ಈ ಕುರಿತು ಇಲ್ಲಿ ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಮಾಹಿತಿ ನೀಡಿದ ತಂಡದ ಅಭಿಷೇಕ್ ಶೆಟ್ಟಿ, ‘ಸಮಾಜದ ನರನಾಡಿಯಂತಿರುವ ಶ್ರಮಿಕ ವರ್ಗವಿದೆ. ಅವರ ಸೇವೆಯಿಲ್ಲದ ಸಮಾಜವನ್ನು ಊಹಿಸಲು ಸಾಧ್ಯವಿಲ್ಲ. ಸ್ವಚ್ಛತಾ ಕರ್ಮಿ, ಲೈನ್ ಮ್ಯಾನ್, ಅಂಚೆ ಬಡವಾಡೆ ಮಾಡುವವರು, ಸಾರಿಗೆ ಸಿಬ್ಬಂದಿ, ಸಂಚಾರ ಪೊಲೀಸರು, ಆರೋಗ್ಯ, ಕಾರ್ಯಕರ್ತರು, ಸ್ಮಶಾನದ ಕಾರ್ಮಿಕರು... ಮೊದಲಾದ ಶ್ರಮಿಕ ವರ್ಗದವರನ್ನು ಗುರುತಿಸಿ ಅವರ ಸೇವೆಯ ಮೌಲ್ಯವನ್ನು ಗೌರವಿಸಲು ಈ ಕಾರ್ಯಕ್ರಮ ಆಯೋಜಿಸಿದ್ದೇವೆ. ಅವರೇ ಸಾಂಸ್ಕೃತಿಕ ಕಾರ್ಯಕ್ರಮವನ್ನು ಪ್ರಸ್ತುತಪಡಿಸುವ ವಿನೂತನ ಕಲ್ಪನೆ ಇದು’ ಎಂದರು.