ಬಂಟ್ವಾಳ ಪುರಸಭೆಯ ಸದಸ್ಯರಾದ ಲುಕ್ಮಾನ್, ಮೂನಿಶ್ ಅಲಿ ಅಹ್ಮದ್, ಕೆಪಿಸಿ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮತ್ತು ಎಐಸಿಸಿ ಸಾಮಾಜಿಕ ಮಾಧ್ಯಮ ವಿಭಾಗದ ಸಂಚಾಲಕಿ ಲಾವಣ್ಯಾ ಬಲ್ಲಾಳ್ ಡಿ.26ರಂದು ಆಯೋಗಕ್ಕೆ ದೂರು ಸಲ್ಲಿಸಿದ್ದರು. ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾದ ನ್ಯಾಯಮೂರ್ತಿ ಡಿ.ಎಚ್.ವಘೇಲಾ, ಸದಸ್ಯರಾದ ಕೆ.ಬಿ.ಚಂಗಪ್ಪ ಮತ್ತು ರೂಪಕ್ ಕುಮಾರ್ ದತ್ತ ಅವರನ್ನೊಳಗೊಂಡ ಪೂರ್ಣ ಪೀಠದಲ್ಲಿ ಮಂಗಳವಾರ ವಿಚಾರಣೆ ನಡೆಯಿತು.