್ರಿ ಕರ್ಫ್ಯೂ ಹಾಗೂ ವಾರಾಂತ್ಯ ಕರ್ಫ್ಯೂ ರದ್ದುಗೊಳಿಸುವಂತೆ ಆಗ್ರಹಿಸಿ ಪುತ್ತೂರು, ನೆಲ್ಯಾಡಿ, ಕಡಬ, ಕುಂಬ್ರ, ಕೆಯ್ಯೂರು, ತಿಂಗಳಾಡಿ ಹಾಗೂ ಈಶ್ವರಮಂಗಲದ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ಜಿಲ್ಲಾಧಿಕಾರಿ ಭೇಟಿ ಮಾಡಿ ಮನವಿ ಸಲ್ಲಿಸಲಾಗುವುದು ಎಂದು ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಜೋನ್ ಕುಟಿನ್ಹಾ ತಿಳಿಸಿದರು.