ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ನಡುವೆ ತಿಕ್ಕಾಟ ಹೆಚ್ಚಾಗಿದ್ದು, ಶಾಸಕರು ಅತಂತ್ರರಾಗಿದ್ದಾರೆ. ಅಂತಹ 15 ಶಾಸಕರು ನಮ್ಮ ಸಂಪರ್ಕದಲ್ಲಿದ್ದು, ಬಿಜೆಪಿ ಕದ ತಟ್ಟುತ್ತಿದ್ದಾರೆ. ಡಿಜೆ ಹಳ್ಳಿ ಗಲಭೆಯೇ ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರ ನಡುವಿನ ಆಂತರಿಕ ಜಗ್ಗಾಟಕ್ಕೆ ಸಾಕ್ಷಿ. ಅಖಂಡ ಶ್ರೀನೀವಾಸ ಅವರು ಸಿದ್ದರಾಮಯ್ಯ ಬೆಂಬಲಿಗರು. ಸಂಪತ್ ರಾಜ್ ಅವರು ಡಿ.ಕೆ.ಶಿವಕುಮಾರ್ ಬೆಂಬಲಿಗರು ಎಂದರು.