ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪದ್ಯಾಣ ಗೋವಿಂದ ಭಟ್ಟರಿಗೆ ‘ಶ್ರೀ ಕದ್ರಿ’ ಪ್ರಶಸ್ತಿ ಪ್ರದಾನ

Last Updated 3 ಜನವರಿ 2021, 2:37 IST
ಅಕ್ಷರ ಗಾತ್ರ

ಮಂಗಳೂರು: ಕದ್ರಿ ದೇವಸ್ಥಾನ ಬಳಿಯ ಮಂಜುನಾಥ ಕಾಲೊನಿಯ ಬಯಲಿನಲ್ಲಿ ನಡೆದ ಸಮಾರಂಭದಲ್ಲಿ ಕಟೀಲು ಮೇಳದ ಪ್ರಧಾನ ಭಾಗವತ ಪದ್ಯಾಣ ಗೋವಿಂದ ಭಟ್ ಅವರಿಗೆ ‘ಶ್ರೀ ಕದ್ರಿ’ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಬಾಲಯಕ್ಷಕೂಟದ ಸಂಸ್ಥಾಪಕ ಕದ್ರಿ ರಾಮಚಂದ್ರ ಭಟ್ ಎಲ್ಲೂರು ಅಭಿನಂದನಾ ಭಾಷಣ ಮಾಡಿ, ‘ಪದ್ಯಾಣ ಪರಂಪರೆಯ ಗೋವಿಂದ ಭಟ್ಟರು ಯಕ್ಷಗಾನ ಸೇವೆಯನ್ನು ಶ್ರದ್ಧೆ ಮತ್ತು ಪ್ರಾಮಾಣಿಕತೆಯಿಂದ ಮಾಡುತ್ತಿದ್ದಾರೆ. ಮೂರು ದಶಕದ ಅನುಭವ ಇದ್ದರೂ, ಬೀಗದೆ, ಬಾಗಿ ಬೆಳಗುತ್ತಿರುವ ಪದ್ಯಾಣರು ಕಲಾವಿದರಿಗೆ ಮಾದರಿ’ ಎಂದರು.

ಪಾಲಿಕೆ ಸದಸ್ಯರಾದ ಮನೋಹರ ಶೆಟ್ಟಿ ಕದ್ರಿ, ಶಕಿಲಾ ಕಾವ, ಯಕ್ಷಬೋಧಿನಿ ಟ್ರಸ್ಟಿನ ಟ್ರಸ್ಟಿ ರವಿರಾಜ ಆಚಾರ್ಯ, ಉದ್ಯಮಿ ಕುಂಜತ್ತೋಡಿ ವಾಸುದೇವ ಭಟ್ ಕದ್ರಿ, ದೀಪಾ. ಕೆ.ಎಸ್., ಋತ್ವಿಕ್ ಅಲೆವೂರಾಯ, ಸಂಹಿತಾ ಅಲೆವೂರಾಯ ಇದ್ದರು. ದೀಪಾ ಕೆ.ಎಸ್. ಸನ್ಮಾನ ಪತ್ರ ವಾಚಿಸಿದರು. ಪತ್ರಕರ್ತರ ಸಂಘದ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ನಿರೂಪಿಸಿ, ವಂದಿಸಿದರು.

ಕಟೀಲ್ ಭೇಟಿ: ಕುಂಜತ್ತೋಡಿ ಕುಟುಂಬದವರ ಕಟೀಲು ಮೇಳದ 11ನೇ ವರ್ಷದ ಸೇವೆಯಾಟವಾಗಿ ‘ಶ್ರೀದೇವಿ ಲಲಿತೋಪಖ್ಯಾನ’ ನಡೆಯಿತು.

ಸಂಸದ ನಳಿನ್‌ಕುಮಾರ್ ಕಟೀಲ್, ಕಟೀಲು ಕ್ಷೇತ್ರದ ಆನುವಂಶಿಕ ಅರ್ಚಕ ಲಕ್ಷ್ಮೀನಾರಾಯಣ ಆಸ್ರಣ್ಣ, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಗಿರಿಪ್ರಕಾಶ್ ತಂತ್ರಿ, ವಿಪ್ರ ಸಮಾಗಮ ವೇದಿಕೆಯ ಅಧ್ಯಕ್ಷ ಪಿ.ರಾಮಕೃಷ್ಣ ರಾವ್ ಭೇಟಿ ನೀಡಿ, ಚೌಕಿಯಲ್ಲಿ ದೇವರ ದರ್ಶನ ಪಡೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT