ಮುಖ್ಯ ಅತಿಥಿಯಾಗಿದ್ದ ಸಹ ಕುಲಾಧಿಪತಿ ಡಾ. ಎ. ಶ್ರೀನಿವಾಸ್ ರಾವ್ ಮಾತನಾಡಿ, ‘ವಿದ್ಯಾರ್ಥಿಗಳಿಗೆ ನಿಜ ಜೀವನದಲ್ಲಿ ಹಾಗೂ ಸಾಮಾಜಿಕವಾಗಿ ಬೇಕಾಗಿರುವ ಅಂಶಗಳು ವಿಶ್ವವಿದ್ಯಾಲಯದ ಪಠ್ಯಕ್ರಮದಲ್ಲಿ ಅಳವಡಿಸಲಾಗಿದೆ’ ಎಂದರು. ಕುಲಪತಿ ಡಾ. ಪಿ. ಎಸ್ ಐತಾಳ್, ಶ್ರೀನಿವಾಸ್ ವಿಶ್ವವಿದ್ಯಾಲಯವು ವಿದ್ಯಾರ್ಥಿಗಳನ್ನು ಮುಂದಿನ ಸಮಾಜಕ್ಕಾಗಿ ರೂಪಿಸುತ್ತಿದೆ ಎಂದರು. ವಿದ್ಯಾರ್ಥಿಗಳಿಗೆ ಪ್ರಮಾಣವಚನ ಬೋಧಿಸಲಾಯಿತು.